AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಭರ್ಜರಿ ಸಿಕ್ಸ್​: ಶರವೇಗದ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ

Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಭಾರತ ಎ ಪರ ಕೂಡ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 14, 2025 | 8:31 PM

Share
ಚುಟುಕು ಕ್ರಿಕೆಟ್​​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಅದು ಕೂಡ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ 14 ವರ್ಷದ ಯುವ ದಾಂಡಿಗ ಹಲವು ದಾಖಲೆಗಳನ್ನು ಸಹ ನಿರ್ಮಿಸಿದ್ದಾರೆ.

ಚುಟುಕು ಕ್ರಿಕೆಟ್​​ನಲ್ಲಿ ವೈಭವ್ ಸೂರ್ಯವಂಶಿಯ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಅದು ಕೂಡ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ 14 ವರ್ಷದ ಯುವ ದಾಂಡಿಗ ಹಲವು ದಾಖಲೆಗಳನ್ನು ಸಹ ನಿರ್ಮಿಸಿದ್ದಾರೆ.

1 / 7
ದೋಹಾದಲ್ಲಿ ನಡೆದ ಏಷ್ಯಾಕಪ್ ರೈಸಿಂಗ್ ಸ್ಟಾರ್ ಟೂರ್ನಿಯ 2ನೇ ಪಂದ್ಯದಲ್ಲಿ ಭಾರತ ಎ ಹಾಗೂ ಯುಎಇ ಎ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ದೋಹಾದಲ್ಲಿ ನಡೆದ ಏಷ್ಯಾಕಪ್ ರೈಸಿಂಗ್ ಸ್ಟಾರ್ ಟೂರ್ನಿಯ 2ನೇ ಪಂದ್ಯದಲ್ಲಿ ಭಾರತ ಎ ಹಾಗೂ ಯುಎಇ ಎ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

2 / 7
ಮೊದಲ ಓವರ್​​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಶತಕ ಪೂರೈಸಲು ತೆಗೆದುಕೊಂಡಿದ್ದು ಕೇವಲ 15 ಎಸೆತಗಳನ್ನು ಮಾತ್ರ. ಅಂದರೆ 32 ಎಸೆತಗಳಲ್ಲಿ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದರು.

ಮೊದಲ ಓವರ್​​ನಿಂದಲೇ ಅಬ್ಬರಿಸಲಾರಂಭಿಸಿದ ವೈಭವ್ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಶತಕ ಪೂರೈಸಲು ತೆಗೆದುಕೊಂಡಿದ್ದು ಕೇವಲ 15 ಎಸೆತಗಳನ್ನು ಮಾತ್ರ. ಅಂದರೆ 32 ಎಸೆತಗಳಲ್ಲಿ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದರು.

3 / 7
ಈ ಶತಕದೊಂದಿಗೆ ರಾಷ್ಟ್ರೀಯ ಟಿ20 ಟೂರ್ನಿಯಲ್ಲಿ ಸೆಂಚುರಿ ಸಿಡಿಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡರು. ಅಷ್ಟೇ ಅಲ್ಲದೆ ಟಿ20 ಪಂದ್ಯದಲ್ಲಿ ಅತೀ ವೇಗದ ಸೆಂಚುರಿ ಬಾರಿಸಿದ ಅತೀ ಕಡಿಮೆ ವಯಸ್ಸಿನ ಆಟಗಾರ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡರು.

ಈ ಶತಕದೊಂದಿಗೆ ರಾಷ್ಟ್ರೀಯ ಟಿ20 ಟೂರ್ನಿಯಲ್ಲಿ ಸೆಂಚುರಿ ಸಿಡಿಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡರು. ಅಷ್ಟೇ ಅಲ್ಲದೆ ಟಿ20 ಪಂದ್ಯದಲ್ಲಿ ಅತೀ ವೇಗದ ಸೆಂಚುರಿ ಬಾರಿಸಿದ ಅತೀ ಕಡಿಮೆ ವಯಸ್ಸಿನ ಆಟಗಾರ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡರು.

4 / 7
ಇದಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಸೆಂಚುರಿ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ (28), ಉರ್ವಿಲ್ ಪಟೇಲ್ (28) ಹಾಗೂ ರಿಷಭ್ ಪಂತ್ (32) ಬಳಿಕ ಟಿ20 ಪಂದ್ಯದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಭಾರತದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಸೆಂಚುರಿ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ (28), ಉರ್ವಿಲ್ ಪಟೇಲ್ (28) ಹಾಗೂ ರಿಷಭ್ ಪಂತ್ (32) ಬಳಿಕ ಟಿ20 ಪಂದ್ಯದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಭಾರತದ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

5 / 7
ಇನ್ನು ಈ ಪಂದ್ಯದಲ್ಲಿ ಕೇವಲ 42 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 15 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 144 ರನ್ ಚಚ್ಚಿದರು. ಈ ಸ್ಫೋಟಕ ಸೆಂಚುರಿಯೊಂದಿಗೆ ಭಾರತ ಎ ತಂಡ 20 ಓವರ್​ಗಳಲ್ಲಿ 297 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ಎ ತಂಡವು 20 ಓವರ್​ಗಳಲ್ಲಿ 149 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ಎ ತಂಡವು 148 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಕೇವಲ 42 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 15 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 144 ರನ್ ಚಚ್ಚಿದರು. ಈ ಸ್ಫೋಟಕ ಸೆಂಚುರಿಯೊಂದಿಗೆ ಭಾರತ ಎ ತಂಡ 20 ಓವರ್​ಗಳಲ್ಲಿ 297 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಯುಎಇ ಎ ತಂಡವು 20 ಓವರ್​ಗಳಲ್ಲಿ 149 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ಎ ತಂಡವು 148 ರನ್​ಗಳ ಭರ್ಜರಿ ಜಯ ಸಾಧಿಸಿದೆ.

6 / 7
ಇತ್ತ ಸ್ಫೋಟಕ ಸೆಂಚುರಿ ಸಿಡಿಸಿದ ವೈಭವ್ ಸೂರ್ಯವಂಶಿ ಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಭಾರತ ಎ ಪರ ಕಣಕ್ಕಿಳಿದ ಮೊದಲ ಟಿ20 ಪಂದ್ಯದಲ್ಲೇ ವೈಭವ್ ತನ್ನ ವೈಭವೋಪೇತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಈ ವಿಸ್ಫೋಟಕ ಬ್ಯಾಟಿಂಗ್​​ನೊಂದಿಗೆ ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಎಂಟ್ರಿ ಕೊಡುವ ತನ್ನ ಪ್ರಯತ್ನವನ್ನು ಮುಂದುವರೆಸಿದ್ದಾರೆ.

ಇತ್ತ ಸ್ಫೋಟಕ ಸೆಂಚುರಿ ಸಿಡಿಸಿದ ವೈಭವ್ ಸೂರ್ಯವಂಶಿ ಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಭಾರತ ಎ ಪರ ಕಣಕ್ಕಿಳಿದ ಮೊದಲ ಟಿ20 ಪಂದ್ಯದಲ್ಲೇ ವೈಭವ್ ತನ್ನ ವೈಭವೋಪೇತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಈ ವಿಸ್ಫೋಟಕ ಬ್ಯಾಟಿಂಗ್​​ನೊಂದಿಗೆ ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಎಂಟ್ರಿ ಕೊಡುವ ತನ್ನ ಪ್ರಯತ್ನವನ್ನು ಮುಂದುವರೆಸಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!