AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಕೇವಲ 14ನೇ ವಯಸ್ಸಿನಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿದ ವೈಭವ್, ಉನ್ಮುಕ್ತ್ ಚಂದ್ ಅವರ 13 ವರ್ಷಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 07, 2026 | 9:39 PM

Share
ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

1 / 5
ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

2 / 5
ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್​ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್​ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

3 / 5
2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

4 / 5
2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.

2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.

5 / 5
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ