AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಗೇಟ್ ಪಾಸ್?

Virat Kohli - Rohit Sharma: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಇಬ್ಬರು ಆಟಗಾರರು 2027 ರ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಇದರ ನಡುವೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬೀಳ್ಕೊಡಲು ನೀಡಲು ಕ್ರಿಕೆಟ್ ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ.

ಝಾಹಿರ್ ಯೂಸುಫ್
|

Updated on:Aug 07, 2025 | 2:41 PM

Share
ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಶೀಘ್ರದಲ್ಲೇ ಏಕದಿನ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಇಬ್ಬರನ್ನು ಪರಿಗಣಿಸುವುದಿಲ್ಲ. ಹೀಗಾಗಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಭವಿಷ್ಯವನ್ನು ನಿರ್ಧರಿಸುವಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಶೀಘ್ರದಲ್ಲೇ ಏಕದಿನ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಇಬ್ಬರನ್ನು ಪರಿಗಣಿಸುವುದಿಲ್ಲ. ಹೀಗಾಗಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಭವಿಷ್ಯವನ್ನು ನಿರ್ಧರಿಸುವಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

1 / 5
ಕೆಲ ತಿಂಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದರು. ಆದರೆ ಈ ವೇಳೆಗೆ ರೋಹಿತ್ ಶರ್ಮಾ ವಯಸ್ಸು 40 ಆಗಿರಲಿದೆ. ಇನ್ನು ವಿರಾಟ್ ಕೊಹ್ಲಿಯ ವಯಸ್ಸು 38 ಕ್ಕೆ ತಲುಪಲಿದೆ. ಹೀಗಾಗಿ ಏಕದಿನ ವಿಶ್ವಕಪ್​ಗೆ ಹಿರಿಯ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆಯಿಲ್ಲ.

ಕೆಲ ತಿಂಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದರು. ಆದರೆ ಈ ವೇಳೆಗೆ ರೋಹಿತ್ ಶರ್ಮಾ ವಯಸ್ಸು 40 ಆಗಿರಲಿದೆ. ಇನ್ನು ವಿರಾಟ್ ಕೊಹ್ಲಿಯ ವಯಸ್ಸು 38 ಕ್ಕೆ ತಲುಪಲಿದೆ. ಹೀಗಾಗಿ ಏಕದಿನ ವಿಶ್ವಕಪ್​ಗೆ ಹಿರಿಯ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆಯಿಲ್ಲ.

2 / 5
ಇದೇ ಕಾರಣದಿಂದಾಗಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಭವಿಷ್ಯ ನಿರ್ಧರಿಸುವಂತೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿಗೆ ಸೂಚನೆ ನೀಡಲಾಗಿದೆ. ಅಲ್ಲದೆ 2027ರ ಏಕದಿನ ವಿಶ್ವಕಪ್​ಗಾಗಿ ಈಗಲೇ ಯುವ ಪಡೆಯನ್ನು ಒಳಗೊಂಡಿರುವ ಬಲಿಷ್ಠ ತಂಡವೊಂದನ್ನು ರೂಪಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಈ ಹಿನ್ನಲೆಯಲ್ಲಿ ಇದೇ ವರ್ಷ ಏಕದಿನ ಕ್ರಿಕೆಟ್​ನಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ.

ಇದೇ ಕಾರಣದಿಂದಾಗಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಭವಿಷ್ಯ ನಿರ್ಧರಿಸುವಂತೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿಗೆ ಸೂಚನೆ ನೀಡಲಾಗಿದೆ. ಅಲ್ಲದೆ 2027ರ ಏಕದಿನ ವಿಶ್ವಕಪ್​ಗಾಗಿ ಈಗಲೇ ಯುವ ಪಡೆಯನ್ನು ಒಳಗೊಂಡಿರುವ ಬಲಿಷ್ಠ ತಂಡವೊಂದನ್ನು ರೂಪಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಈ ಹಿನ್ನಲೆಯಲ್ಲಿ ಇದೇ ವರ್ಷ ಏಕದಿನ ಕ್ರಿಕೆಟ್​ನಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ.

3 / 5
ಅತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳ್ಳುವುದನ್ನು ಪುಷ್ಠೀಕರಿಸುವಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ದಿಗ್ಗಜರಿಬ್ಬರಿಗೆ ವಿಶೇಷ ಬೀಳ್ಕೊಡುಗೆ ನೀಡಲು ಪ್ಲ್ಯಾನ್ ರೂಪಿಸಿರುವ ಮಾಹಿತಿ ಕೂಡ ಹೊರಬಿದ್ದಿದೆ. ಅಂದರೆ ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯ ವೇಳೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಚಿಂತಿಸಿದೆ ಸಿಇಒ ಟಾಡ್ ಗ್ರೀನ್‌ಬರ್ಗ್ ತಿಳಿಸಿದ್ದಾರೆ. ಹೀಗಾಗಿ ಈ ಸರಣಿಯು ದಿಗ್ಗಜರಿಬ್ಬರ ಕೊನೆಯ ಇಂಟರ್​ನ್ಯಾಷನಲ್ ಮ್ಯಾಚ್ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಅತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳ್ಳುವುದನ್ನು ಪುಷ್ಠೀಕರಿಸುವಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ದಿಗ್ಗಜರಿಬ್ಬರಿಗೆ ವಿಶೇಷ ಬೀಳ್ಕೊಡುಗೆ ನೀಡಲು ಪ್ಲ್ಯಾನ್ ರೂಪಿಸಿರುವ ಮಾಹಿತಿ ಕೂಡ ಹೊರಬಿದ್ದಿದೆ. ಅಂದರೆ ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯ ವೇಳೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಚಿಂತಿಸಿದೆ ಸಿಇಒ ಟಾಡ್ ಗ್ರೀನ್‌ಬರ್ಗ್ ತಿಳಿಸಿದ್ದಾರೆ. ಹೀಗಾಗಿ ಈ ಸರಣಿಯು ದಿಗ್ಗಜರಿಬ್ಬರ ಕೊನೆಯ ಇಂಟರ್​ನ್ಯಾಷನಲ್ ಮ್ಯಾಚ್ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಪರ್ತ್​ನಲ್ಲಿ ನಡೆದರೆ, ಅಕ್ಟೋಬರ್ 23 ರಂದು ಅಡಿಲೇಡ್​ನಲ್ಲಿ 2ನೇ ಪಂದ್ಯ ಜರುಗಲಿದೆ. ಹಾಗೆಯೇ ಅಕ್ಟೋಬರ್ 25 ರಂದು ನಡೆಯುವ ಕೊನೆಯ ಏಕದಿನ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಂಡರೂ ಅಚ್ಚರಿಪಡಬೇಕಿಲ್ಲ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಪರ್ತ್​ನಲ್ಲಿ ನಡೆದರೆ, ಅಕ್ಟೋಬರ್ 23 ರಂದು ಅಡಿಲೇಡ್​ನಲ್ಲಿ 2ನೇ ಪಂದ್ಯ ಜರುಗಲಿದೆ. ಹಾಗೆಯೇ ಅಕ್ಟೋಬರ್ 25 ರಂದು ನಡೆಯುವ ಕೊನೆಯ ಏಕದಿನ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಂಡರೂ ಅಚ್ಚರಿಪಡಬೇಕಿಲ್ಲ.

5 / 5

Published On - 2:09 pm, Thu, 7 August 25

Follow Us
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ