AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಗೆ ಮತ್ತೆ ಟೆಸ್ಟ್ ತಂಡದ ನಾಯಕತ್ವ?

Virat Kohli: 2014 ರಿಂದ 2022 ರವರೆಗೆ 68 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮುನ್ನಡೆಸಿದ್ದ ವಿರಾಟ್ ಕೊಹ್ಲಿ 40 ಗೆಲುವು, 11 ಡ್ರಾ ಸಾಧಿಸಿದ್ದರು. ಇನ್ನು ಕಿಂಗ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಸೋತಿರುವುದು ಕೇವಲ 17 ಪಂದ್ಯಗಳಲ್ಲಿ ಮಾತ್ರ.

TV9 Web
| Edited By: |

Updated on:Jul 10, 2023 | 10:47 PM

Share
ಭಾರತ ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತೆ ನಾಯಕರಾಗಲಿದ್ದಾರಾ? ಇಂತಹದೊಂದು ಚರ್ಚೆಯನ್ನು ಹುಟ್ಟುಹಾಕಿರುವುದು ಮತ್ಯಾರೂ ಅಲ್ಲ, ಬಿಸಿಸಿಐನ ಮಾಜಿ ಮುಖ್ಯ ಆಯ್ಕೆಗಾರ ಎಂಎಸ್‌ಕೆ ಪ್ರಸಾದ್.

ಭಾರತ ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತೆ ನಾಯಕರಾಗಲಿದ್ದಾರಾ? ಇಂತಹದೊಂದು ಚರ್ಚೆಯನ್ನು ಹುಟ್ಟುಹಾಕಿರುವುದು ಮತ್ಯಾರೂ ಅಲ್ಲ, ಬಿಸಿಸಿಐನ ಮಾಜಿ ಮುಖ್ಯ ಆಯ್ಕೆಗಾರ ಎಂಎಸ್‌ಕೆ ಪ್ರಸಾದ್.

1 / 8
ಹೌದು, ಎಂಎಸ್​ಕೆ ಪ್ರಸಾದ್ ಅವರ ಪ್ರಕಾರ, ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಕಿಂಗ್ ಕೊಹ್ಲಿ ಮತ್ತೆ ನಾಯಕರಾಗುವ ಸಾಧ್ಯತೆಯಿದೆ. ಇದಕ್ಕೆ ಮುಖ್ಯ ಕಾರಣ ಏಕದಿನ ವಿಶ್ವಕಪ್​ ಬಳಿಕ ರೋಹಿತ್ ಶರ್ಮಾ ಅವರ ಯುಗಾಂತ್ಯವಾಗುತ್ತಿರುವುದು.

ಹೌದು, ಎಂಎಸ್​ಕೆ ಪ್ರಸಾದ್ ಅವರ ಪ್ರಕಾರ, ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಕಿಂಗ್ ಕೊಹ್ಲಿ ಮತ್ತೆ ನಾಯಕರಾಗುವ ಸಾಧ್ಯತೆಯಿದೆ. ಇದಕ್ಕೆ ಮುಖ್ಯ ಕಾರಣ ಏಕದಿನ ವಿಶ್ವಕಪ್​ ಬಳಿಕ ರೋಹಿತ್ ಶರ್ಮಾ ಅವರ ಯುಗಾಂತ್ಯವಾಗುತ್ತಿರುವುದು.

2 / 8
ಅಂದರೆ ಏಕದಿನ ವಿಶ್ವಕಪ್​ನೊಂದಿಗೆ 36 ವರ್ಷದ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ. ಇದರಿಂದ ಬಿಸಿಸಿಐ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ. ಆದರೆ ಇಲ್ಲಿ ಬಿಸಿಸಿಐ ಮುಂದಿರುವ ಆಯ್ಕೆ ಕೇವಲ ವಿರಾಟ್ ಕೊಹ್ಲಿ.

ಅಂದರೆ ಏಕದಿನ ವಿಶ್ವಕಪ್​ನೊಂದಿಗೆ 36 ವರ್ಷದ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ. ಇದರಿಂದ ಬಿಸಿಸಿಐ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ. ಆದರೆ ಇಲ್ಲಿ ಬಿಸಿಸಿಐ ಮುಂದಿರುವ ಆಯ್ಕೆ ಕೇವಲ ವಿರಾಟ್ ಕೊಹ್ಲಿ.

3 / 8
ಏಕೆಂದರೆ ರೋಹಿತ್ ಶರ್ಮಾ ನಾಯಕತ್ವವನ್ನು ತ್ಯಜಿಸಿದರೆ, ಟಿ20 ಜೊತೆಗೆ ಏಕದಿನ ತಂಡವನ್ನು ಕೂಡ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಇದೇ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್ ಆಡಿ ಬರೋಬ್ಬರಿ 4 ವರ್ಷಗಳೇ ಕಳೆದಿವೆ.

ಏಕೆಂದರೆ ರೋಹಿತ್ ಶರ್ಮಾ ನಾಯಕತ್ವವನ್ನು ತ್ಯಜಿಸಿದರೆ, ಟಿ20 ಜೊತೆಗೆ ಏಕದಿನ ತಂಡವನ್ನು ಕೂಡ ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಆದರೆ ಇದೇ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್ ಆಡಿ ಬರೋಬ್ಬರಿ 4 ವರ್ಷಗಳೇ ಕಳೆದಿವೆ.

4 / 8
ಅಂದರೆ ಇಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್​ನತ್ತ ಗಮನ ಹರಿಸುತ್ತಿಲ್ಲ. ಅಲ್ಲದೆ ಸೀಮಿತ ಓವರ್​ಗಳ ತಂಡಗಳಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದರೆ ಬಿಸಿಸಿಐ ಹೊಸ ನಾಯಕನನ್ನು ಹುಡುಕಬೇಕಿದೆ.

ಅಂದರೆ ಇಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್​ನತ್ತ ಗಮನ ಹರಿಸುತ್ತಿಲ್ಲ. ಅಲ್ಲದೆ ಸೀಮಿತ ಓವರ್​ಗಳ ತಂಡಗಳಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದರೆ ಬಿಸಿಸಿಐ ಹೊಸ ನಾಯಕನನ್ನು ಹುಡುಕಬೇಕಿದೆ.

5 / 8
ಇಲ್ಲಿ ಬಿಸಿಸಿಐ ಮುಂದಿರುವ ಅತ್ಯುತ್ತಮ ಆಯ್ಕೆ ವಿರಾಟ್ ಕೊಹ್ಲಿ. ಹೀಗಾಗಿ ಕಿಂಗ್ ಕೊಹ್ಲಿಗೆ ನಾಯಕತ್ವ ನೀಡುವ ಸಾಧ್ಯತೆಯಿದೆ. ಇದಾಗ್ಯೂ ಆಯ್ಕೆ ಸಮಿತಿಯ ಮನಸ್ಥಿತಿ ನನಗೆ ತಿಳಿದಿಲ್ಲ. ಹಾಗೆಯೇ ವಿರಾಟ್ ಏನು ಯೋಚಿಸುತ್ತಾರೋ ಗೊತ್ತಿಲ್ಲ. ಆಯ್ಕೆದಾರರು ಅನುಭವಿ ಆಟಗಾರನಿಗೆ ಮತ್ತೆ ನಾಯಕತ್ವ ನೀಡಲು ಬಯಸಿದರೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಬಹುದು ಎಂದು ಎಂಎಸ್​ಕೆ ಪ್ರಸಾದ್ ತಿಳಿಸಿದ್ದಾರೆ.

ಇಲ್ಲಿ ಬಿಸಿಸಿಐ ಮುಂದಿರುವ ಅತ್ಯುತ್ತಮ ಆಯ್ಕೆ ವಿರಾಟ್ ಕೊಹ್ಲಿ. ಹೀಗಾಗಿ ಕಿಂಗ್ ಕೊಹ್ಲಿಗೆ ನಾಯಕತ್ವ ನೀಡುವ ಸಾಧ್ಯತೆಯಿದೆ. ಇದಾಗ್ಯೂ ಆಯ್ಕೆ ಸಮಿತಿಯ ಮನಸ್ಥಿತಿ ನನಗೆ ತಿಳಿದಿಲ್ಲ. ಹಾಗೆಯೇ ವಿರಾಟ್ ಏನು ಯೋಚಿಸುತ್ತಾರೋ ಗೊತ್ತಿಲ್ಲ. ಆಯ್ಕೆದಾರರು ಅನುಭವಿ ಆಟಗಾರನಿಗೆ ಮತ್ತೆ ನಾಯಕತ್ವ ನೀಡಲು ಬಯಸಿದರೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಬಹುದು ಎಂದು ಎಂಎಸ್​ಕೆ ಪ್ರಸಾದ್ ತಿಳಿಸಿದ್ದಾರೆ.

6 / 8
2014 ರಿಂದ 2022 ರವರೆಗೆ 68 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮುನ್ನಡೆಸಿದ್ದ ವಿರಾಟ್ ಕೊಹ್ಲಿ 40 ಗೆಲುವು, 11 ಡ್ರಾ ಸಾಧಿಸಿದ್ದರು. ಇನ್ನು ಕಿಂಗ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಸೋತಿರುವುದು ಕೇವಲ 17 ಪಂದ್ಯಗಳಲ್ಲಿ ಮಾತ್ರ.

2014 ರಿಂದ 2022 ರವರೆಗೆ 68 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಮುನ್ನಡೆಸಿದ್ದ ವಿರಾಟ್ ಕೊಹ್ಲಿ 40 ಗೆಲುವು, 11 ಡ್ರಾ ಸಾಧಿಸಿದ್ದರು. ಇನ್ನು ಕಿಂಗ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್ ತಂಡ ಸೋತಿರುವುದು ಕೇವಲ 17 ಪಂದ್ಯಗಳಲ್ಲಿ ಮಾತ್ರ.

7 / 8
ಅಂದರೆ ಶೇ. 70.17 ಗೆಲುವಿನ ಸರಾಸರಿ ಹೊಂದಿರುವ ವಿರಾಟ್ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ತಂಡದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿಯೇ ಎಂಎಸ್​ಕೆ ಪ್ರಸಾದ್ ಬಿಸಿಸಿಐ ಮತ್ತೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ ಎಂದಿರುವುದು.

ಅಂದರೆ ಶೇ. 70.17 ಗೆಲುವಿನ ಸರಾಸರಿ ಹೊಂದಿರುವ ವಿರಾಟ್ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ತಂಡದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿಯೇ ಎಂಎಸ್​ಕೆ ಪ್ರಸಾದ್ ಬಿಸಿಸಿಐ ಮತ್ತೆ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ ಎಂದಿರುವುದು.

8 / 8

Published On - 10:08 pm, Mon, 10 July 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ