AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದಲ್ಲಿ ಚೇತರಿಕೆ, ಹೊಸ ಲುಕ್​ನಲ್ಲಿ ಕಾಣಿಸಿಕೊಂಡ ವಿನೋದ್ ಕಾಂಬ್ಳಿ

Vinod Kambli: ವಿನೋದ್ ಕಾಂಬ್ಳಿ ಟೀಮ್ ಇಂಡಿಯಾ ಒಟ್ಟು 121 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 21 ಟೆಸ್ಟ್ ಇನಿಂಗ್ಸ್​​ಗಳಲ್ಲಿ ಬ್ಯಾಟ್ ಬೀಸಿರುವ ಅವರು 2 ದ್ವಿಶತಕ ಹಾಗೂ 4 ಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 97 ಏಕದಿನ ಇನಿಂಗ್ಸ್​​ಗಳಲ್ಲಿ 2 ಶತಕ ಹಾಗೂ 14 ಅರ್ಧಶತಕಗಳೊಂದಿಗೆ 2477 ರನ್​ ಬಾರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 13, 2025 | 12:10 PM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲ ತಿಂಗಳಿಂದ ಅನಾರೋಗ್ಯದ ಕಾರಣ ಸುದ್ದಿಯಲ್ಲಿದ್ದರು. ಅದರಲ್ಲೂ ಕಳೆದ ತಿಂಗಳು ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಅವರು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಚಿಕಿತ್ಸೆ ಮುಗಿಸಿ ಕಾಂಬ್ಳಿ ಮನೆಗೆ ಹಿಂತಿರುಗಿದ್ದಾರೆ.

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಕಳೆದ ಕೆಲ ತಿಂಗಳಿಂದ ಅನಾರೋಗ್ಯದ ಕಾರಣ ಸುದ್ದಿಯಲ್ಲಿದ್ದರು. ಅದರಲ್ಲೂ ಕಳೆದ ತಿಂಗಳು ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಅವರು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಚಿಕಿತ್ಸೆ ಮುಗಿಸಿ ಕಾಂಬ್ಳಿ ಮನೆಗೆ ಹಿಂತಿರುಗಿದ್ದಾರೆ.

1 / 5
ಆದರೆ ಚಿಕಿತ್ಸೆಯ ಬಳಿಕ ವಿನೋದ್ ಕಾಂಬ್ಳಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಅವರ ಆರೋಗ್ಯದ ಮಾಹಿತಿ ಕೂಡ ಹೊರಬಿದ್ದಿರಲಿಲ್ಲ. ಇದೀಗ ಅವರ ಆರೋಗ್ಯದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಕಂಡು ಬಂದಿದೆ. ಅದರಲ್ಲೂ ಕಳೆದ ಕೆಲ ವರ್ಷಗಳಿಂದ ಸೊರಗಿದ್ದ ಕಾಂಬ್ಳಿ ಇದೀಗ ಮತ್ತೆ ಹಳೆಯ ಖದರ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಆದರೆ ಚಿಕಿತ್ಸೆಯ ಬಳಿಕ ವಿನೋದ್ ಕಾಂಬ್ಳಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಅಲ್ಲದೆ ಅವರ ಆರೋಗ್ಯದ ಮಾಹಿತಿ ಕೂಡ ಹೊರಬಿದ್ದಿರಲಿಲ್ಲ. ಇದೀಗ ಅವರ ಆರೋಗ್ಯದಲ್ಲಿ ಮಹತ್ವದ ಬದಲಾವಣೆಯಾಗಿರುವುದು ಕಂಡು ಬಂದಿದೆ. ಅದರಲ್ಲೂ ಕಳೆದ ಕೆಲ ವರ್ಷಗಳಿಂದ ಸೊರಗಿದ್ದ ಕಾಂಬ್ಳಿ ಇದೀಗ ಮತ್ತೆ ಹಳೆಯ ಖದರ್​ನಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನ 50ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ವಿನೋದ್ ಕಾಂಬ್ಳಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಸ್ಟ್ರೈಲಿಸ್ಟ್ ಲುಕ್​ನೊಂದಿಗೆ ಎಂಬುದು ವಿಶೇಷ.  ಇನ್ನು ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬಂದಿದ್ದರೂ, ನಡೆಯುವಾಗ ಈಗಲೂ ಸ್ವಲ್ಪ ಕಷ್ಟಪಡುತ್ತಿದ್ದಾರೆ.

ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನ 50ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ವಿನೋದ್ ಕಾಂಬ್ಳಿ ಕಾಣಿಸಿಕೊಂಡಿದ್ದಾರೆ. ಅದು ಕೂಡ ಈ ಹಿಂದಿನಂತೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಸ್ಟ್ರೈಲಿಸ್ಟ್ ಲುಕ್​ನೊಂದಿಗೆ ಎಂಬುದು ವಿಶೇಷ. ಇನ್ನು ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬಂದಿದ್ದರೂ, ನಡೆಯುವಾಗ ಈಗಲೂ ಸ್ವಲ್ಪ ಕಷ್ಟಪಡುತ್ತಿದ್ದಾರೆ.

3 / 5
ಇದಾಗ್ಯೂ ಅವರು ಈ ಕಾರ್ಯಕ್ರಮದಲ್ಲಿ ತುಂಬಾ ಸಂತೋಷದಿಂದ ಮತ್ತು ಲವಲವಿಕೆಯಿಂದ ಕಾಣಿಸಿಕೊಂಡಿದ್ದರು. ಇದೇ ವೇಳೆ ಸ್ಮರಣಿಕೆ ನೀಡುವ ಮೂಲಕ ಕಾಂಬ್ಳಿ ಅವರನ್ನು ಗೌರವಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ದಂತಕಥೆ ಸುನಿಲ್ ಗವಾಸ್ಕರ್ ಜೊತೆ ಫೋಟೋ ಕ್ಲಿಕ್ಕಿಸುವ ಮೂಲಕ ಕಾಂಬ್ಳಿ ಕುಶಲೋಪರಿಯಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ವಿನೋದ್ ಕಾಂಬ್ಳಿ ಅವರ ನ್ಯೂ ಲುಕ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಾಗ್ಯೂ ಅವರು ಈ ಕಾರ್ಯಕ್ರಮದಲ್ಲಿ ತುಂಬಾ ಸಂತೋಷದಿಂದ ಮತ್ತು ಲವಲವಿಕೆಯಿಂದ ಕಾಣಿಸಿಕೊಂಡಿದ್ದರು. ಇದೇ ವೇಳೆ ಸ್ಮರಣಿಕೆ ನೀಡುವ ಮೂಲಕ ಕಾಂಬ್ಳಿ ಅವರನ್ನು ಗೌರವಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ದಂತಕಥೆ ಸುನಿಲ್ ಗವಾಸ್ಕರ್ ಜೊತೆ ಫೋಟೋ ಕ್ಲಿಕ್ಕಿಸುವ ಮೂಲಕ ಕಾಂಬ್ಳಿ ಕುಶಲೋಪರಿಯಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ವಿನೋದ್ ಕಾಂಬ್ಳಿ ಅವರ ನ್ಯೂ ಲುಕ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ವಿನೋದ್ ಕಾಂಬ್ಳಿ ಭಾರತದ ಪರ 17 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ದ್ವಿಶತಕ, 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 104 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 2 ಭರ್ಜರಿ ಶತಕ ಹಾಗೂ 14 ಅರ್ಧಶತಕಗಳೊಂದಿಗೆ ಒಟ್ಟು 2477 ರನ್​ಗಳಿಸಿದ್ದಾರೆ.

ವಿನೋದ್ ಕಾಂಬ್ಳಿ ಭಾರತದ ಪರ 17 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ದ್ವಿಶತಕ, 4 ಶತಕ ಹಾಗೂ 3 ಅರ್ಧಶತಕಗಳೊಂದಿಗೆ ಒಟ್ಟು 1084 ರನ್ ಕಲೆಹಾಕಿದ್ದಾರೆ. ಹಾಗೆಯೇ 104 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 2 ಭರ್ಜರಿ ಶತಕ ಹಾಗೂ 14 ಅರ್ಧಶತಕಗಳೊಂದಿಗೆ ಒಟ್ಟು 2477 ರನ್​ಗಳಿಸಿದ್ದಾರೆ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ