AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

Vaibhav Suryavanshi: ಕೇವಲ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಯುವ ತಂಡದ ನಾಯಕನಾಗಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಗೆಲ್ಲಿಸುವ ಮೂಲಕ ಏಕದಿನ ಪಂದ್ಯವನ್ನು ಗೆದ್ದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 15 ವರ್ಷದ ಅಹ್ಮದ್ ಶೆಹಜಾದ್ ಅವರ ದಾಖಲೆಯನ್ನು ವೈಭವ್ ಮುರಿದಿದ್ದಾರೆ. ಈ ಸಾಧನೆಯು ಯುವ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದೆ.

ಪೃಥ್ವಿಶಂಕರ
|

Updated on: Jan 04, 2026 | 7:45 PM

Share
ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ.

ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ.

1 / 6
ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ ಅವಕಾಶವೂ ಸಿಕ್ಕಿದೆ. ಕೆಲವೇ ದಿನಗಳಲ್ಲಿ ಅಂಡರ್-19 ಟಿ20 ವಿಶ್ವಕಪ್ ಆರಂಭವಾಗಲಿರುವುದರಿಂದ ಭಾರತ ತಂಡಕ್ಕೆ ಈ ಪ್ರವಾಸ ಅತ್ಯಂತ ಮುಖ್ಯವಾಗಿದೆ.

ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ ಅವಕಾಶವೂ ಸಿಕ್ಕಿದೆ. ಕೆಲವೇ ದಿನಗಳಲ್ಲಿ ಅಂಡರ್-19 ಟಿ20 ವಿಶ್ವಕಪ್ ಆರಂಭವಾಗಲಿರುವುದರಿಂದ ಭಾರತ ತಂಡಕ್ಕೆ ಈ ಪ್ರವಾಸ ಅತ್ಯಂತ ಮುಖ್ಯವಾಗಿದೆ.

2 / 6
ನಿಯಮಿತ ನಾಯಕ ಆಯುಷ್ ಮ್ಹಾತ್ರೆ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ವೈಭವ್, ತಮ್ಮ ಚೊಚ್ಚಲ ನಾಯಕತ್ವದ ಪಂದ್ಯದಲ್ಲಿ ಆಟಗಾರನಾಗಿ ವಿಫಲನಾದರೂ, ನಾಯಕನಾಗಿ ಮತ್ತೊಂದು ವಿಶ್ವದಾಖಲೆ ಸೃಷ್ಟಿಸಿದ್ದಾರೆ. ದಕ್ಷಿಣ ಆಫ್ರಿಕಾ ಯುವ ತಂಡದ ವಿರುದ್ಧ ನಡೆದ ಮೊದಲ ಪಂದ್ಯವನ್ನು ಭಾರತ ತಂಡ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ ಗೆಲುವು ಸಾಧಿಸಿತು. ಈ ಮೂಲಕ ವೈಭವ್ ವಿಶ್ವದಾಖಲೆಯೊಂದಕ್ಕೆ ಕೊರಳೊಡ್ಡಿದ್ದಾರೆ.

ನಿಯಮಿತ ನಾಯಕ ಆಯುಷ್ ಮ್ಹಾತ್ರೆ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ವೈಭವ್, ತಮ್ಮ ಚೊಚ್ಚಲ ನಾಯಕತ್ವದ ಪಂದ್ಯದಲ್ಲಿ ಆಟಗಾರನಾಗಿ ವಿಫಲನಾದರೂ, ನಾಯಕನಾಗಿ ಮತ್ತೊಂದು ವಿಶ್ವದಾಖಲೆ ಸೃಷ್ಟಿಸಿದ್ದಾರೆ. ದಕ್ಷಿಣ ಆಫ್ರಿಕಾ ಯುವ ತಂಡದ ವಿರುದ್ಧ ನಡೆದ ಮೊದಲ ಪಂದ್ಯವನ್ನು ಭಾರತ ತಂಡ ಡಕ್ವರ್ತ್​ ಲೂಯಿಸ್ ನಿಯಮದಡಿಯಲ್ಲಿ ಗೆಲುವು ಸಾಧಿಸಿತು. ಈ ಮೂಲಕ ವೈಭವ್ ವಿಶ್ವದಾಖಲೆಯೊಂದಕ್ಕೆ ಕೊರಳೊಡ್ಡಿದ್ದಾರೆ.

3 / 6
ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ ಏಕದಿನ ಪಂದ್ಯವನ್ನು ಗೆದ್ದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಸೂರ್ಯವಂಶಿ 14 ನೇ ವಯಸ್ಸಿನಲ್ಲಿ ಯೂತ್ ಏಕದಿನ ಪಂದ್ಯವನ್ನು ಗೆದ್ದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದರೊಂದಿಗೆ 15 ವರ್ಷ ಮತ್ತು 141 ದಿನಗಳ ವಯಸ್ಸಿನಲ್ಲಿ ನಾಯಕನಾಗಿ ಮೊದಲ ಪಂದ್ಯವನ್ನು ಗೆದ್ದ ಪಾಕಿಸ್ತಾನದ ಅಹ್ಮದ್ ಶೆಹಜಾದ್ ಅವರ ದಾಖಲೆಯನ್ನು ವೈಭವ್ ಮುರಿದಿದ್ದಾರೆ.

ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ ಏಕದಿನ ಪಂದ್ಯವನ್ನು ಗೆದ್ದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಭವ್ ಸೂರ್ಯವಂಶಿ 14 ನೇ ವಯಸ್ಸಿನಲ್ಲಿ ಯೂತ್ ಏಕದಿನ ಪಂದ್ಯವನ್ನು ಗೆದ್ದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಇದರೊಂದಿಗೆ 15 ವರ್ಷ ಮತ್ತು 141 ದಿನಗಳ ವಯಸ್ಸಿನಲ್ಲಿ ನಾಯಕನಾಗಿ ಮೊದಲ ಪಂದ್ಯವನ್ನು ಗೆದ್ದ ಪಾಕಿಸ್ತಾನದ ಅಹ್ಮದ್ ಶೆಹಜಾದ್ ಅವರ ದಾಖಲೆಯನ್ನು ವೈಭವ್ ಮುರಿದಿದ್ದಾರೆ.

4 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 300 ರನ್ ಗಳಿಸಿತು. ಆಟಗಾರನಾಗಿ ವಿಫಲರಾದ ವೈಭವ್ ಸೂರ್ಯವಂಶಿ ಕೇವಲ 11 ರನ್ ಗಳಿಸಿ ಔಟಾದರು. ಆದರೆ ಹರ್ವಂಶ್ ಪಂಗಾಲಿಯಾ ಅವರ 93 ಮತ್ತು ಆಂಬ್ರಿಸ್ ಅವರ 65 ರನ್‌ಗಳ ನೆರವಿನಿಂದ ಭಾರತ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು. ಉತ್ತರವಾಗಿ, ದಕ್ಷಿಣ ಆಫ್ರಿಕಾ 27.4 ಓವರ್‌ಗಳಲ್ಲಿ 148 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಮಳೆಯಿಂದಾಗಿ ಪಂದ್ಯವನ್ನು ಡಕ್‌ವರ್ತ್-ಲೂಯಿಸ್ ವಿಧಾನದ ಮೂಲಕ ಭಾರತ 25 ರನ್‌ಗಳಿಂದ ಗೆದ್ದುಕೊಂಡಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 300 ರನ್ ಗಳಿಸಿತು. ಆಟಗಾರನಾಗಿ ವಿಫಲರಾದ ವೈಭವ್ ಸೂರ್ಯವಂಶಿ ಕೇವಲ 11 ರನ್ ಗಳಿಸಿ ಔಟಾದರು. ಆದರೆ ಹರ್ವಂಶ್ ಪಂಗಾಲಿಯಾ ಅವರ 93 ಮತ್ತು ಆಂಬ್ರಿಸ್ ಅವರ 65 ರನ್‌ಗಳ ನೆರವಿನಿಂದ ಭಾರತ ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿತು. ಉತ್ತರವಾಗಿ, ದಕ್ಷಿಣ ಆಫ್ರಿಕಾ 27.4 ಓವರ್‌ಗಳಲ್ಲಿ 148 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಮಳೆಯಿಂದಾಗಿ ಪಂದ್ಯವನ್ನು ಡಕ್‌ವರ್ತ್-ಲೂಯಿಸ್ ವಿಧಾನದ ಮೂಲಕ ಭಾರತ 25 ರನ್‌ಗಳಿಂದ ಗೆದ್ದುಕೊಂಡಿತು.

5 / 6
ಬೆನೋನಿಯಲ್ಲಿ ಮಳೆ ಮತ್ತು ಭಾರೀ ಮಿಂಚಿನಿಂದಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಆಟಗಾರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ನಂತರ ಪಂದ್ಯವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದ ಅಂಪೈರ್​ಗಳು ಅಂತಿಮವಾಗಿ ಭಾರತವನ್ನು ವಿಜಯಿ ಎಂದು ಘೋಷಿಸಿದರು. ಮುಂದಿನ ಪಂದ್ಯ ಜನವರಿ 5 ರಂದು ನಡೆಯಲಿದೆ.

ಬೆನೋನಿಯಲ್ಲಿ ಮಳೆ ಮತ್ತು ಭಾರೀ ಮಿಂಚಿನಿಂದಾಗಿ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಆಟಗಾರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ನಂತರ ಪಂದ್ಯವನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬಂದ ಅಂಪೈರ್​ಗಳು ಅಂತಿಮವಾಗಿ ಭಾರತವನ್ನು ವಿಜಯಿ ಎಂದು ಘೋಷಿಸಿದರು. ಮುಂದಿನ ಪಂದ್ಯ ಜನವರಿ 5 ರಂದು ನಡೆಯಲಿದೆ.

6 / 6
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?