AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತು ವಿಕೆಟ್ ಕಬಳಿಸಿಯೂ ಅನಗತ್ಯ ದಾಖಲೆಗೆ ಕೊರೊಳೊಡ್ಡಿದ ವರುಣ್ ಚಕ್ರವರ್ತಿ

Varun Chakravarthy: ಟಿ20 ಸರಣಿಗಳಲ್ಲಿ ಬ್ಯಾಕ್ ಟು ಬ್ಯಾಕ್ 5 ವಿಕೆಟ್ ಕಬಳಿಸಿದ ವಿಶೇಷ ದಾಖಲೆಯೊಂದನ್ನು ವರುಣ್ ಚಕ್ರವರ್ತಿ ನಿರ್ಮಿಸಿದ್ದಾರೆ. ಆದರೆ ಈ ದಾಖಲೆಯ ಹೊರತಾಗಿಯೂ ಅನಗತ್ಯದ ರೆಕಾರ್ಡ್ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಎರಡು ಪಂದ್ಯಗಳಲ್ಲಿನ ಟೀಮ್ ಇಂಡಿಯಾದ ಸೋಲು.

ಝಾಹಿರ್ ಯೂಸುಫ್
|

Updated on: Jan 29, 2025 | 3:00 PM

ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ 2 ಬಾರಿ 5 ವಿಕೆಟ್ ಕಬಳಿಸಿದ್ದು ಕೇವಲ ಮೂವರು ಬೌಲರ್​ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಬೌಲರ್ ಭುವನೇಶ್ವರ್ ಕುಮಾರ್. ಆ ಬಳಿಕ ಕುಲ್ದೀಪ್ ಯಾದವ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಇವರಿಬ್ಬರ ದಾಖಲೆಯನ್ನು ಸರಿಗಟ್ಟಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಭಾರತ ತಂಡದ ಪರ ಟಿ20 ಕ್ರಿಕೆಟ್​ನಲ್ಲಿ 2 ಬಾರಿ 5 ವಿಕೆಟ್ ಕಬಳಿಸಿದ್ದು ಕೇವಲ ಮೂವರು ಬೌಲರ್​ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಬೌಲರ್ ಭುವನೇಶ್ವರ್ ಕುಮಾರ್. ಆ ಬಳಿಕ ಕುಲ್ದೀಪ್ ಯಾದವ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಇವರಿಬ್ಬರ ದಾಖಲೆಯನ್ನು ಸರಿಗಟ್ಟಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 5
ಆದರೆ ಈ ಸಾಧನೆಯ ಹೊರತಾಗಿಯೂ ವರುಣ್ ಚಕ್ರವರ್ತಿ ಹೆಸರಿಗೆ ಅನಗತ್ಯ ದಾಖಲೆಯೊಂದು ಸೇರ್ಪಡೆಯಾಗಿದೆ. ಅದು ಕೂಡ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ಎಂಬುದೇ ಅಚ್ಚರಿ. ಅಂದರೆ ವರುಣ್ ಚಕ್ರವರ್ತಿ 2 ಬಾರಿ ಐದು ವಿಕೆಟ್ ಪಡೆದರೂ ಆ ಪಂದ್ಯಗಳನ್ನು ಭಾರತ ತಂಡ ಗೆದ್ದಿಲ್ಲ.

ಆದರೆ ಈ ಸಾಧನೆಯ ಹೊರತಾಗಿಯೂ ವರುಣ್ ಚಕ್ರವರ್ತಿ ಹೆಸರಿಗೆ ಅನಗತ್ಯ ದಾಖಲೆಯೊಂದು ಸೇರ್ಪಡೆಯಾಗಿದೆ. ಅದು ಕೂಡ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ಎಂಬುದೇ ಅಚ್ಚರಿ. ಅಂದರೆ ವರುಣ್ ಚಕ್ರವರ್ತಿ 2 ಬಾರಿ ಐದು ವಿಕೆಟ್ ಪಡೆದರೂ ಆ ಪಂದ್ಯಗಳನ್ನು ಭಾರತ ತಂಡ ಗೆದ್ದಿಲ್ಲ.

2 / 5
2024 ರಲ್ಲಿ ಗೆಬಹಾದಲ್ಲಿ ನಡೆದ ಸೌತ್ ಆಫ್ರಿಕಾದ ವಿರುದ್ಧದ ಟಿ20 ತಂಡದಲ್ಲಿ ಪಂದ್ಯದಲ್ಲಿ ವರುಣ್ 17 ರನ್​ಗೆ 5 ವಿಕೆಟ್ ಪಡೆದಿದ್ದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 3 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದೀಗ ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯದಲ್ಲಿ ವರುಣ್ 24 ರನ್​ ನೀಡಿ 5 ವಿಕೆಟ್ ಪಡೆದಿದ್ದಾರೆ. ಈ ಮ್ಯಾಚ್​ನಲ್ಲೂ ಭಾರತ ತಂಡ 26 ರನ್​ಗಳಿಂದ ಸೋಲನುಭವಿಸಿದೆ.

2024 ರಲ್ಲಿ ಗೆಬಹಾದಲ್ಲಿ ನಡೆದ ಸೌತ್ ಆಫ್ರಿಕಾದ ವಿರುದ್ಧದ ಟಿ20 ತಂಡದಲ್ಲಿ ಪಂದ್ಯದಲ್ಲಿ ವರುಣ್ 17 ರನ್​ಗೆ 5 ವಿಕೆಟ್ ಪಡೆದಿದ್ದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 3 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದೀಗ ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯದಲ್ಲಿ ವರುಣ್ 24 ರನ್​ ನೀಡಿ 5 ವಿಕೆಟ್ ಪಡೆದಿದ್ದಾರೆ. ಈ ಮ್ಯಾಚ್​ನಲ್ಲೂ ಭಾರತ ತಂಡ 26 ರನ್​ಗಳಿಂದ ಸೋಲನುಭವಿಸಿದೆ.

3 / 5
ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸೋತ ಪಂದ್ಯಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿದ ಅನಗತ್ಯ ದಾಖಲೆಯೊಂದು ವರುಣ್ ಚಕ್ರವರ್ತಿ ಪಾಲಾಗಿದೆ. ಇಲ್ಲಿ ವರುಣ್ ಅವರ ತಪ್ಪು ಏನೂ ಇಲ್ಲದಿದ್ದರೂ, ಟೀಮ್ ಇಂಡಿಯಾ ಸ್ಪಿನ್ನರ್​​ನ ಹೆಸರು ಅನಗತ್ಯ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದ್ದು ಮಾತ್ರ ವಿಪರ್ಯಾಸ.

ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸೋತ ಪಂದ್ಯಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿದ ಅನಗತ್ಯ ದಾಖಲೆಯೊಂದು ವರುಣ್ ಚಕ್ರವರ್ತಿ ಪಾಲಾಗಿದೆ. ಇಲ್ಲಿ ವರುಣ್ ಅವರ ತಪ್ಪು ಏನೂ ಇಲ್ಲದಿದ್ದರೂ, ಟೀಮ್ ಇಂಡಿಯಾ ಸ್ಪಿನ್ನರ್​​ನ ಹೆಸರು ಅನಗತ್ಯ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದ್ದು ಮಾತ್ರ ವಿಪರ್ಯಾಸ.

4 / 5
ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯು 2-1 ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ 4ನೇ ಮ್ಯಾಚ್ ಜನವರಿ 31 ರಂದು ಪುಣೆಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ, ಇಂಗ್ಲೆಂಡ್ ತಂಡವು ನಾಲ್ಕನೇ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ 4ನೇ ಮ್ಯಾಚ್​ನಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯು 2-1 ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ 4ನೇ ಮ್ಯಾಚ್ ಜನವರಿ 31 ರಂದು ಪುಣೆಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ, ಇಂಗ್ಲೆಂಡ್ ತಂಡವು ನಾಲ್ಕನೇ ಪಂದ್ಯದಲ್ಲಿ ಗೆಲ್ಲಲೇಬೇಕು. ಹೀಗಾಗಿ 4ನೇ ಮ್ಯಾಚ್​ನಲ್ಲೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

5 / 5
Follow us
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್