AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಹಗಹಿಸಿ ನಕ್ಕು ಎಲ್ಲಾ ವದಂತಿಗಳಿಗೆ ತೆರೆ ಎಳೆದ ಕೊಹ್ಲಿ, ಗಂಭೀರ್

Gambhir-Kohli Rift Rumors Dispelled:ಭಾರತ ಏಕದಿನ ತಂಡದಲ್ಲಿ ಗಂಭೀರ್-ಕೊಹ್ಲಿ ಭಿನ್ನಾಭಿಪ್ರಾಯದ ವದಂತಿಗಳು ಹರಡಿದ್ದವು. ಅಭ್ಯಾಸದಲ್ಲಿ ಅವರು ಪರಸ್ಪರ ಮಾತನಾಡದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೆ, ಇಂಗ್ಲೆಂಡ್ ಪ್ರವಾಸದ ಅಂತ್ಯದಲ್ಲಿ ಟೀಂ ಇಂಡಿಯಾ ಲಂಡನ್‌ನಲ್ಲಿ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿದಾಗ, ಗಂಭೀರ್ ಮತ್ತು ಕೊಹ್ಲಿ ನಗುತ್ತಾ ಮಾತನಾಡುತ್ತಿರುವುದು ಕಂಡುಬಂದಿದೆ. ಈ ಚಿತ್ರಗಳು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದು, ತಂಡದಲ್ಲಿ ಸಾಮರಸ್ಯವಿದೆ ಎಂಬುದನ್ನು ಸ್ಪಷ್ಟಪಡಿಸಿವೆ.

ಪೃಥ್ವಿಶಂಕರ
|

Updated on: Jul 19, 2026 | 5:00 PM

Share
ಭಾರತ ಏಕದಿನ ತಂಡದಲ್ಲಿ ಏನೂ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಅದರಲ್ಲೂ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. ಹಾಗೆಯೇ ರೋಹಿತ್ ಶರ್ಮಾರನ್ನು ಏಕದಿನ ತಂಡದಿಂದ ಕೈಬಿಡಲು ಗಂಭೀರ್ ಮಸಲತ್ತು ಮಾಡಿದ್ದಾರೆ ಎಂತಲೂ ಹೇಳಲಾಗುತ್ತಿತ್ತು(PC-PTI).

ಭಾರತ ಏಕದಿನ ತಂಡದಲ್ಲಿ ಏನೂ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಅದರಲ್ಲೂ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. ಹಾಗೆಯೇ ರೋಹಿತ್ ಶರ್ಮಾರನ್ನು ಏಕದಿನ ತಂಡದಿಂದ ಕೈಬಿಡಲು ಗಂಭೀರ್ ಮಸಲತ್ತು ಮಾಡಿದ್ದಾರೆ ಎಂತಲೂ ಹೇಳಲಾಗುತ್ತಿತ್ತು(PC-PTI).

1 / 5
ತಂಡದ ಅಭ್ಯಾಸದ ವೇಳೆ ಕೊಹ್ಲಿ ಹಾಗೂ ಗಂಭೀರ್ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುಂಚಿನ ಅಭ್ಯಾಸದ ಸಮಯದಲ್ಲಿ ಇವರಿಬ್ಬರು ಪರಸ್ಪರ ಮಾತನಾಡದೇ ಇರುವುದು ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದವರು ಇಬ್ಬರು ನಡುವೆ ಏನೂ ಸರಿಯಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದರು(PC-PTI).

ತಂಡದ ಅಭ್ಯಾಸದ ವೇಳೆ ಕೊಹ್ಲಿ ಹಾಗೂ ಗಂಭೀರ್ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುಂಚಿನ ಅಭ್ಯಾಸದ ಸಮಯದಲ್ಲಿ ಇವರಿಬ್ಬರು ಪರಸ್ಪರ ಮಾತನಾಡದೇ ಇರುವುದು ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದವರು ಇಬ್ಬರು ನಡುವೆ ಏನೂ ಸರಿಯಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದರು(PC-PTI).

2 / 5
ಆದರೀಗ ಆ ಎಲ್ಲಾ ಊಹಾಪೋಹಗಳಿಗೆ ಇವರಿಬ್ಬರು ತೆರೆ ಎಳೆದಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾದ ಇಂಗ್ಲೆಂಡ್‌ ಪ್ರವಾಸ ಮುಗಿಯುವುದಕ್ಕೂ ಮುನ್ನ ಇಡೀ ತಂಡ ಲಂಡನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿತ್ತು. ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕುಮಾರನ್ ಪೆರಿಯಸಾಮಿ ಅವರು ಭಾರತೀಯ ತಂಡವನ್ನು ಸ್ವಾಗತಿಸಿ ಗೌರವಿಸಿದರು(PC-BCCI).

ಆದರೀಗ ಆ ಎಲ್ಲಾ ಊಹಾಪೋಹಗಳಿಗೆ ಇವರಿಬ್ಬರು ತೆರೆ ಎಳೆದಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾದ ಇಂಗ್ಲೆಂಡ್‌ ಪ್ರವಾಸ ಮುಗಿಯುವುದಕ್ಕೂ ಮುನ್ನ ಇಡೀ ತಂಡ ಲಂಡನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿತ್ತು. ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕುಮಾರನ್ ಪೆರಿಯಸಾಮಿ ಅವರು ಭಾರತೀಯ ತಂಡವನ್ನು ಸ್ವಾಗತಿಸಿ ಗೌರವಿಸಿದರು(PC-BCCI).

3 / 5
ಈ ಸಮಯದಲ್ಲಿ ಅತ್ಯಂತ ಆಶ್ಚರ್ಯಕರ ಘಟನೆಯೆಂದರೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ನಡುವಿನ ಸಂಭಾಷಣೆ. ಇಬ್ಬರೂ ಗಹಗಹಿಸಿ ನಗುತ್ತಾ ಮಾತನಾಡುತ್ತಿರುವುದು ಕಂಡುಬಂದಿತು. ಹಾಗೆಯೇ ರೋಹಿತ್ ಮತ್ತು ಗಿಲ್ ಕೂಡ ಅವರೊಂದಿಗೆ ಕುಳಿತಿರುವುದು ಕಂಡುಬಂದಿತು. ಗಂಭೀರ್ ಮತ್ತು ವಿರಾಟ್ ಅವರ ಈ ಫೋಟೋ ಈಗ ಅವರ ನಡುವೆ ಎಲ್ಲವೂ ಚೆನ್ನಾಗಿದೆ ಎಂಬುದನ್ನು ಸೂಚಿಸುತ್ತಿದೆ(PC-BCCI).

ಈ ಸಮಯದಲ್ಲಿ ಅತ್ಯಂತ ಆಶ್ಚರ್ಯಕರ ಘಟನೆಯೆಂದರೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ನಡುವಿನ ಸಂಭಾಷಣೆ. ಇಬ್ಬರೂ ಗಹಗಹಿಸಿ ನಗುತ್ತಾ ಮಾತನಾಡುತ್ತಿರುವುದು ಕಂಡುಬಂದಿತು. ಹಾಗೆಯೇ ರೋಹಿತ್ ಮತ್ತು ಗಿಲ್ ಕೂಡ ಅವರೊಂದಿಗೆ ಕುಳಿತಿರುವುದು ಕಂಡುಬಂದಿತು. ಗಂಭೀರ್ ಮತ್ತು ವಿರಾಟ್ ಅವರ ಈ ಫೋಟೋ ಈಗ ಅವರ ನಡುವೆ ಎಲ್ಲವೂ ಚೆನ್ನಾಗಿದೆ ಎಂಬುದನ್ನು ಸೂಚಿಸುತ್ತಿದೆ(PC-BCCI).

4 / 5
ಭಾರತೀಯ ರಾಯಭಾರ ಕಚೇರಿಯಲ್ಲಿ ಟೀಂ ಇಂಡಿಯಾ ಆಟಗಾರರೊಂದಿಗೆ ಗ್ರೂಪ್ ಫೋಟೋ ತೆಗೆದುಕೊಳ್ಳಲಾಯಿತು. ಯುಕೆಯಲ್ಲಿರುವ ಭಾರತೀಯ ರಾಯಭಾರಿ ಕುಮಾರನ್ ಪೆರಿಯಸಾಮಿ ಅವರೊಂದಿಗೆ ಟೀಂ ಇಂಡಿಯಾ ಪೋಸ್ ನೀಡಿತು. ಈ ಸಮಾರಂಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಭಾಗಿಯಾಗಿದ್ದರು(PC-BCCI).

ಭಾರತೀಯ ರಾಯಭಾರ ಕಚೇರಿಯಲ್ಲಿ ಟೀಂ ಇಂಡಿಯಾ ಆಟಗಾರರೊಂದಿಗೆ ಗ್ರೂಪ್ ಫೋಟೋ ತೆಗೆದುಕೊಳ್ಳಲಾಯಿತು. ಯುಕೆಯಲ್ಲಿರುವ ಭಾರತೀಯ ರಾಯಭಾರಿ ಕುಮಾರನ್ ಪೆರಿಯಸಾಮಿ ಅವರೊಂದಿಗೆ ಟೀಂ ಇಂಡಿಯಾ ಪೋಸ್ ನೀಡಿತು. ಈ ಸಮಾರಂಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಭಾಗಿಯಾಗಿದ್ದರು(PC-BCCI).

5 / 5
Follow Us
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು