AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್ ಚಕ್ರವರ್ತಿ ಮಿಸ್ಟರಿ ಸ್ಪಿನ್​ಗೆ ತಿರುಗಿಬಿದ್ದ ಹಳೆಯ ದಾಖಲೆಗಳು

Varun Chakaravarthy Records: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೂವರು ಮಾತ್ರ 2 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂವರಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಎರಡು ಬಾರಿ 5 ವಿಕೆಟ್​ಗಳ ಸಾಧನೆ ಮಾಡಿರುವುದು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ಈ ಮೂಲಕ ಈ ಹಿಂದೆ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದ ಬೌಲರ್​ಗಳನ್ನು ಹಿಂದಿಕ್ಕಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 29, 2025 | 8:31 AM

Share
ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿಯುವ ಮೂಲಕ..!

ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿಯುವ ಮೂಲಕ..!

1 / 5
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತನ್ನ ಓವರ್​ಸ್ಪಿನ್ ಜಾದೂ ತೋರಿಸಿದ ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

Varun (2)ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತನ್ನ ಓವರ್​ಸ್ಪಿನ್ ಜಾದೂ ತೋರಿಸಿದ ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

3 / 5
ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

4 / 5
ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:31 am, Wed, 29 January 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!