AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತಿಂಗಳ ನಂತರ ತಂಡ ಸೇರಿಕೊಂಡಿದ್ದ ವರುಣ್ ಚಕ್ರವರ್ತಿ ಮತ್ತೆ ತಂಡದಿಂದ ಔಟ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯಗೊಂಡು ಹೊರಬಿದ್ದಿದ್ದಾರೆ. ಕೇವಲ ಒಂದು ಪಂದ್ಯ ಆಡಿದ ನಂತರ ಮತ್ತೆ ಗಾಯಗೊಂಡಿರುವುದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿನ ಅವರ ರಿಹ್ಯಾಬ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹಾರ್ದಿಕ್ ಪಾಂಡ್ಯರಂತಹ ಆಟಗಾರರಿಗೂ ಇದೇ ಅನುಭವವಾಗಿತ್ತು. ವರುಣ್ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್​ಗೆ ಅವಕಾಶ ಸಿಗುವ ಸಾಧ್ಯತೆ ಇದೆ.

ಪೃಥ್ವಿಶಂಕರ
|

Updated on: Sep 14, 2026 | 8:15 PM

Share
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಗೆದ್ದು ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದ್ದ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದಿಂದಾಗಿ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 4ಓವರ್​ಗಳನ್ನು ಬೌಲ್ ಮಾಡಿದ್ದ ವರುಣ್ ಕೇವಲ 16 ರನ್ ನೀಡಿ 1 ವಿಕೆಟ್ ಪಡೆದಿದ್ದರು(PC-BCCI).

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಗೆದ್ದು ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದ್ದ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದಿಂದಾಗಿ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 4ಓವರ್​ಗಳನ್ನು ಬೌಲ್ ಮಾಡಿದ್ದ ವರುಣ್ ಕೇವಲ 16 ರನ್ ನೀಡಿ 1 ವಿಕೆಟ್ ಪಡೆದಿದ್ದರು(PC-BCCI).

1 / 5
ಅಚ್ಚರಿಯ ಸಂಗತಿಯೆಂದರೆ ವರುಣ್ ಚಕ್ರವರ್ತಿ ಎರಡು ತಿಂಗಳ ನಂತರ ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ಎರಡು ತಿಂಗಳು ಅವರು ಎಲ್ಲಿದ್ದರು ಎಂದರೆ ಗಾಯದಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ವರುಣ್, ತಮ್ಮ ಫಿಟ್ನೆಸ್ ಸಾಭೀತುಪಡಿಸಿ ತಂಡದಲ್ಲಿ ಸ್ಥಾನ ಪಡೆದಿದ್ದರು(PC-BCCI).

ಅಚ್ಚರಿಯ ಸಂಗತಿಯೆಂದರೆ ವರುಣ್ ಚಕ್ರವರ್ತಿ ಎರಡು ತಿಂಗಳ ನಂತರ ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ಎರಡು ತಿಂಗಳು ಅವರು ಎಲ್ಲಿದ್ದರು ಎಂದರೆ ಗಾಯದಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ವರುಣ್, ತಮ್ಮ ಫಿಟ್ನೆಸ್ ಸಾಭೀತುಪಡಿಸಿ ತಂಡದಲ್ಲಿ ಸ್ಥಾನ ಪಡೆದಿದ್ದರು(PC-BCCI).

2 / 5
ಆದರೀಗ ತಂಡವನ್ನು ಕೂಡಿಕೊಂಡು ಕೇವಲ ಒಂದೇ ಒಂದು ಪಂದ್ಯವನ್ನು ಆಡಿದ ಬಳಿಕ ವರುಣ್ ಚಕ್ರವರ್ತಿ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೇವಲ ನಾಲ್ಕು ಓವರ್ ಬೌಲಿಂಗ್ ಮಾಡಿದ್ದ ವರುಣ್​ಗೆ ಮತ್ತೆ ಗಾಯವಾಗಿದೆ . ಈ ಗಾಯವು ಮತ್ತೊಮ್ಮೆ ಬಿಸಿಸಿಐ ಮತ್ತು ಅದರ ಸೆಂಟರ್ ಆಫ್ ಎಕ್ಸಲೆನ್ಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ(PC-BCCI).

ಆದರೀಗ ತಂಡವನ್ನು ಕೂಡಿಕೊಂಡು ಕೇವಲ ಒಂದೇ ಒಂದು ಪಂದ್ಯವನ್ನು ಆಡಿದ ಬಳಿಕ ವರುಣ್ ಚಕ್ರವರ್ತಿ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೇವಲ ನಾಲ್ಕು ಓವರ್ ಬೌಲಿಂಗ್ ಮಾಡಿದ್ದ ವರುಣ್​ಗೆ ಮತ್ತೆ ಗಾಯವಾಗಿದೆ . ಈ ಗಾಯವು ಮತ್ತೊಮ್ಮೆ ಬಿಸಿಸಿಐ ಮತ್ತು ಅದರ ಸೆಂಟರ್ ಆಫ್ ಎಕ್ಸಲೆನ್ಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ(PC-BCCI).

3 / 5
ಇಂಗ್ಲೆಂಡ್ ಸರಣಿಯಿಂದಲೂ ವರುಣ್ ಚಕ್ರವರ್ತಿ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿದ್ದು ಫಿಟ್ನೆಸ್ ಮೇಲೆ ಕೆಲಸ ಮಾಡಿದ್ದರು. ಆದರೀಗ ಒಂದು ಪಂದ್ಯದ ಬಳಿಕ ವರುಣ್ ಗಾಯಕ್ಕೆ ತುತ್ತಾಗಿದ್ದಾರೆ. ಈ ರೀತಿಯಾಗಿರುವುದು ಕೇವಲ ವರುಣ್ ಚಕ್ರವರ್ತಿಗೆ ಮಾತ್ರವಲ್ಲ. ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಆಟಗಾರರು ಈ ಹಿಂದೆ ಇದೇ ರೀತಿಯಾಗಿ ಗಾಯಕ್ಕೆ ತುತ್ತಾಗಿದ್ದಾರೆ(PC-PTI).

ಇಂಗ್ಲೆಂಡ್ ಸರಣಿಯಿಂದಲೂ ವರುಣ್ ಚಕ್ರವರ್ತಿ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿದ್ದು ಫಿಟ್ನೆಸ್ ಮೇಲೆ ಕೆಲಸ ಮಾಡಿದ್ದರು. ಆದರೀಗ ಒಂದು ಪಂದ್ಯದ ಬಳಿಕ ವರುಣ್ ಗಾಯಕ್ಕೆ ತುತ್ತಾಗಿದ್ದಾರೆ. ಈ ರೀತಿಯಾಗಿರುವುದು ಕೇವಲ ವರುಣ್ ಚಕ್ರವರ್ತಿಗೆ ಮಾತ್ರವಲ್ಲ. ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಆಟಗಾರರು ಈ ಹಿಂದೆ ಇದೇ ರೀತಿಯಾಗಿ ಗಾಯಕ್ಕೆ ತುತ್ತಾಗಿದ್ದಾರೆ(PC-PTI).

4 / 5
ಗಾಯದಿಂದ ಬಳಲುತ್ತಿರುವ ವರುಣ್ ಚಕ್ರವರ್ತಿ ಅಫ್ಘಾನಿಸ್ತಾನ ವಿರುದ್ಧದ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್​ಗೆ ಆಡುವ ಅವಕಾಶ ಸಿಗಬಹುದು. ರವಿ ಬಿಷ್ಣೋಯ್ ಎರಡನೇ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಆಡುವುದನ್ನು ಕಾಣಬಹುದು. ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಇದುವರೆಗೆ 49 ಪಂದ್ಯಗಳನ್ನಾಡಿದ್ದು 67 ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-PTI).

ಗಾಯದಿಂದ ಬಳಲುತ್ತಿರುವ ವರುಣ್ ಚಕ್ರವರ್ತಿ ಅಫ್ಘಾನಿಸ್ತಾನ ವಿರುದ್ಧದ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್​ಗೆ ಆಡುವ ಅವಕಾಶ ಸಿಗಬಹುದು. ರವಿ ಬಿಷ್ಣೋಯ್ ಎರಡನೇ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಆಡುವುದನ್ನು ಕಾಣಬಹುದು. ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಇದುವರೆಗೆ 49 ಪಂದ್ಯಗಳನ್ನಾಡಿದ್ದು 67 ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-PTI).

5 / 5
Follow Us
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ