AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ರಿಎಂಟ್ರಿ

Virat Kohli: ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಬಾರಿಸಿದ್ದರು. ಇದೀಗ ರಾಯ್​ಪುರದಲ್ಲಿ ನಡೆಯಲಿರುವ ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗಿದ್ದಾರೆ. ಇನ್ನು ಈ ಸರಣಿಯ ಬಳಿಕ ದೇಶೀಯ ಟೂರ್ನಿ ಆಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 03, 2025 | 8:24 AM

Share
ವಿರಾಟ್ ಕೊಹ್ಲಿ (Virat Kohli) ದೇಶೀಯ ಅಂಗಳಕ್ಕೆ ಮರಳುತ್ತಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ. ಹೌದು, ಕಿಂಗ್ ಕೊಹ್ಲಿ ಮುಂಬರುವ ವಿಜಯ ಹಝಾರೆ ಏಕದಿನ ಟೂರ್ನಿ ಆಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಈಗಾಗಲೇ ದೆಹಲಿ ಕ್ರಿಕೆಟ್ ಅಸೋಸಿಯೇಷನ್​ಗೆ ಮಾಹಿತಿ ನೀಡಿದ್ದಾರೆ.

ವಿರಾಟ್ ಕೊಹ್ಲಿ (Virat Kohli) ದೇಶೀಯ ಅಂಗಳಕ್ಕೆ ಮರಳುತ್ತಿದ್ದಾರೆ. ಅದು ಕೂಡ ಬರೋಬ್ಬರಿ 15 ವರ್ಷಗಳ ಬಳಿಕ. ಹೌದು, ಕಿಂಗ್ ಕೊಹ್ಲಿ ಮುಂಬರುವ ವಿಜಯ ಹಝಾರೆ ಏಕದಿನ ಟೂರ್ನಿ ಆಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಈಗಾಗಲೇ ದೆಹಲಿ ಕ್ರಿಕೆಟ್ ಅಸೋಸಿಯೇಷನ್​ಗೆ ಮಾಹಿತಿ ನೀಡಿದ್ದಾರೆ.

1 / 5
ಮುಂಬರುವ ವಿಜಯ ಹಝಾರೆ ಟೂರ್ನಿಗೆ ತಾನು ಆಯ್ಕೆಗೆ ಲಭ್ಯರಿರುವುದಾಗಿ ವಿರಾಟ್ ಕೊಹ್ಲಿ ದೆಹಲಿ ರಾಜ್ಯ ತಂಡದ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.  ಇದರೊಂದಿಗೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ದೇಶೀಯ ಟೂರ್ನಿಯಲ್ಲಿ ಬ್ಯಾಟ್ ಬೀಸುವುದು ಖಚಿತವಾಗಿದೆ. ಅದು ಕೂಡ ಕೂಡ ಬರೋಬ್ಬರಿ 15 ವರ್ಷಗಳ ಬಳಿಕ ಎಂಬುದು ವಿಶೇಷ.

ಮುಂಬರುವ ವಿಜಯ ಹಝಾರೆ ಟೂರ್ನಿಗೆ ತಾನು ಆಯ್ಕೆಗೆ ಲಭ್ಯರಿರುವುದಾಗಿ ವಿರಾಟ್ ಕೊಹ್ಲಿ ದೆಹಲಿ ರಾಜ್ಯ ತಂಡದ ಆಯ್ಕೆ ಸಮಿತಿಗೆ ತಿಳಿಸಿದ್ದಾರೆ.  ಇದರೊಂದಿಗೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಕಿಂಗ್ ಕೊಹ್ಲಿ ದೇಶೀಯ ಟೂರ್ನಿಯಲ್ಲಿ ಬ್ಯಾಟ್ ಬೀಸುವುದು ಖಚಿತವಾಗಿದೆ. ಅದು ಕೂಡ ಕೂಡ ಬರೋಬ್ಬರಿ 15 ವರ್ಷಗಳ ಬಳಿಕ ಎಂಬುದು ವಿಶೇಷ.

2 / 5
ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಅಲ್ಲದೆ ಐದು ಇನಿಂಗ್ಸ್​ಗಳಲ್ಲಿ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು.

ವಿರಾಟ್ ಕೊಹ್ಲಿ ಕೊನೆಯ ಬಾರಿ ವಿಜಯ ಹಝಾರೆ ಟೂರ್ನಿ ಆಡಿದ್ದು 2010 ರಲ್ಲಿ. ಅಂದು ದೆಹಲಿ ಪರ ಐದು ಮ್ಯಾಚ್​ಗಳಲ್ಲಿ ಬ್ಯಾಟ್ ಬೀಸಿದ್ದ ಕೊಹ್ಲಿ 45.80 ಸರಾಸರಿಯಲ್ಲಿ 229 ರನ್ ಗಳಿಸಿದ್ದರು. ಅಲ್ಲದೆ ಐದು ಇನಿಂಗ್ಸ್​ಗಳಲ್ಲಿ ಎರಡು ಅರ್ಧಶತಕಗಳನ್ನು ಸಹ ಬಾರಿಸಿದ್ದರು.

3 / 5
ಇದೀಗ ಬರೋಬ್ಬರಿ 15 ವರ್ಷಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಏಕದಿನ ಪಂದ್ಯವನ್ನಾಡಲು ನಿರ್ಧರಿಸಿದ್ದಾರೆ. ಅದರಂತೆ ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಏಕದಿನ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಕೊಹ್ಲಿ ಸಿದ್ಧತೆ ನಡೆಸಲಿದ್ದಾರೆ.

ಇದೀಗ ಬರೋಬ್ಬರಿ 15 ವರ್ಷಗಳ ಬಳಿಕ ಮತ್ತೊಮ್ಮೆ ದೆಹಲಿ ಪರ ಏಕದಿನ ಪಂದ್ಯವನ್ನಾಡಲು ನಿರ್ಧರಿಸಿದ್ದಾರೆ. ಅದರಂತೆ ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಏಕದಿನ ಟೂರ್ನಿಯಲ್ಲಿ ಕಿಂಗ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನ್ಯೂಝಿಲೆಂಡ್ ವಿರುದ್ಧದ ಸರಣಿಗಾಗಿ ಕೊಹ್ಲಿ ಸಿದ್ಧತೆ ನಡೆಸಲಿದ್ದಾರೆ.

4 / 5
ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ವಿಜಯ ಹಝಾರೆ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಕೊಹ್ಲಿ 7 ಪಂದ್ಯಗಳನ್ನಾಡುವ ಸಾಧ್ಯತೆಯಿದೆ. ಇದಾದ ಬಳಿಕ ಜನವರಿ 11 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಅಲ್ಲಿಯವರೆಗೆ ಕಿಂಗ್ ಕೊಹ್ಲಿ ದೇಶೀಯ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮುಕ್ತಾಯದ ಬೆನ್ನಲ್ಲೇ ವಿಜಯ ಹಝಾರೆ ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಕೊಹ್ಲಿ 7 ಪಂದ್ಯಗಳನ್ನಾಡುವ ಸಾಧ್ಯತೆಯಿದೆ. ಇದಾದ ಬಳಿಕ ಜನವರಿ 11 ರಿಂದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಅಲ್ಲಿಯವರೆಗೆ ಕಿಂಗ್ ಕೊಹ್ಲಿ ದೇಶೀಯ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ