AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಕೇವಲ 14ನೇ ವಯಸ್ಸಿನಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿದ ವೈಭವ್, ಉನ್ಮುಕ್ತ್ ಚಂದ್ ಅವರ 13 ವರ್ಷಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Jan 07, 2026 | 9:39 PM

Share
ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

1 / 5
ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

2 / 5
ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್​ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್​ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

3 / 5
2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

4 / 5
2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.

2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.

5 / 5
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!