AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಆಫ್ರಿಕಾ ಸರಣಿ ಬಳಿಕ ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ‘ಎದುರಾಳಿಗಳು’

Virat Kohli - Rohit Sharma: ವಿಜಯ ಹಝಾರೆ ಏಕದಿನ ಟೂರ್ನಿಯು ಡಿಸೆಂಬರ್ 24 ರಿಂದ ಶುರುವಾಗಲಿದೆ. 32 ತಂಡಗಳ ಈ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಬಳಿಕ ಟೀಮ್ ಇಂಡಿಯಾ ದಿಗ್ಗಜರು ದೇಶೀಯ ಅಂಗಳದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 04, 2025 | 3:08 PM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ಡಿಸೆಂಬರ್ 6 ರಂದು ಮುಗಿಯಲಿದೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಕಾಣಿಸಿಕೊಳ್ಳಲಿದ್ದಾರೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿಯು ಡಿಸೆಂಬರ್ 6 ರಂದು ಮುಗಿಯಲಿದೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ (Virat Kohli) ಹಾಗೂ ರೋಹಿತ್ ಶರ್ಮಾ (Rohit Sharma) ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಕಾಣಿಸಿಕೊಳ್ಳಲಿದ್ದಾರೆ.

1 / 5
ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ರೋಹಿತ್ ಶರ್ಮಾ ಮುಂಬೈ ಪರ ಆಡಲಿದ್ದಾರೆ. ಆದರೆ ಈ ಇಬ್ಬರು ಆಟಗಾರರು ಎಷ್ಟು ಪಂದ್ಯಗಳನ್ನಾಡಲಿದ್ದಾರೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಇದಾಗ್ಯೂ ನ್ಯೂಝಿಲೆಂಡ್ ವಿರುದ್ಧದ ಸರಣಿಯವರೆಗೆ ದೇಶೀಯ ಟೂರ್ನಿಯಲ್ಲಿ  ಮುಂದುವರೆಯುವ ಸಾಧ್ಯತೆಯಿದೆ.

ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದರೆ, ರೋಹಿತ್ ಶರ್ಮಾ ಮುಂಬೈ ಪರ ಆಡಲಿದ್ದಾರೆ. ಆದರೆ ಈ ಇಬ್ಬರು ಆಟಗಾರರು ಎಷ್ಟು ಪಂದ್ಯಗಳನ್ನಾಡಲಿದ್ದಾರೆ ಎಂಬುದು ಇನ್ನೂ ಸಹ ಖಚಿತವಾಗಿಲ್ಲ. ಇದಾಗ್ಯೂ ನ್ಯೂಝಿಲೆಂಡ್ ವಿರುದ್ಧದ ಸರಣಿಯವರೆಗೆ ದೇಶೀಯ ಟೂರ್ನಿಯಲ್ಲಿ  ಮುಂದುವರೆಯುವ ಸಾಧ್ಯತೆಯಿದೆ.

2 / 5
ಇನ್ನು  ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು.

ಇನ್ನು  ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಈ ವೇಳೆ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು.

3 / 5
ರೋಹಿತ್ ಶರ್ಮಾ ವಿಜಯ ಹಝಾರೆ ಟೂರ್ನಿಯಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದು 2019 ರಲ್ಲಿ. ಮುಂಬೈ ಪರ ಎರಡು ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ಒಟ್ಟು 50 ರನ್​ ಕಲೆಹಾಕಿದ್ದರು. ಇದಾದ ಬಳಿಕ ದೇಶೀಯ ಏಕದಿನ ಟೂರ್ನಿಯಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿರಲಿಲ್ಲ.

ರೋಹಿತ್ ಶರ್ಮಾ ವಿಜಯ ಹಝಾರೆ ಟೂರ್ನಿಯಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದು 2019 ರಲ್ಲಿ. ಮುಂಬೈ ಪರ ಎರಡು ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಹಿಟ್​ಮ್ಯಾನ್ ಒಟ್ಟು 50 ರನ್​ ಕಲೆಹಾಕಿದ್ದರು. ಇದಾದ ಬಳಿಕ ದೇಶೀಯ ಏಕದಿನ ಟೂರ್ನಿಯಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿರಲಿಲ್ಲ.

4 / 5
ಇದೀಗ ವಿರಾಟ್ ಕೊಹ್ಲಿ ಬರೋಬ್ಬರಿ 15 ವರ್ಷಗಳ ಬಳಿಕ ಹಾಗೂ ರೋಹಿತ್ ಶರ್ಮಾ 7 ವರ್ಷಗಳ ನಂತರ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈ ಟೂರ್ನಿಯಲ್ಲಿ ದೆಹಲಿ ಮತ್ತು ಮುಂಬೈ ತಂಡಗಳು ನಾಕೌಟ್​ಗೆ ಪ್ರವೇಶಿಸಿದರೆ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಮುಖಾಮುಖಿಯಾಗಬಹುದು.

ಇದೀಗ ವಿರಾಟ್ ಕೊಹ್ಲಿ ಬರೋಬ್ಬರಿ 15 ವರ್ಷಗಳ ಬಳಿಕ ಹಾಗೂ ರೋಹಿತ್ ಶರ್ಮಾ 7 ವರ್ಷಗಳ ನಂತರ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈ ಟೂರ್ನಿಯಲ್ಲಿ ದೆಹಲಿ ಮತ್ತು ಮುಂಬೈ ತಂಡಗಳು ನಾಕೌಟ್​ಗೆ ಪ್ರವೇಶಿಸಿದರೆ ಕಿಂಗ್ ಕೊಹ್ಲಿ ಹಾಗೂ ಹಿಟ್​ಮ್ಯಾನ್ ಮುಖಾಮುಖಿಯಾಗಬಹುದು.

5 / 5
Follow Us
ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್
ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಇಲ್ಲಿ ನಮ್ಮ ಮಾತಿಗೆ ಗೌರವವೇ ನೀಡುತ್ತಿಲ್ಲ ಅಧಿಕಾರಿಗಳು
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ