AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KS Bharat: ಬರೋಬ್ಬರಿ 317 ರನ್​ಗಳು: ದೇಶೀಯ ಅಂಗಳದಲ್ಲಿ ಭರತ್ ಸಿಡಿಲಬ್ಬರ

Vijay Hazare Trophy 2021: ಈ ಹಿಂದಿನ ಪಂದ್ಯದಲ್ಲೂ ಭರತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹಿಮಾಚಲ ವಿರುದ್ದದ ಪಂದ್ಯದಲ್ಲಿ 109 ಎಸೆತಗಳಲ್ಲಿ ಅಜೇಯ 161 ರನ್​ ಬಾರಿಸಿ ಮಿಂಚಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on:Dec 14, 2021 | 6:20 PM

Share
ವಿಜಯ್ ಹಜಾರೆ ಟೂರ್ನಿಯಲ್ಲಿ ಆಂಧ್ರಪ್ರದೇಶ ತಂಡದ ನಾಯಕ ಶ್ರೀಕರ್ ಭರತ್ ಅಬ್ಬರ ಮುಂದುವರೆದಿದೆ. ಹಿಮಾಚಲ ಪ್ರದೇಶ ತಂಡದ ವಿರುದ್ದ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಭರತ್ ಇದೀಗ ಮತ್ತೊಂದು ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ್ದಾರೆ.

ವಿಜಯ್ ಹಜಾರೆ ಟೂರ್ನಿಯಲ್ಲಿ ಆಂಧ್ರಪ್ರದೇಶ ತಂಡದ ನಾಯಕ ಶ್ರೀಕರ್ ಭರತ್ ಅಬ್ಬರ ಮುಂದುವರೆದಿದೆ. ಹಿಮಾಚಲ ಪ್ರದೇಶ ತಂಡದ ವಿರುದ್ದ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಭರತ್ ಇದೀಗ ಮತ್ತೊಂದು ಸೆಂಚುರಿ ಬಾರಿಸಿದ್ದಾರೆ. ಈ ಮೂಲಕ ಬ್ಯಾಕ್ ಟು ಬ್ಯಾಕ್ ಸೆಂಚುರಿಯೊಂದಿಗೆ ಸಿಡಿಲಬ್ಬರ ಮುಂದುವರೆಸಿದ್ದಾರೆ.

1 / 6
 ಗುಜರಾತ್ ವಿರುದ್ದ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಸೋತ ಆಂಧ್ರಪ್ರದೇಶ ಮೊದಲ ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆಂಧ್ರ ಆರಂಭಿಕ ಜ್ಞಾನೇಶ್ವರ್ ಕೇವಲ 1 ರನ್​ಗೆ ಔಟಾಗಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಭರತ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಗುಜರಾತ್ ವಿರುದ್ದ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಸೋತ ಆಂಧ್ರಪ್ರದೇಶ ಮೊದಲ ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಆಂಧ್ರ ಆರಂಭಿಕ ಜ್ಞಾನೇಶ್ವರ್ ಕೇವಲ 1 ರನ್​ಗೆ ಔಟಾಗಿದ್ದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಭರತ್ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

2 / 6
ಒಂದೆಡೆ ಭರತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದರೆ ಮತ್ತೊಂದು ವಿಕೆಟ್ ಬೀಳುತ್ತಿದ್ದವು. ಇದಾಗ್ಯೂ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ಭರತ್ 138 ಎಸೆತಗಳಲ್ಲಿ 16 ಬೌಂಡರಿ 7 ಸಿಕ್ಸ್​ಗಳನ್ನು ಸಿಡಿಸಿ 156 ರನ್​ ಕಲೆಹಾಕಿದರು. ಈ ಸ್ಪೋಟಕ ಇನಿಂಗ್ಸ್​ ನೆರವಿನಿಂದ ಆಂಧ್ರ ತಂಡವು 50 ಓವರ್​ನಲ್ಲಿ 253 ರನ್​ ಕಲೆಹಾಕಲು ಸಾಧ್ಯವಾಯಿತು. ಅಂದರೆ ತಂಡದ ಒಟ್ಟಾರೆ ಮೊತ್ತದ ಅರ್ಧದಷ್ಟು ರನ್​ಗಳನ್ನು ಭರತ್ ಒಬ್ಬರೇ ಕಲೆಹಾಕಿದ್ದರು.

ಒಂದೆಡೆ ಭರತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದರೆ ಮತ್ತೊಂದು ವಿಕೆಟ್ ಬೀಳುತ್ತಿದ್ದವು. ಇದಾಗ್ಯೂ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ಭರತ್ 138 ಎಸೆತಗಳಲ್ಲಿ 16 ಬೌಂಡರಿ 7 ಸಿಕ್ಸ್​ಗಳನ್ನು ಸಿಡಿಸಿ 156 ರನ್​ ಕಲೆಹಾಕಿದರು. ಈ ಸ್ಪೋಟಕ ಇನಿಂಗ್ಸ್​ ನೆರವಿನಿಂದ ಆಂಧ್ರ ತಂಡವು 50 ಓವರ್​ನಲ್ಲಿ 253 ರನ್​ ಕಲೆಹಾಕಲು ಸಾಧ್ಯವಾಯಿತು. ಅಂದರೆ ತಂಡದ ಒಟ್ಟಾರೆ ಮೊತ್ತದ ಅರ್ಧದಷ್ಟು ರನ್​ಗಳನ್ನು ಭರತ್ ಒಬ್ಬರೇ ಕಲೆಹಾಕಿದ್ದರು.

3 / 6
ಈ ಹಿಂದಿನ ಪಂದ್ಯದಲ್ಲೂ ಭರತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹಿಮಾಚಲ ವಿರುದ್ದದ ಪಂದ್ಯದಲ್ಲಿ 109 ಎಸೆತಗಳಲ್ಲಿ ಅಜೇಯ 161 ರನ್​ ಬಾರಿಸಿ ಮಿಂಚಿದ್ದರು. ಇದೀಗ ಮತ್ತೊಮ್ಮೆ 150ಕ್ಕೂ ಅಧಿಕ ರನ್ ಬಾರಿಸುವ ಮೂಲಕ ಸತತ ಎರಡು ಇನಿಂಗ್ಸ್​ಗಳಿಂದ 317 ರನ್​ ಕಲೆಹಾಕಿದ್ದಾರೆ.

ಈ ಹಿಂದಿನ ಪಂದ್ಯದಲ್ಲೂ ಭರತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಹಿಮಾಚಲ ವಿರುದ್ದದ ಪಂದ್ಯದಲ್ಲಿ 109 ಎಸೆತಗಳಲ್ಲಿ ಅಜೇಯ 161 ರನ್​ ಬಾರಿಸಿ ಮಿಂಚಿದ್ದರು. ಇದೀಗ ಮತ್ತೊಮ್ಮೆ 150ಕ್ಕೂ ಅಧಿಕ ರನ್ ಬಾರಿಸುವ ಮೂಲಕ ಸತತ ಎರಡು ಇನಿಂಗ್ಸ್​ಗಳಿಂದ 317 ರನ್​ ಕಲೆಹಾಕಿದ್ದಾರೆ.

4 / 6
ಸತತ ಸೆಂಚುರಿ ಮೂಲಕ ಗಮನ ಸೆಳೆದಿರುವ ಭರತ್ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಟೆಸ್ಟ್​ ತಂಡಕ್ಕೆ ಆಯ್ಕೆಯಾದರೂ ಆಡುವ ಅವಕಾಶ ದೊರೆತಿರಲಿಲ್ಲ. ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾ ಸರಣಿಯಿಂದ ಕೈಬಿಡಲಾಗಿದೆ. ಇದೀಗ ದೇಶೀಯ ಅಂಗಳದಲ್ಲಿ ಭರ್ಜರಿ ಫಾರ್ಮ್​ ಪ್ರದರ್ಶಿಸುವ ಮೂಲಕ ರಿಷಭ್ ಪಂತ್, ವೃದ್ಧಿಮಾನ್ ಸಾಹಾ ಪೈಪೋಟಿ ನೀಡಲು ಮುಂದಾಗಿದ್ದಾರೆ.

ಸತತ ಸೆಂಚುರಿ ಮೂಲಕ ಗಮನ ಸೆಳೆದಿರುವ ಭರತ್ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಆಕಾಂಕ್ಷಿಯಾಗಿದ್ದಾರೆ. ಈ ಹಿಂದೆ ಟೆಸ್ಟ್​ ತಂಡಕ್ಕೆ ಆಯ್ಕೆಯಾದರೂ ಆಡುವ ಅವಕಾಶ ದೊರೆತಿರಲಿಲ್ಲ. ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾ ಸರಣಿಯಿಂದ ಕೈಬಿಡಲಾಗಿದೆ. ಇದೀಗ ದೇಶೀಯ ಅಂಗಳದಲ್ಲಿ ಭರ್ಜರಿ ಫಾರ್ಮ್​ ಪ್ರದರ್ಶಿಸುವ ಮೂಲಕ ರಿಷಭ್ ಪಂತ್, ವೃದ್ಧಿಮಾನ್ ಸಾಹಾ ಪೈಪೋಟಿ ನೀಡಲು ಮುಂದಾಗಿದ್ದಾರೆ.

5 / 6
ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 8 ಪಂದ್ಯಗಳನ್ನಾಡಿದ್ದ ಭರತ್ 7 ಇನಿಂಗ್ಸ್​ಗಳಿಂದ 191 ರನ್​ ಕಲೆಹಾಕಿದ್ದರು. ಇದರಲ್ಲಿ ಒಂದು ಅರ್ಧಶತಕ ಕೂಡ ಸೇರಿದೆ. ಇದಾಗ್ಯೂ ಈ ಬಾರಿ ವಿಕೆಟ್ ಕೀಪರ್ ಬ್ಯಾಟರ್ ಭರತ್ ಅವರನ್ನು ಆರ್​ಸಿಬಿ ಉಳಿಸಿಕೊಂಡಿಲ್ಲ. ಇದೀಗ ಭರ್ಜರಿ ಫಾರ್ಮ್ ಪ್ರದರ್ಶಿಸುವ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುತ್ತಿದ್ದಾರೆ ಶ್ರೀಕರ್ ಭರತ್.

ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ 8 ಪಂದ್ಯಗಳನ್ನಾಡಿದ್ದ ಭರತ್ 7 ಇನಿಂಗ್ಸ್​ಗಳಿಂದ 191 ರನ್​ ಕಲೆಹಾಕಿದ್ದರು. ಇದರಲ್ಲಿ ಒಂದು ಅರ್ಧಶತಕ ಕೂಡ ಸೇರಿದೆ. ಇದಾಗ್ಯೂ ಈ ಬಾರಿ ವಿಕೆಟ್ ಕೀಪರ್ ಬ್ಯಾಟರ್ ಭರತ್ ಅವರನ್ನು ಆರ್​ಸಿಬಿ ಉಳಿಸಿಕೊಂಡಿಲ್ಲ. ಇದೀಗ ಭರ್ಜರಿ ಫಾರ್ಮ್ ಪ್ರದರ್ಶಿಸುವ ಮೂಲಕ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆಯುತ್ತಿದ್ದಾರೆ ಶ್ರೀಕರ್ ಭರತ್.

6 / 6

Published On - 4:12 pm, Tue, 14 December 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು