AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿರಾಜ್ ಬ್ಯಾಟಿಂಗ್​ಗೆ ವಿರಾಟ್ ಕೊಹ್ಲಿ ಫುಲ್ ಖುಷ್

India vs Australia: ಅಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅದು ಸಹ ಕೊನೆಯ ವಿಕೆಟ್ ಮಾತ್ರ ಇರುವಾಗ ಎಂಬುದು ವಿಶೇಷ. ಅಂದರೆ ಅಂತಿಮ ವಿಕೆಟ್​ ವೇಳೆ ರಕ್ಷಣಾತ್ಮಕ ಆಟವಾಡುವ ಮೂಲಕ ಸಿರಾಜ್ ಉತ್ತಮ ಸಾಥ್ ನೀಡಿದ್ದರು.

ಝಾಹಿರ್ ಯೂಸುಫ್
|

Updated on: Dec 29, 2024 | 6:19 AM

Share
ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಶತಕ ಬಾರಿಸಿದ್ದಾರೆ. ಈ ಶತಕಕ್ಕಾಗಿ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳನ್ನು ತೆಗೆದುಕೊಂಡರೆ, ಮೊಹಮ್ಮದ್ ಸಿರಾಜ್ 3 ಎಸೆತಗಳನ್ನು ಎದುರಿಸಿದರು.

ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಶತಕ ಬಾರಿಸಿದ್ದಾರೆ. ಈ ಶತಕಕ್ಕಾಗಿ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳನ್ನು ತೆಗೆದುಕೊಂಡರೆ, ಮೊಹಮ್ಮದ್ ಸಿರಾಜ್ 3 ಎಸೆತಗಳನ್ನು ಎದುರಿಸಿದರು.

1 / 5
ಹೌದು, ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಲ್ಲಗೆಳೆಯುವಂತಿಲ್ಲ. ಏಕೆಂದರೆ ನಿತೀಶ್ ಕುಮಾರ್ ರೆಡ್ಡಿ 99 ರನ್​ಗಳಿಸಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾಗಿದ್ದರು. 114ನೇ ಓವರ್​ನ 3ನೇ ಎಸೆತದಲ್ಲಿ ಬುಮ್ರಾ ಔಟಾಗಿ ಹೋದಾಗ ನಿತೀಶ್ ಕುಮಾರ್ ನಾನ್ ಸ್ಟ್ರೈಕ್​ನಲ್ಲಿದ್ದರು. ಹೀಗಾಗಿ ಕೊನೆಯ ವಿಕೆಟ್​ ಒಳಗೆ ಶತಕ ಪೂರೈಸಲು ಸಾಧ್ಯನಾ ಎಂಬ ಅನುಮಾನಗಳು ಮೂಡಿತ್ತು.

ಹೌದು, ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಲ್ಲಗೆಳೆಯುವಂತಿಲ್ಲ. ಏಕೆಂದರೆ ನಿತೀಶ್ ಕುಮಾರ್ ರೆಡ್ಡಿ 99 ರನ್​ಗಳಿಸಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾಗಿದ್ದರು. 114ನೇ ಓವರ್​ನ 3ನೇ ಎಸೆತದಲ್ಲಿ ಬುಮ್ರಾ ಔಟಾಗಿ ಹೋದಾಗ ನಿತೀಶ್ ಕುಮಾರ್ ನಾನ್ ಸ್ಟ್ರೈಕ್​ನಲ್ಲಿದ್ದರು. ಹೀಗಾಗಿ ಕೊನೆಯ ವಿಕೆಟ್​ ಒಳಗೆ ಶತಕ ಪೂರೈಸಲು ಸಾಧ್ಯನಾ ಎಂಬ ಅನುಮಾನಗಳು ಮೂಡಿತ್ತು.

2 / 5
ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಅನುಭವಿ ವೇಗಿ ಪ್ಯಾಟ್ ಕಮಿನ್ಸ್ ಅವರನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಲ್ಲೂ 14ನೇ ಓವರ್​ನ ಕೊನೆಯ ಎಸೆತದಲ್ಲಿ ಅದ್ಭುತ ಡಿಫೆನ್ಸ್ ಆಡುವ ಮೂಲಕ ಗಮನ ಸೆಳೆದರು. ಈ ಮೂಲಕ ಔಟ್ ಆಗದೇ ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಪರೋಕ್ಷ ಕಾರಣಕರ್ತರಾದರು.

ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಅನುಭವಿ ವೇಗಿ ಪ್ಯಾಟ್ ಕಮಿನ್ಸ್ ಅವರನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಲ್ಲೂ 14ನೇ ಓವರ್​ನ ಕೊನೆಯ ಎಸೆತದಲ್ಲಿ ಅದ್ಭುತ ಡಿಫೆನ್ಸ್ ಆಡುವ ಮೂಲಕ ಗಮನ ಸೆಳೆದರು. ಈ ಮೂಲಕ ಔಟ್ ಆಗದೇ ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಪರೋಕ್ಷ ಕಾರಣಕರ್ತರಾದರು.

3 / 5
ಇತ್ತ 3ನೇ ದಿನದಾಟದ ಮುಕ್ತಾಯದ ಬಳಿಕ ಪೆವಿಲಿಯನ್​ಗೆ ಮರಳಿದ ನಿತೀಶ್ ಕುಮಾರ್ ರೆಡ್ಡಿಯನ್ನು ಎಲ್ಲಾ ಆಟಗಾರರು ಸ್ವಾಗತಿಸಿದರು. ಇದರ ನಡುವೆ ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್ ಅವರ ಪ್ರಯತ್ನವನ್ನು ಶ್ಲಾಘಿಸಿರುವುದು ವಿಶೇಷ. ಇದೀಗ ಸಿರಾಜ್ ಅವರನ್ನು ಅಪ್ರೀಶಿಯೇಟ್ ಮಾಡುತ್ತಿರುವ ಕಿಂಗ್ ಕೊಹ್ಲಿಯ ಫೋಟೋಗಳು ವೈರಲ್ ಆಗಿದೆ.

ಇತ್ತ 3ನೇ ದಿನದಾಟದ ಮುಕ್ತಾಯದ ಬಳಿಕ ಪೆವಿಲಿಯನ್​ಗೆ ಮರಳಿದ ನಿತೀಶ್ ಕುಮಾರ್ ರೆಡ್ಡಿಯನ್ನು ಎಲ್ಲಾ ಆಟಗಾರರು ಸ್ವಾಗತಿಸಿದರು. ಇದರ ನಡುವೆ ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್ ಅವರ ಪ್ರಯತ್ನವನ್ನು ಶ್ಲಾಘಿಸಿರುವುದು ವಿಶೇಷ. ಇದೀಗ ಸಿರಾಜ್ ಅವರನ್ನು ಅಪ್ರೀಶಿಯೇಟ್ ಮಾಡುತ್ತಿರುವ ಕಿಂಗ್ ಕೊಹ್ಲಿಯ ಫೋಟೋಗಳು ವೈರಲ್ ಆಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್​​ಗಳಿಸಿ ಆಲೌಟ್ ಆದರೆ, ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 105 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್​​ಗಳಿಸಿ ಆಲೌಟ್ ಆದರೆ, ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 105 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು