AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿದ ವೈಭವ್ ಸೂರ್ಯವಂಶಿ

South Africa U19 vs India U19, 2nd Youth ODI: ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಅದು ಕೂಡ ವೈಭವ್ ಸೂರ್ಯವಂಶಿಯ ಸಿಡಲಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Jan 06, 2026 | 7:26 AM

Share
ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿಯ (Vaibhav suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿದಿರುವುದು ಅಂಡರ್-19 ಏಕದಿನ ಪಂದ್ಯದಲ್ಲಿ ಎಂಬುದಷ್ಟೇ ವ್ಯತ್ಯಾಸ. ಅದು ಕೂಡ ಕೇವಲ 24 ಎಸೆತಗಳಲ್ಲಿ 10 ಸಿಕ್ಸರ್​ ಸಿಡಿಸುವ ಮೂಲಕ ಎಂಬುದೇ ವಿಶೇಷ.

ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿಯ (Vaibhav suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿದಿರುವುದು ಅಂಡರ್-19 ಏಕದಿನ ಪಂದ್ಯದಲ್ಲಿ ಎಂಬುದಷ್ಟೇ ವ್ಯತ್ಯಾಸ. ಅದು ಕೂಡ ಕೇವಲ 24 ಎಸೆತಗಳಲ್ಲಿ 10 ಸಿಕ್ಸರ್​ ಸಿಡಿಸುವ ಮೂಲಕ ಎಂಬುದೇ ವಿಶೇಷ.

1 / 5
ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಯೂತ್ ಒಡಿಐ ಸರಣಿಯ ಎರಡನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 49.3 ಓವರ್​ಗಳಲ್ಲಿ 245 ರನ್​ ಕಲೆಹಾಕಿತು.

ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಯೂತ್ ಒಡಿಐ ಸರಣಿಯ ಎರಡನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 49.3 ಓವರ್​ಗಳಲ್ಲಿ 245 ರನ್​ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಲಾರಂಭಿಸಿದ ಯುವ ದಾಂಡಿಗ 5 ಓವರ್​ಗಳ ಒಳಗೆಯೇ 6 ಸಿಕ್ಸರ್​ ಸಿಡಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಲಾರಂಭಿಸಿದ ಯುವ ದಾಂಡಿಗ 5 ಓವರ್​ಗಳ ಒಳಗೆಯೇ 6 ಸಿಕ್ಸರ್​ ಸಿಡಿಸಿದ್ದರು.

3 / 5
ಈ ಸಿಕ್ಸರ್​ಗಳೊಂದಿಗೆ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಕೂಡ ಸಿಕ್ಸರ್​ಗಳ ಸುರಿಮಳೆಗೈದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್​ ಹಾಗೂ 1 ಆಕರ್ಷಕ ಫೋರ್​​ನೊಂದಿಗೆ 68 ರನ್ ಬಾರಿಸಿ ಔಟಾದರು.

ಈ ಸಿಕ್ಸರ್​ಗಳೊಂದಿಗೆ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಕೂಡ ಸಿಕ್ಸರ್​ಗಳ ಸುರಿಮಳೆಗೈದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್​ ಹಾಗೂ 1 ಆಕರ್ಷಕ ಫೋರ್​​ನೊಂದಿಗೆ 68 ರನ್ ಬಾರಿಸಿ ಔಟಾದರು.

4 / 5
ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್​ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ಗಳಿಸಿ ನಿಗದಿತ ಗುರಿಗಿಂತ ಮುಂದಿದ್ದರಿಂದ ಟೀಮ್ ಇಂಡಿಯಾವನ್ನು 8 ವಿಕೆಟ್​ಗಳ ವಿಜಯಿ ಎಂದು ಘೋಷಿಸಲಾಯಿತು.

ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್​ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ಗಳಿಸಿ ನಿಗದಿತ ಗುರಿಗಿಂತ ಮುಂದಿದ್ದರಿಂದ ಟೀಮ್ ಇಂಡಿಯಾವನ್ನು 8 ವಿಕೆಟ್​ಗಳ ವಿಜಯಿ ಎಂದು ಘೋಷಿಸಲಾಯಿತು.

5 / 5
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ