AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರ ಸಿಡಿಲಬ್ಬರ… ವೈಭವ್ ಸೂರ್ಯವಂಶಿ ಶರವೇಗದ ಶತಕ

Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಭಾರತ ಎ ಪರ 32 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು. ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲೂ ಸೆಂಚುರಿ ಸಿಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 02, 2025 | 1:02 PM

Share
ಟಿ20 ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಮತ್ತೊಂದು ಶತಕ ಬಾರಿಸಿದ್ದಾರೆ. ಈ ಬಾರಿ ಯುವ ದಾಂಡಿಗ ಶತಕ ಮೂಡಿಬಂದಿದ್ದು ದೇಶೀಯ ಅಂಗಳದಲ್ಲಿ ಎಂಬುದು ವಿಶೇಷ.

ಟಿ20 ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಮತ್ತೊಂದು ಶತಕ ಬಾರಿಸಿದ್ದಾರೆ. ಈ ಬಾರಿ ಯುವ ದಾಂಡಿಗ ಶತಕ ಮೂಡಿಬಂದಿದ್ದು ದೇಶೀಯ ಅಂಗಳದಲ್ಲಿ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಹಾರಾಷ್ಟ್ರ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹಾರಾಷ್ಟ್ರ ತಂಡದ ನಾಯಕ ಪೃಥ್ವಿ ಶಾ ಬೌಲಿಂಗ್ ಆಯ್ದುಕೊಂಡಿದ್ದರು.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಹಾರಾಷ್ಟ್ರ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹಾರಾಷ್ಟ್ರ ತಂಡದ ನಾಯಕ ಪೃಥ್ವಿ ಶಾ ಬೌಲಿಂಗ್ ಆಯ್ದುಕೊಂಡಿದ್ದರು.

2 / 5
ಅದರಂತೆ ಬಿಹಾರ ಪರ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಂತೆ ಅರ್ಧಶತಕ ಪೂರೈಸಲು 34 ಎಸೆತಗಳನ್ನು ತೆಗೆದುಕೊಂಡಿದ್ದರು. ಆದರೆ ಹಾಫ್ ಸೆಂಚುರಿ ಪೂರ್ಣಗೊಂಡ ಬೆನ್ನಲ್ಲೇ ಯುವ ದಾಂಡಿಗನ ಅಬ್ಬರ ಶುರುವಾಗಿತ್ತು.

ಅದರಂತೆ ಬಿಹಾರ ಪರ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಂತೆ ಅರ್ಧಶತಕ ಪೂರೈಸಲು 34 ಎಸೆತಗಳನ್ನು ತೆಗೆದುಕೊಂಡಿದ್ದರು. ಆದರೆ ಹಾಫ್ ಸೆಂಚುರಿ ಪೂರ್ಣಗೊಂಡ ಬೆನ್ನಲ್ಲೇ ಯುವ ದಾಂಡಿಗನ ಅಬ್ಬರ ಶುರುವಾಗಿತ್ತು.

3 / 5
ಮಹಾರಾಷ್ಟ್ರ ತಂಡದ ಅನುಭವಿ ಬೌಲರ್​ಗಳನ್ನು ಮನಸೋ ಇಚ್ಚೆ ದಂಡಿಸಿದ ವೈಭವ್ ಸೂರ್ಯವಂಶಿ 58 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಯುವ ದಾಂಡಿಗ 7 ಭರ್ಜರಿ ಸಿಕ್ಸ್, 7 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ವೈಭವ್ ಸೂರ್ಯವಂಶಿ ಬಾರಿಸಿದ ಈ ಶತಕದ ನೆರವಿನೊಂದಿಗೆ ಬಿಹಾರ ತಂಡ 20 ಓವರ್​ಗಳಲ್ಲಿ 176 ರನ್ ಕಲೆಹಾಕಿದೆ.

ಮಹಾರಾಷ್ಟ್ರ ತಂಡದ ಅನುಭವಿ ಬೌಲರ್​ಗಳನ್ನು ಮನಸೋ ಇಚ್ಚೆ ದಂಡಿಸಿದ ವೈಭವ್ ಸೂರ್ಯವಂಶಿ 58 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಯುವ ದಾಂಡಿಗ 7 ಭರ್ಜರಿ ಸಿಕ್ಸ್, 7 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ವೈಭವ್ ಸೂರ್ಯವಂಶಿ ಬಾರಿಸಿದ ಈ ಶತಕದ ನೆರವಿನೊಂದಿಗೆ ಬಿಹಾರ ತಂಡ 20 ಓವರ್​ಗಳಲ್ಲಿ 176 ರನ್ ಕಲೆಹಾಕಿದೆ.

4 / 5
ಇದಕ್ಕೂ ಮುನ್ನ ರೈಸಿಂಗ್ ಸ್ಟಾರ್ಸ್​ ಏಷ್ಯಾಕಪ್ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 32 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಯುಎಇ ವಿರುದ್ಧದ  ಈ ಪಂದ್ಯದಲ್ಲಿ ಕೇವಲ 42 ಎಸೆತಗಳನ್ನು ಎದುರಿಸಿದ ವೈಭವ್ ಅಂತಿಮವಾಗಿ 15 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 144 ರನ್ ಚಚ್ಚಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ವೈಭವ್ ಬ್ಯಾಟ್​ನಿಂದ ಸಿಡಿಲಬ್ಬರದ ಸೆಂಚುರಿ ಮೂಡಿಬಂದಿದೆ.

ಇದಕ್ಕೂ ಮುನ್ನ ರೈಸಿಂಗ್ ಸ್ಟಾರ್ಸ್​ ಏಷ್ಯಾಕಪ್ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 32 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಯುಎಇ ವಿರುದ್ಧದ  ಈ ಪಂದ್ಯದಲ್ಲಿ ಕೇವಲ 42 ಎಸೆತಗಳನ್ನು ಎದುರಿಸಿದ ವೈಭವ್ ಅಂತಿಮವಾಗಿ 15 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 144 ರನ್ ಚಚ್ಚಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ವೈಭವ್ ಬ್ಯಾಟ್​ನಿಂದ ಸಿಡಿಲಬ್ಬರದ ಸೆಂಚುರಿ ಮೂಡಿಬಂದಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ