AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ಬ್ಯಾಕ್ ಟು ಬ್ಯಾಕ್ ಸೆಂಚುರಿ: ಕೊಹ್ಲಿ ದಾಖಲೆ ಸರಿಗಟ್ಟಿದ ರುತುರಾಜ್

Vijay Hazare Trophy: ಚಂಡೀಗಢ್ ನೀಡಿದ 309 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಮಹಾರಾಷ್ಟ್ರ ಪರ ರುತುರಾಜ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ ರುತುರಾಜ್ 132 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಬೌಂಡರಿಗಳೊಂದಿಗೆ 168 ರನ್ ಚಚ್ಚಿದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 14, 2021 | 6:13 PM

Share
ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬ್ಯಾಕ್ ಟು ಬ್ಯಾಕ್ 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಚಂಡೀಗಢ್ ವಿರುದ್ದ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ರುತುರಾಜ್ ತಂಡಕ್ಕೆ ಗೆಲುವು ತಂದುಕೊಟ್ಟರು.

ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬ್ಯಾಕ್ ಟು ಬ್ಯಾಕ್ 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಚಂಡೀಗಢ್ ವಿರುದ್ದ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ರುತುರಾಜ್ ತಂಡಕ್ಕೆ ಗೆಲುವು ತಂದುಕೊಟ್ಟರು.

1 / 6
ಚಂಡೀಗಢ್ ನೀಡಿದ 309 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಮಹಾರಾಷ್ಟ್ರ ಪರ ರುತುರಾಜ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ ರುತುರಾಜ್ 132 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಬೌಂಡರಿಗಳೊಂದಿಗೆ 168 ರನ್ ಚಚ್ಚಿದರು. ಮತ್ತೊಂದೆಡೆ ಅಜೀಂ ಖಾಝಿ 73 ರನ್ ಬಾರಿಸಿದರು. ಪರಿಣಾಮ 7 ಎಸೆತಗಳು ಬಾಕಿ ಇರುವಂತೆ ಮಹಾರಾಷ್ಟ್ರ ತಂಡವು 5 ವಿಕೆಟ್ ನಷ್ಟಕ್ಕೆ 313 ರನ್​ಗಳಿಸಿ ಭರ್ಜರಿ ಜಯ ಸಾಧಿಸಿತು.

ಚಂಡೀಗಢ್ ನೀಡಿದ 309 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಮಹಾರಾಷ್ಟ್ರ ಪರ ರುತುರಾಜ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ ರುತುರಾಜ್ 132 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಬೌಂಡರಿಗಳೊಂದಿಗೆ 168 ರನ್ ಚಚ್ಚಿದರು. ಮತ್ತೊಂದೆಡೆ ಅಜೀಂ ಖಾಝಿ 73 ರನ್ ಬಾರಿಸಿದರು. ಪರಿಣಾಮ 7 ಎಸೆತಗಳು ಬಾಕಿ ಇರುವಂತೆ ಮಹಾರಾಷ್ಟ್ರ ತಂಡವು 5 ವಿಕೆಟ್ ನಷ್ಟಕ್ಕೆ 313 ರನ್​ಗಳಿಸಿ ಭರ್ಜರಿ ಜಯ ಸಾಧಿಸಿತು.

2 / 6
ಅಂದಹಾಗೆ ಇದು ಈ ಬಾರಿಯ ಟೂರ್ನಿಯಲ್ಲಿ ರುತುರಾಜ್ ಗಾಯಕ್ವಾಡ್ ಅವರ 4ನೇ ಶತಕ ಎಂಬುದು ವಿಶೇಷ. ಇದಕ್ಕೂ ಮುನ್ನ ಮಧ್ಯಪ್ರದೇಶ ವಿರುದ್ಧ 136, ಛತ್ತೀಸ್‌ಗಢ ವಿರುದ್ಧ ಅಜೇಯ 154, ಕೇರಳ ವಿರುದ್ಧ 124 ರನ್ ಬಾರಿಸಿದ್ದರು. ಇನ್ನು ಉತ್ತರಾಖಂಡ್ ವಿರುದ್ಧ 21 ರನ್ ಗಳಿಸಿದ್ದ ಗಾಯಕ್ವಾಡ್ ಇದೀಗ ಲೀಗ್ ಹಂತದ 5 ಪಂದ್ಯಗಳಿಂದ 603 ರನ್ ಕಲೆಹಾಕಿದ್ದಾರೆ.

ಅಂದಹಾಗೆ ಇದು ಈ ಬಾರಿಯ ಟೂರ್ನಿಯಲ್ಲಿ ರುತುರಾಜ್ ಗಾಯಕ್ವಾಡ್ ಅವರ 4ನೇ ಶತಕ ಎಂಬುದು ವಿಶೇಷ. ಇದಕ್ಕೂ ಮುನ್ನ ಮಧ್ಯಪ್ರದೇಶ ವಿರುದ್ಧ 136, ಛತ್ತೀಸ್‌ಗಢ ವಿರುದ್ಧ ಅಜೇಯ 154, ಕೇರಳ ವಿರುದ್ಧ 124 ರನ್ ಬಾರಿಸಿದ್ದರು. ಇನ್ನು ಉತ್ತರಾಖಂಡ್ ವಿರುದ್ಧ 21 ರನ್ ಗಳಿಸಿದ್ದ ಗಾಯಕ್ವಾಡ್ ಇದೀಗ ಲೀಗ್ ಹಂತದ 5 ಪಂದ್ಯಗಳಿಂದ 603 ರನ್ ಕಲೆಹಾಕಿದ್ದಾರೆ.

3 / 6
 ಈ ನಾಲ್ಕು ಶತಕಗಳೊಂದಿಗೆ ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟ್ರೋಫಿಯ ಒಂದೇ ಸೀಸನ್​ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ವಿರಾಟ್ ಕೊಹ್ಲಿ, ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ಅವರ ದಾಖಲೆಗಳನ್ನು ಸರಿಗಟ್ಟಿದ್ದಾರೆ. 2009/10 ಸೀಸನ್​ನಲ್ಲಿ ಕೊಹ್ಲಿ 4 ಶತಕ ಸಿಡಿಸಿ ದಾಖಲೆ ಬರೆದಿದ್ದರು. ಆ ಬಳಿಕ  2020/21 ರ ಸೀಸನ್​ನಲ್ಲಿ ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ನಾಲ್ಕು ಸೆಂಚುರಿ ಬಾರಿಸಿದ್ದರು. ಇದೀಗ ಲೀಗ್ ಹಂತದ ಐದು ಪಂದ್ಯಗಳಲ್ಲಿ 4 ಶತಕ ಸಿಡಿಸಿ ರುತುರಾಜ್ ಗಾಯಕ್ವಾಡ್ ಕೂಡ ದೇಶೀಯ ಶತಕ ಸರದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಈ ನಾಲ್ಕು ಶತಕಗಳೊಂದಿಗೆ ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟ್ರೋಫಿಯ ಒಂದೇ ಸೀಸನ್​ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ವಿರಾಟ್ ಕೊಹ್ಲಿ, ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ಅವರ ದಾಖಲೆಗಳನ್ನು ಸರಿಗಟ್ಟಿದ್ದಾರೆ. 2009/10 ಸೀಸನ್​ನಲ್ಲಿ ಕೊಹ್ಲಿ 4 ಶತಕ ಸಿಡಿಸಿ ದಾಖಲೆ ಬರೆದಿದ್ದರು. ಆ ಬಳಿಕ 2020/21 ರ ಸೀಸನ್​ನಲ್ಲಿ ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ನಾಲ್ಕು ಸೆಂಚುರಿ ಬಾರಿಸಿದ್ದರು. ಇದೀಗ ಲೀಗ್ ಹಂತದ ಐದು ಪಂದ್ಯಗಳಲ್ಲಿ 4 ಶತಕ ಸಿಡಿಸಿ ರುತುರಾಜ್ ಗಾಯಕ್ವಾಡ್ ಕೂಡ ದೇಶೀಯ ಶತಕ ಸರದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

4 / 6
ಇನ್ನು ಈ ಬಾರಿ ರುತುರಾಜ್ ಗಾಯಕ್ವಾಡ್ ಒಟ್ಟು 19 ಸಿಕ್ಸರ್ ಮತ್ತು 51 ಬೌಂಡರಿಗಳನ್ನು ಬಾರಿಸಿರುವುದು ವಿಶೇಷ. ಕಳೆದ ಸೀಸನ್​ ಐಪಿಎಲ್​ನಲ್ಲಿ 634 ರನ್​ ಬಾರಿಸಿದ್ದ ರುತುರಾಜ್ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಅಷ್ಟೇ ಅಲ್ಲದೆ ಸಿಎಸ್​ಕೆ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇನ್ನು ಈ ಬಾರಿ ರುತುರಾಜ್ ಗಾಯಕ್ವಾಡ್ ಒಟ್ಟು 19 ಸಿಕ್ಸರ್ ಮತ್ತು 51 ಬೌಂಡರಿಗಳನ್ನು ಬಾರಿಸಿರುವುದು ವಿಶೇಷ. ಕಳೆದ ಸೀಸನ್​ ಐಪಿಎಲ್​ನಲ್ಲಿ 634 ರನ್​ ಬಾರಿಸಿದ್ದ ರುತುರಾಜ್ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಅಷ್ಟೇ ಅಲ್ಲದೆ ಸಿಎಸ್​ಕೆ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

5 / 6
ಇದೀಗ ದೇಶೀಯ ಟೂರ್ನಿಯಲ್ಲಿ ಕೇವಲ 5 ಪಂದ್ಯಗಳಿಂದ 603 ರನ್ ಬಾರಿಸುವ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

ಇದೀಗ ದೇಶೀಯ ಟೂರ್ನಿಯಲ್ಲಿ ಕೇವಲ 5 ಪಂದ್ಯಗಳಿಂದ 603 ರನ್ ಬಾರಿಸುವ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.

6 / 6
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?