AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಕೇವಲ 14ನೇ ವಯಸ್ಸಿನಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿದ ವೈಭವ್, ಉನ್ಮುಕ್ತ್ ಚಂದ್ ಅವರ 13 ವರ್ಷಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 07, 2026 | 9:39 PM

Share
ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

1 / 5
ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

2 / 5
ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್​ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್​ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

3 / 5
2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

4 / 5
2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.

2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.

5 / 5
Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?