Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಕ್ರಿಕೆಟ್​ನಿಂದ ದೂರವಿರಲು ನಿರ್ಧರಿಸಿದ ವರುಣ್ ಚಕ್ರವರ್ತಿ..! ನೀಡಿದ ಕಾರಣವೇನು ಗೊತ್ತಾ?

Varun Chakravarthy's Bold Decision: ಟೀಂ ಇಂಡಿಯಾದ ಗೂಗ್ಲಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರು ಟಿ20 ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಆದರೆ, ಅವರು ತಮ್ಮದೆ ಕಾರಣ ನೀಡಿ ಟೆಸ್ಟ್ ಕ್ರಿಕೆಟ್ ಆಡದಿರಲಿ ನಿರ್ಧರಿಸಿದ್ದಾರೆ. ಅವರ ಬೌಲಿಂಗ್ ಶೈಲಿ ಟೆಸ್ಟ್ ಕ್ರಿಕೆಟ್‌ಗೆ ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಆದರೆ, ಅವರ ಈ ನಿರ್ಧಾರ ಅಭಿಮಾನಿಗಳಿಗೆ ಆಶ್ಚರ್ಯವನ್ನುಂಟು ಮಾಡಿದೆ.

ಪೃಥ್ವಿಶಂಕರ
|

Updated on: Mar 15, 2025 | 4:08 PM

ವರುಣ್ ಚಕ್ರವರ್ತಿ... ಕಳೆದೊಂದು ತಿಂಗಳಿಂದ ಭಾರತ ಕ್ರಿಕೆಟ್ ಮಾತ್ರವಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ಟೀಂ ಇಂಡಿಯಾ ಸ್ಪಿನ್ನರ್. ತನ್ನ ಮ್ಯಾಜಿಕಲ್ ಎಸೆತಗಳಿಂದ ಎಂತಹಾ ಬ್ಯಾಟ್ಸ್‌ಮನ್ ಅನ್ನು ಕಟ್ಟಿಹಾಕುವ ಕಲೆ ಕಲಿತಿರುವ ವರುಣ್, ಪ್ರಸ್ತುತ ಟೀಂ ಇಂಡಿಯಾ ಸ್ಪಿನ್ ವಿಭಾಗದಲ್ಲಿ ಖಾಯಂ ಸ್ಥಾನ ಪಡೆದುಕೊಂಡಿದ್ದಾರೆ.

ವರುಣ್ ಚಕ್ರವರ್ತಿ... ಕಳೆದೊಂದು ತಿಂಗಳಿಂದ ಭಾರತ ಕ್ರಿಕೆಟ್ ಮಾತ್ರವಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ಟೀಂ ಇಂಡಿಯಾ ಸ್ಪಿನ್ನರ್. ತನ್ನ ಮ್ಯಾಜಿಕಲ್ ಎಸೆತಗಳಿಂದ ಎಂತಹಾ ಬ್ಯಾಟ್ಸ್‌ಮನ್ ಅನ್ನು ಕಟ್ಟಿಹಾಕುವ ಕಲೆ ಕಲಿತಿರುವ ವರುಣ್, ಪ್ರಸ್ತುತ ಟೀಂ ಇಂಡಿಯಾ ಸ್ಪಿನ್ ವಿಭಾಗದಲ್ಲಿ ಖಾಯಂ ಸ್ಥಾನ ಪಡೆದುಕೊಂಡಿದ್ದಾರೆ.

1 / 6
ಗೌತಮ್ ಗಂಭೀರ್ ಟೀಂ ಇಂಡಿಯಾ ಕೋಚ್ ಆದ ಬಳಿಕ ವರುಣ್ ಚಕ್ರವರ್ತಿಯ ನಸೀಬು ಬದಲಾಗಿದ್ದು, ಕೆಲವೇ ದಿನಗಳ ಅಂತರದಲ್ಲಿ ವರುಣ್​ಗೆ ಟಿ20 ಹಾಗೂ ಏಕದಿನ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಇತ್ತ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವರುಣ್ ಯಶಸ್ವಿಯಾಗಿದ್ದಾರೆ. ಈ ಎರಡೂ ಮಾದರಿಗಳಲ್ಲೂ ವರುಣ್​ಗೆ ಕೆಲವು ವರ್ಷಗಳವರೆಗೆ ಸ್ಥಾನ ಫಿಕ್ಸ್ ಅಂತಲೇ ಹೇಳಬಹುದು.

ಗೌತಮ್ ಗಂಭೀರ್ ಟೀಂ ಇಂಡಿಯಾ ಕೋಚ್ ಆದ ಬಳಿಕ ವರುಣ್ ಚಕ್ರವರ್ತಿಯ ನಸೀಬು ಬದಲಾಗಿದ್ದು, ಕೆಲವೇ ದಿನಗಳ ಅಂತರದಲ್ಲಿ ವರುಣ್​ಗೆ ಟಿ20 ಹಾಗೂ ಏಕದಿನ ತಂಡದಲ್ಲಿ ಆಡುವ ಅವಕಾಶ ಸಿಕ್ಕಿದೆ. ಇತ್ತ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವರುಣ್ ಯಶಸ್ವಿಯಾಗಿದ್ದಾರೆ. ಈ ಎರಡೂ ಮಾದರಿಗಳಲ್ಲೂ ವರುಣ್​ಗೆ ಕೆಲವು ವರ್ಷಗಳವರೆಗೆ ಸ್ಥಾನ ಫಿಕ್ಸ್ ಅಂತಲೇ ಹೇಳಬಹುದು.

2 / 6
ಟಿ20 ಹಾಗೂ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ವರುಣ್, ಟೆಸ್ಟ್ ಮಾದರಿಗೆ ಪದಾರ್ಪಣೆ ಮಾಡುವುದು ಯಾವಾಗ ಎಂಬುದು ಎಲ್ಲಾ ಅಭಿಮಾನಿಗಳ ಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ವರುಣ್ ಕಡೆಯಿಂದ ಬಂದಿರುವ ಉತ್ತರ ಅಭಿಮಾನಿಗಳಿಗೆ ಆಘಾತ ತಂದಿದೆ. ಏಕೆಂದರೆ ಟೆಸ್ಟ್ ಕ್ರಿಕೆಟ್​ನಿಂದ ಉಳಿಯಲು ನಿರ್ಧರಿಸಿರುವುದಾಗಿ ಸ್ವತಃ ವರುಣ್ ಅವರೇ ಹೇಳಿಕೊಂಡಿದ್ದಾರೆ.

ಟಿ20 ಹಾಗೂ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ವರುಣ್, ಟೆಸ್ಟ್ ಮಾದರಿಗೆ ಪದಾರ್ಪಣೆ ಮಾಡುವುದು ಯಾವಾಗ ಎಂಬುದು ಎಲ್ಲಾ ಅಭಿಮಾನಿಗಳ ಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ವರುಣ್ ಕಡೆಯಿಂದ ಬಂದಿರುವ ಉತ್ತರ ಅಭಿಮಾನಿಗಳಿಗೆ ಆಘಾತ ತಂದಿದೆ. ಏಕೆಂದರೆ ಟೆಸ್ಟ್ ಕ್ರಿಕೆಟ್​ನಿಂದ ಉಳಿಯಲು ನಿರ್ಧರಿಸಿರುವುದಾಗಿ ಸ್ವತಃ ವರುಣ್ ಅವರೇ ಹೇಳಿಕೊಂಡಿದ್ದಾರೆ.

3 / 6
ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ ವರುಣ್ ಚಕ್ರವರ್ತಿ ಪ್ರಸ್ತುತ ಚರ್ಚೆಯ ವಿಷಯವಾಗಿದ್ದಾರೆ. ಪ್ರಶಸ್ತಿಯನ್ನು ಗೆದ್ದ ನಂತರ ದುಬೈನಿಂದ ಹಿಂದಿರುಗಿರುವ ಅವರು ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಅವರನ್ನು ಟೆಸ್ಟ್ ಕ್ರಿಕೆಟ್ ಆಡುವ ಬಗ್ಗೆ ಪ್ರಶ್ನಿಸಲಾಯಿತು.

ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ ವರುಣ್ ಚಕ್ರವರ್ತಿ ಪ್ರಸ್ತುತ ಚರ್ಚೆಯ ವಿಷಯವಾಗಿದ್ದಾರೆ. ಪ್ರಶಸ್ತಿಯನ್ನು ಗೆದ್ದ ನಂತರ ದುಬೈನಿಂದ ಹಿಂದಿರುಗಿರುವ ಅವರು ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಅವರನ್ನು ಟೆಸ್ಟ್ ಕ್ರಿಕೆಟ್ ಆಡುವ ಬಗ್ಗೆ ಪ್ರಶ್ನಿಸಲಾಯಿತು.

4 / 6
ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ 20 ಮತ್ತು 50 ಓವರ್‌ಗಳ ಕ್ರಿಕೆಟ್‌ನತ್ತ ಮಾತ್ರ ಗಮನ ಹರಿಸುತ್ತಿದ್ದೇನೆ. ನನಗೆ ಟೆಸ್ಟ್ ಕ್ರಿಕೆಟ್ ಆಡಲು ಆಸಕ್ತಿ ಇದೆ, ಆದರೆ ನನ್ನ ಬೌಲಿಂಗ್ ಶೈಲಿ ಟೆಸ್ಟ್‌ಗೆ ಹೊಂದಿಕೆಯಾಗುವುದಿಲ್ಲ. ನಿಜ ಹೇಳಬೇಕೆಂದರೆ, ನನ್ನ ಆಕ್ಷನ್ ಮತ್ತು ಬೌಲಿಂಗ್ ಶೈಲಿಯನ್ನು ನೋಡಿದರೆ, ಟೆಸ್ಟ್‌ನಲ್ಲಿ ದೀರ್ಘ ಸ್ಪೆಲ್‌ಗಳನ್ನು ಬೌಲ್ ಮಾಡಲು ನನಗೆ ಸಾಧ್ಯವಿಲ್ಲ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ 20 ಮತ್ತು 50 ಓವರ್‌ಗಳ ಕ್ರಿಕೆಟ್‌ನತ್ತ ಮಾತ್ರ ಗಮನ ಹರಿಸುತ್ತಿದ್ದೇನೆ. ನನಗೆ ಟೆಸ್ಟ್ ಕ್ರಿಕೆಟ್ ಆಡಲು ಆಸಕ್ತಿ ಇದೆ, ಆದರೆ ನನ್ನ ಬೌಲಿಂಗ್ ಶೈಲಿ ಟೆಸ್ಟ್‌ಗೆ ಹೊಂದಿಕೆಯಾಗುವುದಿಲ್ಲ. ನಿಜ ಹೇಳಬೇಕೆಂದರೆ, ನನ್ನ ಆಕ್ಷನ್ ಮತ್ತು ಬೌಲಿಂಗ್ ಶೈಲಿಯನ್ನು ನೋಡಿದರೆ, ಟೆಸ್ಟ್‌ನಲ್ಲಿ ದೀರ್ಘ ಸ್ಪೆಲ್‌ಗಳನ್ನು ಬೌಲ್ ಮಾಡಲು ನನಗೆ ಸಾಧ್ಯವಿಲ್ಲ ಎಂದಿದ್ದಾರೆ.

5 / 6
ವರುಣ್ ಅವರ ಈ ಹೇಳಿಕೆಯನ್ನು ಕೆಲವು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕನಿಷ್ಠ ಪಕ್ಷ ವರುಣ್‌ಗೆ ತನ್ನ ಬೌಲಿಂಗ್ ಬಗ್ಗೆ ಒಂದು ಕಲ್ಪನೆ ಇದೆ ಎಂದು ಹೇಳುತ್ತಿದ್ದಾರೆ. ಇನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ವರುಣ್ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿದ 3 ಪಂದ್ಯಗಳಲ್ಲಿ ಅವರು 9 ವಿಕೆಟ್‌ಗಳನ್ನು ಕಬಳಿಸಿದ್ದರು ಮತ್ತು ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು.

ವರುಣ್ ಅವರ ಈ ಹೇಳಿಕೆಯನ್ನು ಕೆಲವು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕನಿಷ್ಠ ಪಕ್ಷ ವರುಣ್‌ಗೆ ತನ್ನ ಬೌಲಿಂಗ್ ಬಗ್ಗೆ ಒಂದು ಕಲ್ಪನೆ ಇದೆ ಎಂದು ಹೇಳುತ್ತಿದ್ದಾರೆ. ಇನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ವರುಣ್ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಆಡಿದ 3 ಪಂದ್ಯಗಳಲ್ಲಿ ಅವರು 9 ವಿಕೆಟ್‌ಗಳನ್ನು ಕಬಳಿಸಿದ್ದರು ಮತ್ತು ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು.

6 / 6
Follow us
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್