AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6,6,6: ಟೆಸ್ಟ್​ನಲ್ಲೂ ಶರವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Vaibhav Suryavanshi Century: ಬ್ರಿಸ್ಬೇನ್​ನಲ್ಲಿ ಭಾರತ ಅಂಡರ್-19 ಮತ್ತು ಆಸ್ಟ್ರೇಲಿಯಾ ಅಂಡರ್-19 ತಂಡಗಳ ನಡುವೆ ಯೂತ್ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 01, 2025 | 11:56 AM

Share
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿಲಬ್ಬರ ಕಂಡು ಬಂದಿರುವುದು ಆಸ್ಟ್ರೇಲಿಯಾ ಪಿಚ್​ನಲ್ಲಿ. ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಯೂತ್ ಟೆಸ್ಟ್​ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿಲಬ್ಬರ ಕಂಡು ಬಂದಿರುವುದು ಆಸ್ಟ್ರೇಲಿಯಾ ಪಿಚ್​ನಲ್ಲಿ. ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಯೂತ್ ಟೆಸ್ಟ್​ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

1 / 5
ಬ್ರಿಸ್ಬೇನ್​ನ ಹಿಯಾನ್ ಹೀಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 243 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಭಾರತ ಅಂಡರ್ 19 ತಂಡಕ್ಕೆ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಬ್ರಿಸ್ಬೇನ್​ನ ಹಿಯಾನ್ ಹೀಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 243 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಭಾರತ ಅಂಡರ್ 19 ತಂಡಕ್ಕೆ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

2 / 5
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ವೈಭವ್ ಸೂರ್ಯವಂಶಿ ಕೇವಲ 78 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ಬಳಿಕ ಕೂಡ ವೈಭವ್ ಆಸೀಸ್ ಬೌಲರ್​ಗಳ ಬೆಂಡೆತ್ತಿದರು.

ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ವೈಭವ್ ಸೂರ್ಯವಂಶಿ ಕೇವಲ 78 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ಬಳಿಕ ಕೂಡ ವೈಭವ್ ಆಸೀಸ್ ಬೌಲರ್​ಗಳ ಬೆಂಡೆತ್ತಿದರು.

3 / 5
ಅಂತಿಮವಾಗಿ 86 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ವೈಭೋವಪೇತ ಇನಿಂಗ್ಸ್​ನಿಂದಾಗಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ 300+ ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

ಅಂತಿಮವಾಗಿ 86 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ವೈಭೋವಪೇತ ಇನಿಂಗ್ಸ್​ನಿಂದಾಗಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ 300+ ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

4 / 5
ಇದಕ್ಕೂ ಮುನ್ನ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 11 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇದೀಗ ಯೂತ್ ಟೆಸ್ಟ್​ನಲ್ಲೂ ತನ್ನ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿದ್ದಾರೆ.

ಇದಕ್ಕೂ ಮುನ್ನ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 11 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇದೀಗ ಯೂತ್ ಟೆಸ್ಟ್​ನಲ್ಲೂ ತನ್ನ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿದ್ದಾರೆ.

5 / 5

Published On - 11:55 am, Wed, 1 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ