AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: 2019 ರಲ್ಲಿಯೇ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲು ತೀರ್ಮಾನಿಸಿತ್ತು ಆರ್​ಸಿಬಿ..!

Virat Kohli captaincy: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಹಿನ್ನೆಲೆಯಲ್ಲಿ ಆಸಕ್ತಿದಾಯಕ ಮಾಹಿತಿ ಹೊರಬಿದ್ದಿದೆ. 2019ರಲ್ಲಿ ಗ್ಯಾರಿ ಕರ್ಸ್ಟನ್ ತಂಡದ ಕೋಚ್ ಆಗಿದ್ದಾಗ ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದು ಪಾರ್ಥಿವ್ ಪಟೇಲ್ ಅವರನ್ನು ನೇಮಿಸುವ ಯೋಜನೆ ಹೊಂದಿದ್ದರು . ಆದರೆ ಯಾಕೆ ಅದು ಆಗಲಿಲ್ಲ ಎಂಬುದು ತಿಳಿದಿಲ್ಲ ಎಂದು ಮಾಜಿ ಆಟಗಾರ ಮೊಯಿನ್ ಅಲಿ ಹೇಳಿದ್ದಾರೆ.

ಪೃಥ್ವಿಶಂಕರ
|

Updated on: Jul 28, 2025 | 10:34 PM

Share
ಬರೋಬ್ಬರಿ 18 ವರ್ಷಗಳ ಬಳಿಕ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಗೆಲ್ಲುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಯಿತು. ಆದಾಗ್ಯೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಅವಘಡದಿಂದಾಗಿ ಪ್ರಸ್ತುತ ಆರ್​ಸಿಬಿ ಫ್ರಾಂಚೈಸಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದೆಲ್ಲದರ ನಡುವೆ ತಂಡದ ಮಾಜಿ ನಾಯಕ ಕೊಹ್ಲಿ ಬಗ್ಗೆ ಅಚ್ಚರಿಯ ಸಂಗತಿಯೊಂದು ಹೊರಬಿದ್ದಿದೆ.

ಬರೋಬ್ಬರಿ 18 ವರ್ಷಗಳ ಬಳಿಕ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಗೆಲ್ಲುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಶಸ್ವಿಯಾಯಿತು. ಆದಾಗ್ಯೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಅವಘಡದಿಂದಾಗಿ ಪ್ರಸ್ತುತ ಆರ್​ಸಿಬಿ ಫ್ರಾಂಚೈಸಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದೆಲ್ಲದರ ನಡುವೆ ತಂಡದ ಮಾಜಿ ನಾಯಕ ಕೊಹ್ಲಿ ಬಗ್ಗೆ ಅಚ್ಚರಿಯ ಸಂಗತಿಯೊಂದು ಹೊರಬಿದ್ದಿದೆ.

1 / 5
ವಾಸ್ತವವಾಗಿ ಐಪಿಎಲ್ ಉದ್ಘಾಟನಾ ಆವೃತ್ತಿಯಲ್ಲೇ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದ ವಿರಾಟ್ ಕೊಹ್ಲಿಗೆ 2013 ರಲ್ಲಿ ಈ ತಂಡದ ನಾಯಕತ್ವ ಹಸ್ತಾಂತರಿಸಲಾಗಿತ್ತು. ಅಲ್ಲಿಂದ ಕೊಹ್ಲಿ 2021 ರವರೆಗೂ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಆದರೆ ಕೊಹ್ಲಿ ನಾಯಕತ್ವದಲ್ಲಿ ತಂಡ ಒಮ್ಮೆ ಮಾತ್ರ ಫೈನಲ್​ಗೇರಿದ್ದನ್ನು ಬಿಟ್ಟರೆ, ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ.

ವಾಸ್ತವವಾಗಿ ಐಪಿಎಲ್ ಉದ್ಘಾಟನಾ ಆವೃತ್ತಿಯಲ್ಲೇ ಆರ್​ಸಿಬಿ ತಂಡವನ್ನು ಸೇರಿಕೊಂಡಿದ್ದ ವಿರಾಟ್ ಕೊಹ್ಲಿಗೆ 2013 ರಲ್ಲಿ ಈ ತಂಡದ ನಾಯಕತ್ವ ಹಸ್ತಾಂತರಿಸಲಾಗಿತ್ತು. ಅಲ್ಲಿಂದ ಕೊಹ್ಲಿ 2021 ರವರೆಗೂ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. ಆದರೆ ಕೊಹ್ಲಿ ನಾಯಕತ್ವದಲ್ಲಿ ತಂಡ ಒಮ್ಮೆ ಮಾತ್ರ ಫೈನಲ್​ಗೇರಿದ್ದನ್ನು ಬಿಟ್ಟರೆ, ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ.

2 / 5
2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ತಂಡ ಫೈನಲ್​ಗೇರಿತ್ತು. ಆದರೆ ಫೈನಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಆ ಬಳಿಕವೂ ಕೊಹ್ಲಿ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಆದರೀಗ ಕೊಹ್ಲಿಯನ್ನು 2019ರಲ್ಲೇ ನಾಯಕತ್ವದಿಂದ ಕೆಳಗಿಳಿಸಲು ತೀರ್ಮಾನಿಸಲಾಗತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆರ್​ಸಿಬಿ ತಂಡದ ಮಾಜಿ ಆಲ್‌ರೌಂಡರ್ ಮೊಯಿನ್ ಅಲಿ ಬಹಿರಂಗಪಡಿಸಿದ್ದಾರೆ.

2016 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ತಂಡ ಫೈನಲ್​ಗೇರಿತ್ತು. ಆದರೆ ಫೈನಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಆ ಬಳಿಕವೂ ಕೊಹ್ಲಿ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಆದರೀಗ ಕೊಹ್ಲಿಯನ್ನು 2019ರಲ್ಲೇ ನಾಯಕತ್ವದಿಂದ ಕೆಳಗಿಳಿಸಲು ತೀರ್ಮಾನಿಸಲಾಗತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆರ್​ಸಿಬಿ ತಂಡದ ಮಾಜಿ ಆಲ್‌ರೌಂಡರ್ ಮೊಯಿನ್ ಅಲಿ ಬಹಿರಂಗಪಡಿಸಿದ್ದಾರೆ.

3 / 5
ಸ್ಪೋರ್ಟ್ಸ್ ಟಕ್ ಜೊತೆ ಈ ಬಗ್ಗೆ ಮಾತನಾಡಿರುವ ಮೊಯಿನ್ ಅಲಿ, ‘ 2019 ರಲ್ಲಿ ಗ್ಯಾರಿ ಕರ್ಸ್ಟನ್ ತಂಡದ ಮುಖ್ಯ ಕೋಚ್ ಆಗಿದ್ದಾಗ, ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ಪಾರ್ಥಿವ್ ಪಟೇಲ್ ಅವರನ್ನು ನಾಯಕನನ್ನಾಗಿ ನೇಮಿಸುವುದು ಬಹುತೇಕ ಖಚಿತವಾಗಿತ್ತು. ಆದರೆ ಆ ಬಳಿಕ ಪಾರ್ಥಿವ್ ಪಟೇಲ್​ಗೆ ಏಕೆ ನಾಯಕತ್ವ ನೀಡಲಿಲ್ಲ ಎಂದು ನನಗೆ ತಿಳಿದಿಲ್ಲ. ಆದರೆ ಅವರನ್ನು ಆ ಪಾತ್ರಕ್ಕೆ ಗಂಭೀರವಾಗಿ ಪರಿಗಣಿಸಲಾಗಿತ್ತು ಎಂದು ನನಗೆ ಗೊತ್ತಿತ್ತು ಎಂದಿದ್ದಾರೆ.

ಸ್ಪೋರ್ಟ್ಸ್ ಟಕ್ ಜೊತೆ ಈ ಬಗ್ಗೆ ಮಾತನಾಡಿರುವ ಮೊಯಿನ್ ಅಲಿ, ‘ 2019 ರಲ್ಲಿ ಗ್ಯಾರಿ ಕರ್ಸ್ಟನ್ ತಂಡದ ಮುಖ್ಯ ಕೋಚ್ ಆಗಿದ್ದಾಗ, ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿ ಪಾರ್ಥಿವ್ ಪಟೇಲ್ ಅವರನ್ನು ನಾಯಕನನ್ನಾಗಿ ನೇಮಿಸುವುದು ಬಹುತೇಕ ಖಚಿತವಾಗಿತ್ತು. ಆದರೆ ಆ ಬಳಿಕ ಪಾರ್ಥಿವ್ ಪಟೇಲ್​ಗೆ ಏಕೆ ನಾಯಕತ್ವ ನೀಡಲಿಲ್ಲ ಎಂದು ನನಗೆ ತಿಳಿದಿಲ್ಲ. ಆದರೆ ಅವರನ್ನು ಆ ಪಾತ್ರಕ್ಕೆ ಗಂಭೀರವಾಗಿ ಪರಿಗಣಿಸಲಾಗಿತ್ತು ಎಂದು ನನಗೆ ಗೊತ್ತಿತ್ತು ಎಂದಿದ್ದಾರೆ.

4 / 5
2019 ರ ನಂತರವೂ ನಾಯಕನಾಗಿ ಮುಂದುವರೆದಿದ್ದ ಕೊಹ್ಲಿ ಐಪಿಎಲ್ 2021 ರ ನಂತರ ನಾಯಕತ್ವಕ್ಕೆ ರಾಜೀನಾಮೆ ನೀಡಿದರು. ಆ ಬಳಿಕ ಆರ್‌ಸಿಬಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಫಾಫ್ ಡುಪ್ಲೆಸಿಸ್‌ಗೆ ಹಸ್ತಾಂತರಿಸಲಾಯಿತು. ಡುಪ್ಲೆಸಿಸ್ ನಾಯಕತ್ವದಲ್ಲೂ ತಂಡಕ್ಕೆ ಟ್ರೋಫಿ ಸಿಗಲಿಲ್ಲ. ಆದರೆ ಡುಪ್ಲೆಸಿಸ್ ಬಳಿಕ ತಂಡದ ನಾಯಕತ್ವವನ್ನು ವಹಿಸಿಕೊಂಡ ರಜತ್ ಪತಿದಾರ್ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದರು.

2019 ರ ನಂತರವೂ ನಾಯಕನಾಗಿ ಮುಂದುವರೆದಿದ್ದ ಕೊಹ್ಲಿ ಐಪಿಎಲ್ 2021 ರ ನಂತರ ನಾಯಕತ್ವಕ್ಕೆ ರಾಜೀನಾಮೆ ನೀಡಿದರು. ಆ ಬಳಿಕ ಆರ್‌ಸಿಬಿಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ಫಾಫ್ ಡುಪ್ಲೆಸಿಸ್‌ಗೆ ಹಸ್ತಾಂತರಿಸಲಾಯಿತು. ಡುಪ್ಲೆಸಿಸ್ ನಾಯಕತ್ವದಲ್ಲೂ ತಂಡಕ್ಕೆ ಟ್ರೋಫಿ ಸಿಗಲಿಲ್ಲ. ಆದರೆ ಡುಪ್ಲೆಸಿಸ್ ಬಳಿಕ ತಂಡದ ನಾಯಕತ್ವವನ್ನು ವಹಿಸಿಕೊಂಡ ರಜತ್ ಪತಿದಾರ್ ತಂಡವನ್ನು ಪ್ರಶಸ್ತಿ ಗೆಲುವಿನತ್ತ ಮುನ್ನಡೆಸಿದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ