AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli – Rohit Sharma: T20I ಕ್ರಿಕೆಟ್​ಗೆ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

Virat Kohli and Rohit Sharma: ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 7 ರನ್​ಗಳ ರೋಚಕ ಜಯದೊಂದಿಗೆ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 30, 2024 | 7:04 AM

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.

ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ ಭಾರತದ ಇಬ್ಬರು ದಿಗ್ಗಜರ ಟಿ20ಐ ಕೆರಿಯರ್ ಅಂತ್ಯವಾದಂತಾಗಿದೆ.

1 / 6
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಲು ಬಯಸಿದ್ದೇನೆ ಎಂದು ತಿಳಿಸಿದರು.

2 / 6
ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇನ್ನು ವಿಶ್ವಕಪ್ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, ನಾನು ಟಿ20 ಪಂದ್ಯದೊಂದಿಗೆ ಭಾರತದ ಪರ ವೃತ್ತಿಜೀವನ ಆರಂಭಿಸಿದ್ದೆ. ಇದೀಗ ಟಿ20 ಅಂತಾರಾಷ್ಟ್ರೀಯ ಕೆರಿಯರ್​​ಗೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಸ್ವರೂಪದ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

3 / 6
ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

ಟೀಮ್ ಇಂಡಿಯಾ ಪರ 125 ಟಿ20 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ಒಟ್ಟು 117 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 3056 ಎಸೆತಗಳನ್ನು ಎದುರಿಸಿ 4188 ರನ್​ ಕಲೆಹಾಕಿದ್ದಾರೆ. ಇದರ ನಡುವೆ 38 ಅರ್ಧಶತಕ ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ.

4 / 6
ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159	ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಒಟ್ಟು 159 ಟಿ20 ಪಂದ್ಯಗಳನ್ನಾಡಿದ್ದು, ಈ ವೇಳೆ 151 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಇದರ ನಡುವೆ 3003 ಎಸೆತಗಳನ್ನು ಎದುರಿಸಿದ್ದ ಹಿಟ್​ಮ್ಯಾನ್ 4231 ರನ್ ಕಲೆಹಾಕಿದ್ದಾರೆ. ಹಾಗೆಯೇ 5 ಭರ್ಜರಿ ಶತಕ ಹಾಗೂ 32 ಅರ್ಧಶತಕಗಳನ್ನು ಸಿಡಿಸಿದ್ದಾರೆ.

5 / 6
ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

ಇದೀಗ ವಿಶ್ವಕಪ್​ ಗೆಲುವಿನೊಂದಿಗೆ ಇಬ್ಬರು ದಿಗ್ಗಜರು ಜೊತೆಯಾಗಿ ಟಿ20 ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಭಾರತ ಟಿ20 ತಂಡದಲ್ಲಿ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಳ್ಳುವುದಿಲ್ಲ.

6 / 6

Published On - 6:51 am, Sun, 30 June 24

Follow us
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ