IPL 2023: ವೈಮನಸ್ಸು ಮರೆತು ಒಂದಾದ್ರಾ ವಿರಾಟ್ ಕೊಹ್ಲಿ-ಗಂಭೀರ್? ಈ ಫೋಟೋ ಅಸಲಿಯತ್ತೇನು?

Virat Kohli vs Gautam Gambhir: ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಪಿಎಲ್ ಸಮಿತಿಯು, ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್​ಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಿದೆ.

| Updated By: ಝಾಹಿರ್ ಯೂಸುಫ್

Updated on: May 02, 2023 | 5:22 PM

IPL 2023: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯವು ಭರ್ಜರಿ ಪೈಪೋಟಿಗೆ ಸಾಕ್ಷಿಯಾಗಿತ್ತು. ಹಳೆಯ ಸೋಲಿನ ಸೇಡನ್ನು ಮನಸ್ಸಲ್ಲಿಟ್ಟುಕೊಂಡು ಆಡಿದ ಆರ್​ಸಿಬಿ ಆಟಗಾರರು ಪ್ರತಿ ನಿಮಿಷದಲ್ಲೂ ಕಿಚ್ಚಿನ ಪ್ರದರ್ಶನ ನೀಡಿದ್ದರು.

IPL 2023: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯವು ಭರ್ಜರಿ ಪೈಪೋಟಿಗೆ ಸಾಕ್ಷಿಯಾಗಿತ್ತು. ಹಳೆಯ ಸೋಲಿನ ಸೇಡನ್ನು ಮನಸ್ಸಲ್ಲಿಟ್ಟುಕೊಂಡು ಆಡಿದ ಆರ್​ಸಿಬಿ ಆಟಗಾರರು ಪ್ರತಿ ನಿಮಿಷದಲ್ಲೂ ಕಿಚ್ಚಿನ ಪ್ರದರ್ಶನ ನೀಡಿದ್ದರು.

1 / 8
ಅಲ್ಲದೆ ಲಕ್ನೋ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 18 ರನ್​​ಗಳಿಂದ ಸೋಲಿಸಿ ಭರ್ಜರಿಯಾಗಿ ಸಂಭ್ರಮಿಸಿದರು. ಆದರೆ ಈ ಸಂಭ್ರಮದ ಬೆನ್ನಲ್ಲೇ ಮೈದಾನದಲ್ಲಿ ಆಟಗಾರರ ನಡುವಣ ಕೂಡ ಕಿಚ್ಚು ಹೊತ್ತಿಕೊಂಡಿತು.

ಅಲ್ಲದೆ ಲಕ್ನೋ ತಂಡವನ್ನು ಅವರದ್ದೇ ತವರು ಮೈದಾನದಲ್ಲಿ 18 ರನ್​​ಗಳಿಂದ ಸೋಲಿಸಿ ಭರ್ಜರಿಯಾಗಿ ಸಂಭ್ರಮಿಸಿದರು. ಆದರೆ ಈ ಸಂಭ್ರಮದ ಬೆನ್ನಲ್ಲೇ ಮೈದಾನದಲ್ಲಿ ಆಟಗಾರರ ನಡುವಣ ಕೂಡ ಕಿಚ್ಚು ಹೊತ್ತಿಕೊಂಡಿತು.

2 / 8
ಲಕ್ನೋ ತಂಡದ ನವೀನ್ ಉಲ್ ಹಕ್ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದರೆ, ಆ ಬಳಿಕ ಗೌತಮ್ ಗಂಭೀರ್ ವಾಗ್ವಾದಕ್ಕೆ ಮುಂದಾದರು. ಇದರಿಂದ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತು. ಅದರಲ್ಲೂ ಗಂಭೀರ್ ಹಾಗೂ ಕೊಹ್ಲಿ ನಡುವೆ ಮಾತಿನ ಚಕಮಕಿಯೇ ನಡೆದು ಹೋಯಿತು. ಅಷ್ಟರಲ್ಲಾಗಲೇ ಇತರೆ ಆಟಗಾರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಲಕ್ನೋ ತಂಡದ ನವೀನ್ ಉಲ್ ಹಕ್ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದರೆ, ಆ ಬಳಿಕ ಗೌತಮ್ ಗಂಭೀರ್ ವಾಗ್ವಾದಕ್ಕೆ ಮುಂದಾದರು. ಇದರಿಂದ ಕೆಲ ಹೊತ್ತು ಪರಿಸ್ಥಿತಿ ಬಿಗಡಾಯಿಸಿತು. ಅದರಲ್ಲೂ ಗಂಭೀರ್ ಹಾಗೂ ಕೊಹ್ಲಿ ನಡುವೆ ಮಾತಿನ ಚಕಮಕಿಯೇ ನಡೆದು ಹೋಯಿತು. ಅಷ್ಟರಲ್ಲಾಗಲೇ ಇತರೆ ಆಟಗಾರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

3 / 8
ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಪಿಎಲ್ ಸಮಿತಿಯು, ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್​ಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಿದೆ. ಹಾಗೆಯೇ ನವೀನ್ ಉಲ್ ಹಕ್​ಗೆ ಶೇ.50 ರಷ್ಟು ದಂಡ ವಿಧಿಸಲಾಗಿದೆ.

ಈ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಐಪಿಎಲ್ ಸಮಿತಿಯು, ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್​ಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಿದೆ. ಹಾಗೆಯೇ ನವೀನ್ ಉಲ್ ಹಕ್​ಗೆ ಶೇ.50 ರಷ್ಟು ದಂಡ ವಿಧಿಸಲಾಗಿದೆ.

4 / 8
ಈ ಎಲ್ಲಾ ಘಟನೆಗಳ ಬಳಿಕ ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಪರಸ್ಫರ ಆಲಿಂಗನ ಮಾಡಿಕೊಳ್ಳುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಜಗಳದ ಬಳಿಕ ಗೌತಿ ಹಾಗೂ ಕೊಹ್ಲಿ ಪರಸ್ಪರ ಕ್ಷಮೆಯಾಚಿಸಿದ್ದಾರೆ ಎಂದು ಹೇಳಲಾಗಿದೆ.

ಈ ಎಲ್ಲಾ ಘಟನೆಗಳ ಬಳಿಕ ಇದೀಗ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಪರಸ್ಫರ ಆಲಿಂಗನ ಮಾಡಿಕೊಳ್ಳುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಜಗಳದ ಬಳಿಕ ಗೌತಿ ಹಾಗೂ ಕೊಹ್ಲಿ ಪರಸ್ಪರ ಕ್ಷಮೆಯಾಚಿಸಿದ್ದಾರೆ ಎಂದು ಹೇಳಲಾಗಿದೆ.

5 / 8
ಆದರೆ ಅಸಲಿಗೆ ಈ ಫೋಟೋಗಳು ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತೆಗೆದ ಚಿತ್ರಗಳು. ಆರ್​ಸಿಬಿ ವಿರುದ್ಧದ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಮೆಂಟರ್ ವಿರಾಟ್ ಕೊಹ್ಲಿಯನ್ನು ಭೇಟಿಯಾಗಿದ್ದರು. ಈ ವೇಳೆ ತೆಗೆದ ಫೋಟೋಗಳನ್ನು ಈಗ ಹರಿ ಬಿಡಲಾಗಿದೆ. ಹೀಗಾಗಿ ಕೊಹ್ಲಿ-ಗಂಭೀರ್ ನಡುವೆ ಎಲ್ಲವೂ ಸರಿಯಾಗಿದೆ ಎಂಬುದು ಸುಳ್ಳು ಸುದ್ದಿ.

ಆದರೆ ಅಸಲಿಗೆ ಈ ಫೋಟೋಗಳು ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ತೆಗೆದ ಚಿತ್ರಗಳು. ಆರ್​ಸಿಬಿ ವಿರುದ್ಧದ ಪಂದ್ಯದ ಬಳಿಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಮೆಂಟರ್ ವಿರಾಟ್ ಕೊಹ್ಲಿಯನ್ನು ಭೇಟಿಯಾಗಿದ್ದರು. ಈ ವೇಳೆ ತೆಗೆದ ಫೋಟೋಗಳನ್ನು ಈಗ ಹರಿ ಬಿಡಲಾಗಿದೆ. ಹೀಗಾಗಿ ಕೊಹ್ಲಿ-ಗಂಭೀರ್ ನಡುವೆ ಎಲ್ಲವೂ ಸರಿಯಾಗಿದೆ ಎಂಬುದು ಸುಳ್ಳು ಸುದ್ದಿ.

6 / 8
ಇನ್ನು ಲಕ್ನೋನದಲ್ಲಿ ನಡೆದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಪರಸ್ಪರ ಹಸ್ತಲಾಘವ ಮಾಡಿದ್ದರು. ಇದಾಗ್ಯೂ ಇಬ್ಬರು ಮುಖ-ಮುಖ ನೋಡಿಕೊಂಡಿರಲಿಲ್ಲ ಎಂಬುದು ವಿಶೇಷ.

ಇನ್ನು ಲಕ್ನೋನದಲ್ಲಿ ನಡೆದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಪರಸ್ಪರ ಹಸ್ತಲಾಘವ ಮಾಡಿದ್ದರು. ಇದಾಗ್ಯೂ ಇಬ್ಬರು ಮುಖ-ಮುಖ ನೋಡಿಕೊಂಡಿರಲಿಲ್ಲ ಎಂಬುದು ವಿಶೇಷ.

7 / 8
ಒಟ್ಟಿನಲ್ಲಿ 2013 ರಲ್ಲಿ ಶುರುವಾದ ಗಂಭೀರ್-ಕೊಹ್ಲಿ ನಡುವಣ ವೈಮನಸ್ಸು ದಶಕಗಳ ಬಳಿಕ ಕೂಡ ಮುಂದುವರೆದಿದೆ ಎಂಬುದಕ್ಕೆ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಘಟನೆಯೇ ಸಾಕ್ಷಿ.

ಒಟ್ಟಿನಲ್ಲಿ 2013 ರಲ್ಲಿ ಶುರುವಾದ ಗಂಭೀರ್-ಕೊಹ್ಲಿ ನಡುವಣ ವೈಮನಸ್ಸು ದಶಕಗಳ ಬಳಿಕ ಕೂಡ ಮುಂದುವರೆದಿದೆ ಎಂಬುದಕ್ಕೆ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಘಟನೆಯೇ ಸಾಕ್ಷಿ.

8 / 8
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು