AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh Iyer: ವೆಂಕಿಯ ಬೆಂಕಿ ಬ್ಯಾಟಿಂಗ್: ಒಂದು ಶತಕ, ಹಲವು ದಾಖಲೆಗಳು

IPL 2023 Kannada: 15 ವರ್ಷಗಳ ಬಳಿಕ ಕೆಕೆಆರ್ ಪರ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2023 | 10:30 PM

IPL 2023: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಕೆಕೆಆರ್ ಬ್ಯಾಟರ್ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

IPL 2023: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಕೆಕೆಆರ್ ಬ್ಯಾಟರ್ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 9
ಈ ಪಂದ್ಯದಲ್ಲಿ ವೆಂಕಿ ಕೇವಲ 49 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಶತಕ ಪೂರೈಸಿದ್ದರು. ಈ ಮೂಲಕ ಕೆಕೆಆರ್ ಪರ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಈ ಪಂದ್ಯದಲ್ಲಿ ವೆಂಕಿ ಕೇವಲ 49 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಶತಕ ಪೂರೈಸಿದ್ದರು. ಈ ಮೂಲಕ ಕೆಕೆಆರ್ ಪರ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 9
ಅಲ್ಲದೆ ಐಪಿಎಲ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಮೊದಲ ಕೆಕೆಆರ್ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 19ನೇ ಬ್ಯಾಟರ್ ಎನಿಸಿಕೊಂಡರು.

ಅಲ್ಲದೆ ಐಪಿಎಲ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಮೊದಲ ಕೆಕೆಆರ್ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 19ನೇ ಬ್ಯಾಟರ್ ಎನಿಸಿಕೊಂಡರು.

3 / 9
ಇನ್ನು ಕೆಕೆಆರ್ ಪರ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ವೆಂಕಟೇಶ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2008 ರಲ್ಲಿ ಬ್ರೆಂಡನ್ ಮೆಕಲಂ ಶತಕ ಬಾರಿಸಿದ್ದರು. ಇದೀಗ 15 ವರ್ಷಗಳ ಬಳಿಕ ಕೆಕೆಆರ್ ಬ್ಯಾಟರ್​ರೊಬ್ಬರು ಶತಕ ಸಿಡಿಸಿರುವುದು ವಿಶೇಷ.

ಇನ್ನು ಕೆಕೆಆರ್ ಪರ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ವೆಂಕಟೇಶ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2008 ರಲ್ಲಿ ಬ್ರೆಂಡನ್ ಮೆಕಲಂ ಶತಕ ಬಾರಿಸಿದ್ದರು. ಇದೀಗ 15 ವರ್ಷಗಳ ಬಳಿಕ ಕೆಕೆಆರ್ ಬ್ಯಾಟರ್​ರೊಬ್ಬರು ಶತಕ ಸಿಡಿಸಿರುವುದು ವಿಶೇಷ.

4 / 9
ಐಪಿಎಲ್ 2023 ರಲ್ಲಿ ವೇಗದ ಶತಕ ಬಾರಿಸಿದ ದಾಖಲೆ ಕೂಡ ವೆಂಕಟೇಶ್ ಅಯ್ಯರ್ ಪಾಲಾಗಿದೆ. ಇದಕ್ಕೂ ಮುನ್ನ ಎಸ್​ಆರ್​ಹೆಚ್ ತಂಡದ ಹ್ಯಾರಿ ಬ್ರೂಕ್ 55 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ವೆಂಕಿ ಕೇವಲ 49 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.

ಐಪಿಎಲ್ 2023 ರಲ್ಲಿ ವೇಗದ ಶತಕ ಬಾರಿಸಿದ ದಾಖಲೆ ಕೂಡ ವೆಂಕಟೇಶ್ ಅಯ್ಯರ್ ಪಾಲಾಗಿದೆ. ಇದಕ್ಕೂ ಮುನ್ನ ಎಸ್​ಆರ್​ಹೆಚ್ ತಂಡದ ಹ್ಯಾರಿ ಬ್ರೂಕ್ 55 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ವೆಂಕಿ ಕೇವಲ 49 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.

5 / 9
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಬಾರಿಸಿದ ಮೊದಲ ಕೆಕೆಆರ್ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ವೆಂಕಟೇಶ್ ಅಯ್ಯರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶತಕ ಬಾರಿಸಿದ ಬ್ರೆಂಡನ್ ಮೆಕಲಂ ಆರ್​ಸಿಬಿ ವಿರುದ್ಧ ಈ ಸಾಧನೆ ಮಾಡಿದ್ದರು.

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಬಾರಿಸಿದ ಮೊದಲ ಕೆಕೆಆರ್ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ವೆಂಕಟೇಶ್ ಅಯ್ಯರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶತಕ ಬಾರಿಸಿದ ಬ್ರೆಂಡನ್ ಮೆಕಲಂ ಆರ್​ಸಿಬಿ ವಿರುದ್ಧ ಈ ಸಾಧನೆ ಮಾಡಿದ್ದರು.

6 / 9
ಕೆಕೆಆರ್ ಪರ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಈ ಪಂದ್ಯದ ಮೂಲಕ ವೆಂಕಟೇಶ್ ಅಯ್ಯರ್ ನಿರ್ಮಿಸಿದ್ದಾರೆ. ವೆಂಕಿ ಈ ಪಂದ್ಯದಲ್ಲಿ ಒಟ್ಟು 9 ಭರ್ಜರಿ ಸಿಕ್ಸ್ ಬಾರಿಸಿದ್ದರು. ಇನ್ನು ಕೆಕೆಆರ್ ಪರ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ್ದು ಬ್ರೆಂಡನ್ ಮೆಕಲಂ (13 ಸಿಕ್ಸ್).

ಕೆಕೆಆರ್ ಪರ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಈ ಪಂದ್ಯದ ಮೂಲಕ ವೆಂಕಟೇಶ್ ಅಯ್ಯರ್ ನಿರ್ಮಿಸಿದ್ದಾರೆ. ವೆಂಕಿ ಈ ಪಂದ್ಯದಲ್ಲಿ ಒಟ್ಟು 9 ಭರ್ಜರಿ ಸಿಕ್ಸ್ ಬಾರಿಸಿದ್ದರು. ಇನ್ನು ಕೆಕೆಆರ್ ಪರ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ್ದು ಬ್ರೆಂಡನ್ ಮೆಕಲಂ (13 ಸಿಕ್ಸ್).

7 / 9
ಇನ್ನು ಐಪಿಎಲ್​ನಲ್ಲಿ ಸ್ಪೋಟಕ ಶತಕ ಸಿಡಿಸಿದ 8ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವೆಂಕಟೇಶ್ ಅಯ್ಯರ್ ಪಾತ್ರರಾಗಿದ್ದಾರೆ. ಅಯ್ಯರ್ 49 ಎಸೆತಗಳಲ್ಲಿ ಶತಕ ಪೂರೈಸಿ ಈ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು 37 ಎಸೆತಗಳಲ್ಲಿ ಶತಕ ಬಾರಿಸಿದ ಯೂಸುಫ್ ಪಠಾಣ್.

ಇನ್ನು ಐಪಿಎಲ್​ನಲ್ಲಿ ಸ್ಪೋಟಕ ಶತಕ ಸಿಡಿಸಿದ 8ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವೆಂಕಟೇಶ್ ಅಯ್ಯರ್ ಪಾತ್ರರಾಗಿದ್ದಾರೆ. ಅಯ್ಯರ್ 49 ಎಸೆತಗಳಲ್ಲಿ ಶತಕ ಪೂರೈಸಿ ಈ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು 37 ಎಸೆತಗಳಲ್ಲಿ ಶತಕ ಬಾರಿಸಿದ ಯೂಸುಫ್ ಪಠಾಣ್.

8 / 9
ಒಟ್ಟಿನಲ್ಲಿ 15 ವರ್ಷಗಳ ಬಳಿಕ ಕೆಕೆಆರ್ ಪರ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

ಒಟ್ಟಿನಲ್ಲಿ 15 ವರ್ಷಗಳ ಬಳಿಕ ಕೆಕೆಆರ್ ಪರ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

9 / 9
Follow us
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್