AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಅಗ್ರಸ್ಥಾನದೊಂದಿಗೆ ಬುಮ್ರಾ ದಾಖಲೆ ಮುರಿದ ವರುಣ್ ಚಕ್ರವರ್ತಿ

ICC Rankings: ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿನ ಉತ್ತಮ ಪ್ರದರ್ಶನದಿಂದ 818 ರೇಟಿಂಗ್ ಪಾಯಿಂಟ್‌ ಗಳಿಸಿ, ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಬೌಲರ್ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ದಾಖಲೆಯನ್ನು ಮುರಿದಿರುವ ಚಕ್ರವರ್ತಿ, ಪ್ರಸ್ತುತ ಟಾಪ್ 10ರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 17, 2025 | 4:50 PM

Share
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ರಸ್ತುತ ಟಿ20 ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಕಡಿಮೆ ಅವಧಿಯಲ್ಲೇ ಚುಟುಕು ಮಾದರಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದರ ಫಲವಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿಯೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ರಸ್ತುತ ಟಿ20 ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಕಡಿಮೆ ಅವಧಿಯಲ್ಲೇ ಚುಟುಕು ಮಾದರಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದರ ಫಲವಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿಯೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ.

1 / 5
ಡಿಸೆಂಬರ್ 17 ರ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ವರುಣ್ ಚಕ್ರವರ್ತಿ ಮುಂದುವರೆದಿದ್ದಾರೆಯಾದರೂ ರೇಟಿಂಗ್​ನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಟಿ20 ಪಂದ್ಯಗಳಲ್ಲಿ ಚಕ್ರವರ್ತಿ ತಲಾ 2 ವಿಕೆಟ್‌ಗಳನ್ನು ಕಬಳಿಸಿದ್ದರು. ಇದರ ಫಲವಾಗಿ ಅವರಿಗೆ 36 ರೇಟಿಂಗ್​ ಅಂಕಗಳು ಹೆಚ್ಚುವರಿಯಾಗಿ ಸಿಕ್ಕಿವೆ.

ಡಿಸೆಂಬರ್ 17 ರ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ವರುಣ್ ಚಕ್ರವರ್ತಿ ಮುಂದುವರೆದಿದ್ದಾರೆಯಾದರೂ ರೇಟಿಂಗ್​ನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಟಿ20 ಪಂದ್ಯಗಳಲ್ಲಿ ಚಕ್ರವರ್ತಿ ತಲಾ 2 ವಿಕೆಟ್‌ಗಳನ್ನು ಕಬಳಿಸಿದ್ದರು. ಇದರ ಫಲವಾಗಿ ಅವರಿಗೆ 36 ರೇಟಿಂಗ್​ ಅಂಕಗಳು ಹೆಚ್ಚುವರಿಯಾಗಿ ಸಿಕ್ಕಿವೆ.

2 / 5
ಇದರಿಂದಾಗಿ 818 ರೇಟಿಂಗ್ ಪಾಯಿಂಟ್ ತಲುಪಿರುವ ವರುಣ್ ಚಕ್ರವರ್ತಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ಮೂಲಕ  ಟಿ20 ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ 818 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

ಇದರಿಂದಾಗಿ 818 ರೇಟಿಂಗ್ ಪಾಯಿಂಟ್ ತಲುಪಿರುವ ವರುಣ್ ಚಕ್ರವರ್ತಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಟಿ20 ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ 818 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

3 / 5
2017 ರಲ್ಲಿ 783 ರೇಟಿಂಗ್ ಪಾಯಿಂಟ್​ನೊಂದಿಗೆ ಜಸ್ಪ್ರೀತ್ ಬುಮ್ರಾ ಭಾರತದ ಪರ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದರು. ಇದೀಗ ವರುಣ್ 800 ಅಂಕಗಳ ಗಡಿಯನ್ನು ದಾಟಿದ್ದಾರೆ. ಈ ಮೂಲಕ ವರುಣ್ ಚಕ್ರವರ್ತಿ ಟಾಪ್ -10 ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ಬೌಲರ್‌ ಎನಿಸಿಕೊಂಡಿದ್ದಾರೆ.

2017 ರಲ್ಲಿ 783 ರೇಟಿಂಗ್ ಪಾಯಿಂಟ್​ನೊಂದಿಗೆ ಜಸ್ಪ್ರೀತ್ ಬುಮ್ರಾ ಭಾರತದ ಪರ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದರು. ಇದೀಗ ವರುಣ್ 800 ಅಂಕಗಳ ಗಡಿಯನ್ನು ದಾಟಿದ್ದಾರೆ. ಈ ಮೂಲಕ ವರುಣ್ ಚಕ್ರವರ್ತಿ ಟಾಪ್ -10 ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ಬೌಲರ್‌ ಎನಿಸಿಕೊಂಡಿದ್ದಾರೆ.

4 / 5
ಪ್ರಸ್ತುತ ಐಸಿಸಿ ಟಿ20 ಶ್ರೇಯಾಂಕದಲ್ಲಿ ವರುಣ್ ಚಕ್ರವರ್ತಿ ನಂತರದಲ್ಲಿರುವ ನ್ಯೂಜಿಲೆಂಡ್‌ನ ಜಾಕೋಬ್ ಡಫಿ 699 ರೇಟಿಂಗ್ ಹೊಂದಿದ್ದಾರೆ. ಚಕ್ರವರ್ತಿ ಮತ್ತು ಡಫಿ ನಡುವೆ 119 ರೇಟಿಂಗ್ ಪಾಯಿಂಟ್‌ಗಳ ವ್ಯತ್ಯಾಸವಿದೆ. ಪ್ರಸ್ತುತ ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಲ್ಲಿರುವ ಏಕೈಕ ಭಾರತೀಯ ಚಕ್ರವರ್ತಿ. ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಸ್ತುತ ಸರಣಿಯಿಂದ ಹೊರಗುಳಿದಿರುವ ಅಕ್ಷರ್ ಪಟೇಲ್ 636 ರೇಟಿಂಗ್‌ನೊಂದಿಗೆ 13 ನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಐಸಿಸಿ ಟಿ20 ಶ್ರೇಯಾಂಕದಲ್ಲಿ ವರುಣ್ ಚಕ್ರವರ್ತಿ ನಂತರದಲ್ಲಿರುವ ನ್ಯೂಜಿಲೆಂಡ್‌ನ ಜಾಕೋಬ್ ಡಫಿ 699 ರೇಟಿಂಗ್ ಹೊಂದಿದ್ದಾರೆ. ಚಕ್ರವರ್ತಿ ಮತ್ತು ಡಫಿ ನಡುವೆ 119 ರೇಟಿಂಗ್ ಪಾಯಿಂಟ್‌ಗಳ ವ್ಯತ್ಯಾಸವಿದೆ. ಪ್ರಸ್ತುತ ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಲ್ಲಿರುವ ಏಕೈಕ ಭಾರತೀಯ ಚಕ್ರವರ್ತಿ. ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಸ್ತುತ ಸರಣಿಯಿಂದ ಹೊರಗುಳಿದಿರುವ ಅಕ್ಷರ್ ಪಟೇಲ್ 636 ರೇಟಿಂಗ್‌ನೊಂದಿಗೆ 13 ನೇ ಸ್ಥಾನದಲ್ಲಿದ್ದಾರೆ.

5 / 5
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ