AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪಿಲ್ ದೇವ್ ಷರತ್ತು ಒಪ್ಪಿಕೊಂಡ ಕಾಂಬ್ಳಿ; 15ನೇ ಬಾರಿಗೆ ರಿಹ್ಯಾಬ್ ಸೆಂಟರ್​ಗೆ ವಿನೋದ್

Vinod Kambli: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ನಿರ್ವಹಣೆಗೂ ಕಷ್ಟಪಡುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರು ಕಪಿಲ್ ದೇವ್ ಮತ್ತು 1983 ರ ವಿಶ್ವಕಪ್ ವಿಜೇತ ತಂಡದ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ ಮತ್ತು 15 ನೇ ಬಾರಿಗೆ ಪುನರ್ವಸತಿಗೆ ಹೋಗಲು ಸಿದ್ಧರಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 13, 2024 | 5:52 PM

Share
ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ನಿರ್ವಹಣೆಗೂ ಕಷ್ಟಪಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ನೆರವಿಗೆ 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರು ಸಿದ್ಧವಿರುವುದಾಗಿ ಈ ಹಿಂದೆಯೇ ಘೋಷಿಸಿದ್ದರು. ಆದರೆ ಕಾಂಬ್ಳಿಗೆ ನೆರವು ನೀಡುವುದಕ್ಕೆ ಒಂದು ಷರತ್ತು ವಿಧಿಸಿದ್ದರು.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಜೀವನ ನಿರ್ವಹಣೆಗೂ ಕಷ್ಟಪಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ನೆರವಿಗೆ 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರು ಸಿದ್ಧವಿರುವುದಾಗಿ ಈ ಹಿಂದೆಯೇ ಘೋಷಿಸಿದ್ದರು. ಆದರೆ ಕಾಂಬ್ಳಿಗೆ ನೆರವು ನೀಡುವುದಕ್ಕೆ ಒಂದು ಷರತ್ತು ವಿಧಿಸಿದ್ದರು.

1 / 5
ವಾಸ್ತವವಾಗಿ 1983 ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಅವರು ವಿನೋದ್ ಕಾಂಬ್ಳಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಕೆಲವು ದಿನಗಳ ಹಿಂದೆ ಹೇಳಿಕೊಂಡಿದ್ದರು. ಆದರೆ ಅವರು ತಮ್ಮ ಕುಡಿತದ ಚಟವನ್ನು ಬಿಡಲು ರಿಹ್ಯಾಬ್ ಸೆಂಟರ್​ಗೆ ಹೋಗುವುದಾದರೆ ಮಾತ್ರ ನಾವು ಅವರಿಗೆ ಸಹಾಯ ಮಾಡುತ್ತೇವೆ ಎಂದಿದ್ದರು.

ವಾಸ್ತವವಾಗಿ 1983 ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಅವರು ವಿನೋದ್ ಕಾಂಬ್ಳಿಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಕೆಲವು ದಿನಗಳ ಹಿಂದೆ ಹೇಳಿಕೊಂಡಿದ್ದರು. ಆದರೆ ಅವರು ತಮ್ಮ ಕುಡಿತದ ಚಟವನ್ನು ಬಿಡಲು ರಿಹ್ಯಾಬ್ ಸೆಂಟರ್​ಗೆ ಹೋಗುವುದಾದರೆ ಮಾತ್ರ ನಾವು ಅವರಿಗೆ ಸಹಾಯ ಮಾಡುತ್ತೇವೆ ಎಂದಿದ್ದರು.

2 / 5
ಇದೀಗ ಕಪಿಲ್ ದೇವ್ ಅವರ ಷರತ್ತಿಗೆ ಒಪ್ಪಿಗೆ ಸೂಚಿಸಿರುವ ವಿನೋದ್ ಕಾಂಬ್ಳಿ ರಿಹ್ಯಾಬ್ ಸೆಂಟರ್​ಗೆ ಹೋಗಲು ನಾನು ಸಿದ್ಧ ಎಂದು ಹೇಳಿಕೊಂಡಿದ್ದಾರೆ. ಆ ಪ್ರಕಾರ 15ನೇ ಬಾರಿಗೆ ಕಾಂಬ್ಳಿ ರಿಹ್ಯಾಬ್ ಸೆಂಟರ್​ಗೆ ದಾಖಲಾಗುವುದು ಖಚಿತವಾಗಿದೆ. ಇದಕ್ಕೂ ಮುನ್ನ ಕಾಂಬ್ಳಿ 14 ಬಾರಿ ರಿಹ್ಯಾಬ್​ಗೆ ಸೇರಿದ್ದರು. ಆದಾಗ್ಯೂ ಅವರು ತಮ್ಮ ದುಶ್ಚಟಗಳಿಂದ ದೂರವಿರಲು ಮನಸ್ಸು ಮಾಡಿರಲಿಲ್ಲ.

ಇದೀಗ ಕಪಿಲ್ ದೇವ್ ಅವರ ಷರತ್ತಿಗೆ ಒಪ್ಪಿಗೆ ಸೂಚಿಸಿರುವ ವಿನೋದ್ ಕಾಂಬ್ಳಿ ರಿಹ್ಯಾಬ್ ಸೆಂಟರ್​ಗೆ ಹೋಗಲು ನಾನು ಸಿದ್ಧ ಎಂದು ಹೇಳಿಕೊಂಡಿದ್ದಾರೆ. ಆ ಪ್ರಕಾರ 15ನೇ ಬಾರಿಗೆ ಕಾಂಬ್ಳಿ ರಿಹ್ಯಾಬ್ ಸೆಂಟರ್​ಗೆ ದಾಖಲಾಗುವುದು ಖಚಿತವಾಗಿದೆ. ಇದಕ್ಕೂ ಮುನ್ನ ಕಾಂಬ್ಳಿ 14 ಬಾರಿ ರಿಹ್ಯಾಬ್​ಗೆ ಸೇರಿದ್ದರು. ಆದಾಗ್ಯೂ ಅವರು ತಮ್ಮ ದುಶ್ಚಟಗಳಿಂದ ದೂರವಿರಲು ಮನಸ್ಸು ಮಾಡಿರಲಿಲ್ಲ.

3 / 5
ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿರುವ ಕಾಂಬ್ಳಿ ಅದರಲ್ಲಿ ಪುನರ್ವಸತಿಗೆ ಹೋಗಲು ಸಿದ್ಧರಿರುವುದಾಗಿ ಹೇಳಿಕೊಂಡಿದ್ದಾರೆ. ‘ನಾನು ಪುನರ್ವಸತಿಗೆ ಹೋಗಲು ಸಿದ್ಧನಿದ್ದೇನೆ. ನಾನು ಯಾವುದಕ್ಕೂ ಹೆದರದ ಕಾರಣ ನಾನು ಹೋಗಲು ಬಯಸುತ್ತೇನೆ. ನನ್ನ ಕುಟುಂಬ ನನ್ನೊಂದಿಗಿದೆ.

ಯೂಟ್ಯೂಬ್ ಚಾನೆಲ್‌ವೊಂದಕ್ಕೆ ಸಂದರ್ಶನ ನೀಡಿರುವ ಕಾಂಬ್ಳಿ ಅದರಲ್ಲಿ ಪುನರ್ವಸತಿಗೆ ಹೋಗಲು ಸಿದ್ಧರಿರುವುದಾಗಿ ಹೇಳಿಕೊಂಡಿದ್ದಾರೆ. ‘ನಾನು ಪುನರ್ವಸತಿಗೆ ಹೋಗಲು ಸಿದ್ಧನಿದ್ದೇನೆ. ನಾನು ಯಾವುದಕ್ಕೂ ಹೆದರದ ಕಾರಣ ನಾನು ಹೋಗಲು ಬಯಸುತ್ತೇನೆ. ನನ್ನ ಕುಟುಂಬ ನನ್ನೊಂದಿಗಿದೆ.

4 / 5
ತಾನು ಗಂಭೀರ ಮೂತ್ರ ಸೋಂಕಿನಿಂದ ಬಳಲುತ್ತಿದ್ದೇನೆ. ನನ್ನ ಪತ್ನಿ, ಮಗ ಮತ್ತು ಮಗಳು ಒಟ್ಟಾಗಿ ನನ್ನನ್ನು ನೋಡಿಕೊಳ್ಳುತ್ತಿದ್ದಾರೆ. ರೋಗದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ತಮ್ಮ ಆರ್ಥಿಕ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬಿಸಿಸಿಐನಿಂದ ಪಡೆಯುವ ಪಿಂಚಣಿಯೇ ನನ್ನ ಆದಾಯದ ಮೂಲವಾಗಿದ್ದು, ಪ್ರತಿ ತಿಂಗಳು ಬರುವ 30 ಸಾವಿರ ರೂ. ಪಿಂಚಣೆಯಿಂದ ಜೀವನ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ತಾನು ಗಂಭೀರ ಮೂತ್ರ ಸೋಂಕಿನಿಂದ ಬಳಲುತ್ತಿದ್ದೇನೆ. ನನ್ನ ಪತ್ನಿ, ಮಗ ಮತ್ತು ಮಗಳು ಒಟ್ಟಾಗಿ ನನ್ನನ್ನು ನೋಡಿಕೊಳ್ಳುತ್ತಿದ್ದಾರೆ. ರೋಗದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ತಮ್ಮ ಆರ್ಥಿಕ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬಿಸಿಸಿಐನಿಂದ ಪಡೆಯುವ ಪಿಂಚಣಿಯೇ ನನ್ನ ಆದಾಯದ ಮೂಲವಾಗಿದ್ದು, ಪ್ರತಿ ತಿಂಗಳು ಬರುವ 30 ಸಾವಿರ ರೂ. ಪಿಂಚಣೆಯಿಂದ ಜೀವನ ನಡೆಸುತ್ತಿರುವುದಾಗಿ ಹೇಳಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ