AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನೊಂದಿಗೆ ದಾಖಲೆಗೆ ಕೊರೊಳೊಡ್ಡಿದ ವರುಣ್ ಚಕ್ರವರ್ತಿ

South Africa vs India: ಭಾರತದ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿಯ 2ನೇ ಮ್ಯಾಚ್​ನಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಗುರಿಯನ್ನು ಸೌತ್ ಆಫ್ರಿಕಾ ತಂಡ 19 ಓವರ್​ಗಳಲ್ಲಿ ಚೇಸ್ ಮಾಡಿ, 3 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Nov 11, 2024 | 7:56 AM

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.

1 / 7
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.

2 / 7
ರೀಝ ಹೆಂಡ್ರಿಕ್ಸ್ (24) ಹಾಗೂ ಐಡೆನ್ ಮಾರ್ಕ್ರಾಮ್ (3) ಅವರನ್ನು ಬೌಲ್ಡ್ ಮಾಡಿದ ವರುಣ್ ಚಕ್ರವರ್ತಿ, ಆ ಬಳಿಕ ಮಾರ್ಕೊ ಯಾನ್ಸೆನ್​​ಗೆ (7) ಪೆವಿಲಿಯನ್​ ಹಾದಿ ತೋರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ (2) ಹಾಗೂ ಡೇವಿಡ್ ಮಿಲ್ಲರ್ (0) ಔಟ್ ಮಾಡಿದರು.

ರೀಝ ಹೆಂಡ್ರಿಕ್ಸ್ (24) ಹಾಗೂ ಐಡೆನ್ ಮಾರ್ಕ್ರಾಮ್ (3) ಅವರನ್ನು ಬೌಲ್ಡ್ ಮಾಡಿದ ವರುಣ್ ಚಕ್ರವರ್ತಿ, ಆ ಬಳಿಕ ಮಾರ್ಕೊ ಯಾನ್ಸೆನ್​​ಗೆ (7) ಪೆವಿಲಿಯನ್​ ಹಾದಿ ತೋರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ (2) ಹಾಗೂ ಡೇವಿಡ್ ಮಿಲ್ಲರ್ (0) ಔಟ್ ಮಾಡಿದರು.

3 / 7
ಈ ಮೂಲಕ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದಾಗ್ಯೂ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 3 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ವರುಣ್ ಚಕ್ರವರ್ತಿ ಹೆಸರಿಗೆ ಶ್ರೇಷ್ಠ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ.

ಈ ಮೂಲಕ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದಾಗ್ಯೂ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 3 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ವರುಣ್ ಚಕ್ರವರ್ತಿ ಹೆಸರಿಗೆ ಶ್ರೇಷ್ಠ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ.

4 / 7
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸೋತ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆಯೊಂದು ವರುಣ್ ಚಕ್ರವರ್ತಿ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಮುಸ್ತಫಿಜುರ್ ರೆಹಮಾನ್ ಹೆಸರಿನಲ್ಲಿತ್ತು.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸೋತ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆಯೊಂದು ವರುಣ್ ಚಕ್ರವರ್ತಿ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಮುಸ್ತಫಿಜುರ್ ರೆಹಮಾನ್ ಹೆಸರಿನಲ್ಲಿತ್ತು.

5 / 7
ಬಾಂಗ್ಲಾದೇಶ್ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ 2016 ರಲ್ಲಿ ನ್ಯೂಝಿಲೆಂಡ್ ವಿರುದ್ಧ 22 ರನ್​ ನೀಡಿ 5 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ 75 ರನ್​ಗಳಿಂದ ಸೋಲನುಭವಿಸಿತ್ತು.

ಬಾಂಗ್ಲಾದೇಶ್ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ 2016 ರಲ್ಲಿ ನ್ಯೂಝಿಲೆಂಡ್ ವಿರುದ್ಧ 22 ರನ್​ ನೀಡಿ 5 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ 75 ರನ್​ಗಳಿಂದ ಸೋಲನುಭವಿಸಿತ್ತು.

6 / 7
ಇದೀಗ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ವರುಣ್ ಚಕ್ರವರ್ತಿ ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಸೋಲಿನಲ್ಲಿ ಕೊನೆಗೊಂಡ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇದೇ ಮೊದಲ ಬಾರಿಗೆ ಭಾರತೀಯ ಬೌಲರ್​ರೊಬ್ಬರು 5 ವಿಕೆಟ್ ಕಬಳಿಸಿದರೂ ಟೀಮ್ ಇಂಡಿಯಾ ಟಿ20 ಪಂದ್ಯದಲ್ಲಿ ಸೋಲನುಭವಿಸಿದೆ.

ಇದೀಗ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ವರುಣ್ ಚಕ್ರವರ್ತಿ ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಸೋಲಿನಲ್ಲಿ ಕೊನೆಗೊಂಡ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇದೇ ಮೊದಲ ಬಾರಿಗೆ ಭಾರತೀಯ ಬೌಲರ್​ರೊಬ್ಬರು 5 ವಿಕೆಟ್ ಕಬಳಿಸಿದರೂ ಟೀಮ್ ಇಂಡಿಯಾ ಟಿ20 ಪಂದ್ಯದಲ್ಲಿ ಸೋಲನುಭವಿಸಿದೆ.

7 / 7
Follow us
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ