ಸಿರಾಜ್ ಬ್ಯಾಟಿಂಗ್​ಗೆ ವಿರಾಟ್ ಕೊಹ್ಲಿ ಫುಲ್ ಖುಷ್

|

Updated on: Dec 29, 2024 | 6:19 AM

India vs Australia: ಅಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಅದು ಸಹ ಕೊನೆಯ ವಿಕೆಟ್ ಮಾತ್ರ ಇರುವಾಗ ಎಂಬುದು ವಿಶೇಷ. ಅಂದರೆ ಅಂತಿಮ ವಿಕೆಟ್​ ವೇಳೆ ರಕ್ಷಣಾತ್ಮಕ ಆಟವಾಡುವ ಮೂಲಕ ಸಿರಾಜ್ ಉತ್ತಮ ಸಾಥ್ ನೀಡಿದ್ದರು.

1 / 5
ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಶತಕ ಬಾರಿಸಿದ್ದಾರೆ. ಈ ಶತಕಕ್ಕಾಗಿ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳನ್ನು ತೆಗೆದುಕೊಂಡರೆ, ಮೊಹಮ್ಮದ್ ಸಿರಾಜ್ 3 ಎಸೆತಗಳನ್ನು ಎದುರಿಸಿದರು.

ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ನಿತೀಶ್ ಕುಮಾರ್ ರೆಡ್ಡಿ ಶತಕ ಬಾರಿಸಿದ್ದಾರೆ. ಈ ಶತಕಕ್ಕಾಗಿ ನಿತೀಶ್ ಕುಮಾರ್ ರೆಡ್ಡಿ 171 ಎಸೆತಗಳನ್ನು ತೆಗೆದುಕೊಂಡರೆ, ಮೊಹಮ್ಮದ್ ಸಿರಾಜ್ 3 ಎಸೆತಗಳನ್ನು ಎದುರಿಸಿದರು.

2 / 5
ಹೌದು, ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಲ್ಲಗೆಳೆಯುವಂತಿಲ್ಲ. ಏಕೆಂದರೆ ನಿತೀಶ್ ಕುಮಾರ್ ರೆಡ್ಡಿ 99 ರನ್​ಗಳಿಸಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾಗಿದ್ದರು. 114ನೇ ಓವರ್​ನ 3ನೇ ಎಸೆತದಲ್ಲಿ ಬುಮ್ರಾ ಔಟಾಗಿ ಹೋದಾಗ ನಿತೀಶ್ ಕುಮಾರ್ ನಾನ್ ಸ್ಟ್ರೈಕ್​ನಲ್ಲಿದ್ದರು. ಹೀಗಾಗಿ ಕೊನೆಯ ವಿಕೆಟ್​ ಒಳಗೆ ಶತಕ ಪೂರೈಸಲು ಸಾಧ್ಯನಾ ಎಂಬ ಅನುಮಾನಗಳು ಮೂಡಿತ್ತು.

ಹೌದು, ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಲ್ಲಗೆಳೆಯುವಂತಿಲ್ಲ. ಏಕೆಂದರೆ ನಿತೀಶ್ ಕುಮಾರ್ ರೆಡ್ಡಿ 99 ರನ್​ಗಳಿಸಿದ್ದ ವೇಳೆ ಜಸ್​ಪ್ರೀತ್ ಬುಮ್ರಾ ಶೂನ್ಯಕ್ಕೆ ಔಟಾಗಿದ್ದರು. 114ನೇ ಓವರ್​ನ 3ನೇ ಎಸೆತದಲ್ಲಿ ಬುಮ್ರಾ ಔಟಾಗಿ ಹೋದಾಗ ನಿತೀಶ್ ಕುಮಾರ್ ನಾನ್ ಸ್ಟ್ರೈಕ್​ನಲ್ಲಿದ್ದರು. ಹೀಗಾಗಿ ಕೊನೆಯ ವಿಕೆಟ್​ ಒಳಗೆ ಶತಕ ಪೂರೈಸಲು ಸಾಧ್ಯನಾ ಎಂಬ ಅನುಮಾನಗಳು ಮೂಡಿತ್ತು.

3 / 5
ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಅನುಭವಿ ವೇಗಿ ಪ್ಯಾಟ್ ಕಮಿನ್ಸ್ ಅವರನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಲ್ಲೂ 14ನೇ ಓವರ್​ನ ಕೊನೆಯ ಎಸೆತದಲ್ಲಿ ಅದ್ಭುತ ಡಿಫೆನ್ಸ್ ಆಡುವ ಮೂಲಕ ಗಮನ ಸೆಳೆದರು. ಈ ಮೂಲಕ ಔಟ್ ಆಗದೇ ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಪರೋಕ್ಷ ಕಾರಣಕರ್ತರಾದರು.

ಈ ಹಂತದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಅನುಭವಿ ವೇಗಿ ಪ್ಯಾಟ್ ಕಮಿನ್ಸ್ ಅವರನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದರು. ಅದರಲ್ಲೂ 14ನೇ ಓವರ್​ನ ಕೊನೆಯ ಎಸೆತದಲ್ಲಿ ಅದ್ಭುತ ಡಿಫೆನ್ಸ್ ಆಡುವ ಮೂಲಕ ಗಮನ ಸೆಳೆದರು. ಈ ಮೂಲಕ ಔಟ್ ಆಗದೇ ನಿತೀಶ್ ಕುಮಾರ್ ರೆಡ್ಡಿ ಶತಕ ಪೂರೈಸಲು ಪರೋಕ್ಷ ಕಾರಣಕರ್ತರಾದರು.

4 / 5
ಇತ್ತ 3ನೇ ದಿನದಾಟದ ಮುಕ್ತಾಯದ ಬಳಿಕ ಪೆವಿಲಿಯನ್​ಗೆ ಮರಳಿದ ನಿತೀಶ್ ಕುಮಾರ್ ರೆಡ್ಡಿಯನ್ನು ಎಲ್ಲಾ ಆಟಗಾರರು ಸ್ವಾಗತಿಸಿದರು. ಇದರ ನಡುವೆ ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್ ಅವರ ಪ್ರಯತ್ನವನ್ನು ಶ್ಲಾಘಿಸಿರುವುದು ವಿಶೇಷ. ಇದೀಗ ಸಿರಾಜ್ ಅವರನ್ನು ಅಪ್ರೀಶಿಯೇಟ್ ಮಾಡುತ್ತಿರುವ ಕಿಂಗ್ ಕೊಹ್ಲಿಯ ಫೋಟೋಗಳು ವೈರಲ್ ಆಗಿದೆ.

ಇತ್ತ 3ನೇ ದಿನದಾಟದ ಮುಕ್ತಾಯದ ಬಳಿಕ ಪೆವಿಲಿಯನ್​ಗೆ ಮರಳಿದ ನಿತೀಶ್ ಕುಮಾರ್ ರೆಡ್ಡಿಯನ್ನು ಎಲ್ಲಾ ಆಟಗಾರರು ಸ್ವಾಗತಿಸಿದರು. ಇದರ ನಡುವೆ ವಿರಾಟ್ ಕೊಹ್ಲಿ ಮೊಹಮ್ಮದ್ ಸಿರಾಜ್ ಅವರ ಪ್ರಯತ್ನವನ್ನು ಶ್ಲಾಘಿಸಿರುವುದು ವಿಶೇಷ. ಇದೀಗ ಸಿರಾಜ್ ಅವರನ್ನು ಅಪ್ರೀಶಿಯೇಟ್ ಮಾಡುತ್ತಿರುವ ಕಿಂಗ್ ಕೊಹ್ಲಿಯ ಫೋಟೋಗಳು ವೈರಲ್ ಆಗಿದೆ.

5 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್​​ಗಳಿಸಿ ಆಲೌಟ್ ಆದರೆ, ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 105 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 474 ರನ್​​ಗಳಿಸಿ ಆಲೌಟ್ ಆದರೆ, ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 369 ರನ್​​ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್​ನಲ್ಲಿ 105 ರನ್​​ಗಳ ಮುನ್ನಡೆ ಪಡೆದುಕೊಂಡಿದೆ.