AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪರ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರ ಯಾರು ಗೊತ್ತೇ?

Varun Chakravarthy: 33 ವರ್ಷದ ವರುಣ್ ಚಕ್ರವರ್ತಿ ಏಕದಿನ ಕ್ರಿಕೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದ ವರುಣ್ 10 ಓವರ್​ಗಳಲ್ಲಿ 54 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಚೊಚ್ಚಲ ಒನ್​ಡೇ ಮ್ಯಾಚ್ ಆಡಿದ ಎರಡನೇ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 10, 2025 | 12:53 PM

Share
ಕಟಕ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದ ಮೂಲಕ ವರುಣ್ ಚಕ್ರವರ್ತಿ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಅದು ಕೂಡ ತಮ್ಮ 33ನೇ ವಯಸ್ಸಿನಲ್ಲಿ. ಇದರೊಂದಿಗೆ ಭಾರತದ ಪರ ಚೊಚ್ಚಲ ಏಕದಿನ ಪಂದ್ಯವಾಡಿದ 2ನೇ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಕಟಕ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಪಂದ್ಯದ ಮೂಲಕ ವರುಣ್ ಚಕ್ರವರ್ತಿ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ಅದು ಕೂಡ ತಮ್ಮ 33ನೇ ವಯಸ್ಸಿನಲ್ಲಿ. ಇದರೊಂದಿಗೆ ಭಾರತದ ಪರ ಚೊಚ್ಚಲ ಏಕದಿನ ಪಂದ್ಯವಾಡಿದ 2ನೇ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

1 / 5
2021 ರಲ್ಲಿ ವರುಣ್ ಚಕ್ರವರ್ತಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಈವರೆಗೆ 18 ಟಿ20 ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಮಿಸ್ಟರಿ ಸ್ಪಿನ್ನರ್​ಗೆ ಭಾರತ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 14 ವಿಕೆಟ್​ ಕಬಳಿಸುವ ಮೂಲಕ  ವರುಣ್ ಭಾರತ ಏಕದಿನ ತಂಡದ ಬಾಗಿಲು ಬಡಿದಿದ್ದಾರೆ.

2021 ರಲ್ಲಿ ವರುಣ್ ಚಕ್ರವರ್ತಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅಲ್ಲದೆ ಈವರೆಗೆ 18 ಟಿ20 ಮ್ಯಾಚ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ಮಿಸ್ಟರಿ ಸ್ಪಿನ್ನರ್​ಗೆ ಭಾರತ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 14 ವಿಕೆಟ್​ ಕಬಳಿಸುವ ಮೂಲಕ ವರುಣ್ ಭಾರತ ಏಕದಿನ ತಂಡದ ಬಾಗಿಲು ಬಡಿದಿದ್ದಾರೆ.

2 / 5
ಈ ಮೂಲಕ ಭಾರತ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದ ವರುಣ್ ಚಕ್ರವರ್ತಿ ಕಟಕ್​ನ ಬಾರಾಬತಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. 33 ವರ್ಷ, 164 ದಿನಗಳ ವಯಸ್ಸಿನಲ್ಲಿ ಚೊಚ್ಚಲ ಏಕದಿನ ಪಂದ್ಯವಾಡುವ ಮೂಲಕ ವರುಣ್ ಟೀಮ್ ಇಂಡಿಯಾ ಪಾದಾರ್ಪಣೆ ಮಾಡಿದ 2ನೇ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಈ ಮೂಲಕ ಭಾರತ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದ ವರುಣ್ ಚಕ್ರವರ್ತಿ ಕಟಕ್​ನ ಬಾರಾಬತಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. 33 ವರ್ಷ, 164 ದಿನಗಳ ವಯಸ್ಸಿನಲ್ಲಿ ಚೊಚ್ಚಲ ಏಕದಿನ ಪಂದ್ಯವಾಡುವ ಮೂಲಕ ವರುಣ್ ಟೀಮ್ ಇಂಡಿಯಾ ಪಾದಾರ್ಪಣೆ ಮಾಡಿದ 2ನೇ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

3 / 5
ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರನೆಂದರೆ ಫಾರೂಖ್ ಇಂಜಿನಿಯರ್. 1974 ರಲ್ಲಿ ಲೀಡ್ಸ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ 36 ವರ್ಷದ ಫಾರೂಖ್ ಇಂಜಿನಿಯರ್ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. ಈ ಮೂಲಕ ಭಾರತದ ಪರ ಏಕದಿಕ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರನೆಂದರೆ ಫಾರೂಖ್ ಇಂಜಿನಿಯರ್. 1974 ರಲ್ಲಿ ಲೀಡ್ಸ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ 36 ವರ್ಷದ ಫಾರೂಖ್ ಇಂಜಿನಿಯರ್ ಏಕದಿನ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. ಈ ಮೂಲಕ ಭಾರತದ ಪರ ಏಕದಿಕ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಇನ್ನು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರನ ದಾಖಲೆ ನೆದರ್​ಲೆಂಡ್​ನ ನೋಲನ್ ಎವಾಟ್ ಕ್ಲಾರ್ಕ್ ಹೆಸರಿನಲ್ಲಿದೆ. 1996 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಚೊಚ್ಚಲ ಪಂದ್ಯವಾಡುವ ಮೂಲಕ ನೋಲನ್ ಕ್ಲಾರ್ಕ್ ಈ ದಾಖಲೆ ಬರೆದಿದ್ದಾರೆ. ಅದು ಕೂಡ 47ನೇ ಹಿರಿ ವಯಸ್ಸಿನಲ್ಲಿ ಎಂಬುದು ವಿಶೇಷ.

ಇನ್ನು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಹಿರಿಯ ಆಟಗಾರನ ದಾಖಲೆ ನೆದರ್​ಲೆಂಡ್​ನ ನೋಲನ್ ಎವಾಟ್ ಕ್ಲಾರ್ಕ್ ಹೆಸರಿನಲ್ಲಿದೆ. 1996 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಚೊಚ್ಚಲ ಪಂದ್ಯವಾಡುವ ಮೂಲಕ ನೋಲನ್ ಕ್ಲಾರ್ಕ್ ಈ ದಾಖಲೆ ಬರೆದಿದ್ದಾರೆ. ಅದು ಕೂಡ 47ನೇ ಹಿರಿ ವಯಸ್ಸಿನಲ್ಲಿ ಎಂಬುದು ವಿಶೇಷ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ