AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli – Rohit Sharma: T20I ಕ್ರಿಕೆಟ್​ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

Virat Kohli and Rohit Sharma: ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಜಯದೊಂದಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 30, 2024 | 7:04 AM

Share
ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.

1 / 6
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

2 / 6
ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

3 / 6
ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

4 / 6
ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159	ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 6
ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

6 / 6

Published On - 6:51 am, Sun, 30 June 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್