AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6,6,6: ಟೆಸ್ಟ್​ನಲ್ಲೂ ಶರವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Vaibhav Suryavanshi Century: ಬ್ರಿಸ್ಬೇನ್​ನಲ್ಲಿ ಭಾರತ ಅಂಡರ್-19 ಮತ್ತು ಆಸ್ಟ್ರೇಲಿಯಾ ಅಂಡರ್-19 ತಂಡಗಳ ನಡುವೆ ಯೂತ್ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 01, 2025 | 11:56 AM

Share
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿಲಬ್ಬರ ಕಂಡು ಬಂದಿರುವುದು ಆಸ್ಟ್ರೇಲಿಯಾ ಪಿಚ್​ನಲ್ಲಿ. ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಯೂತ್ ಟೆಸ್ಟ್​ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿಲಬ್ಬರ ಕಂಡು ಬಂದಿರುವುದು ಆಸ್ಟ್ರೇಲಿಯಾ ಪಿಚ್​ನಲ್ಲಿ. ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಯೂತ್ ಟೆಸ್ಟ್​ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

1 / 5
ಬ್ರಿಸ್ಬೇನ್​ನ ಹಿಯಾನ್ ಹೀಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 243 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಭಾರತ ಅಂಡರ್ 19 ತಂಡಕ್ಕೆ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಬ್ರಿಸ್ಬೇನ್​ನ ಹಿಯಾನ್ ಹೀಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 243 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಭಾರತ ಅಂಡರ್ 19 ತಂಡಕ್ಕೆ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

2 / 5
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ವೈಭವ್ ಸೂರ್ಯವಂಶಿ ಕೇವಲ 78 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ಬಳಿಕ ಕೂಡ ವೈಭವ್ ಆಸೀಸ್ ಬೌಲರ್​ಗಳ ಬೆಂಡೆತ್ತಿದರು.

ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ವೈಭವ್ ಸೂರ್ಯವಂಶಿ ಕೇವಲ 78 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ಬಳಿಕ ಕೂಡ ವೈಭವ್ ಆಸೀಸ್ ಬೌಲರ್​ಗಳ ಬೆಂಡೆತ್ತಿದರು.

3 / 5
ಅಂತಿಮವಾಗಿ 86 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ವೈಭೋವಪೇತ ಇನಿಂಗ್ಸ್​ನಿಂದಾಗಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ 300+ ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

ಅಂತಿಮವಾಗಿ 86 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ವೈಭೋವಪೇತ ಇನಿಂಗ್ಸ್​ನಿಂದಾಗಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ 300+ ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

4 / 5
ಇದಕ್ಕೂ ಮುನ್ನ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 11 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇದೀಗ ಯೂತ್ ಟೆಸ್ಟ್​ನಲ್ಲೂ ತನ್ನ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿದ್ದಾರೆ.

ಇದಕ್ಕೂ ಮುನ್ನ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 11 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇದೀಗ ಯೂತ್ ಟೆಸ್ಟ್​ನಲ್ಲೂ ತನ್ನ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿದ್ದಾರೆ.

5 / 5

Published On - 11:55 am, Wed, 1 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ