Virat Kohli Captain: ಆರ್​ಸಿಬಿಗೆ ವಿರಾಟ್ ಕೊಹ್ಲಿಯೇ ನಾಯಕ: ಬೆಂಗಳೂರು ತಂಡದಲ್ಲಿ ಆಗುತ್ತಾ ದೊಡ್ಡ ಬದಲಾವಣೆ?

RCB vs RR, IPL 2023: ಆರ್​ಸಿಬಿ ತಂಡದ ಖಾಯಂ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ವಿರಾಟ್ ಕೊಹ್ಲಿ ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದರು.

|

Updated on:Apr 22, 2023 | 11:25 AM

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಿ ವರ್ಷಗಳು ಕಳೆದಿವೆ. ಆದರೆ, ಐಪಿಎಲ್ 2023ರಲ್ಲಿ ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 464 ದಿನಗಳ ಬಳಿಕ ನಾಯಕನ ಕ್ಯಾಪ್ ತೊಟ್ಟರು.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ತ್ಯಜಿಸಿ ವರ್ಷಗಳು ಕಳೆದಿವೆ. ಆದರೆ, ಐಪಿಎಲ್ 2023ರಲ್ಲಿ ಕಳೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ 464 ದಿನಗಳ ಬಳಿಕ ನಾಯಕನ ಕ್ಯಾಪ್ ತೊಟ್ಟರು.

1 / 7
ಆರ್​ಸಿಬಿ ತಂಡದ ಖಾಯಂ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಕೊಹ್ಲಿ ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದರು.

ಆರ್​ಸಿಬಿ ತಂಡದ ಖಾಯಂ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ಕೊಹ್ಲಿ ಕ್ಯಾಪ್ಟನ್ ಸ್ಥಾನ ಅಲಂಕರಿಸಿದ್ದರು.

2 / 7
ಇದೀಗ ವಿರಾಟ್ ಕೊಹ್ಲಿ ಮುಂಬವರುವ ಎರಡು ಪಂದ್ಯಗಳಲ್ಲೂ ನಾಯಕನಾಗಿ ಆರ್​ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ. ಇಂಜುರಿಯಿಂದ ಸಂಪೂರ್ಣ ಗುಣಮಖರಾಗದ ಡುಪ್ಲೆಸಿಸ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬಹುದು ಅಥವಾ ಪುನಃ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದು.

ಇದೀಗ ವಿರಾಟ್ ಕೊಹ್ಲಿ ಮುಂಬವರುವ ಎರಡು ಪಂದ್ಯಗಳಲ್ಲೂ ನಾಯಕನಾಗಿ ಆರ್​ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಇನ್​ಸೈಡ್ ಸ್ಪೋರ್ಟ್ಸ್ ವರದಿ ಮಾಡಿದೆ. ಇಂಜುರಿಯಿಂದ ಸಂಪೂರ್ಣ ಗುಣಮಖರಾಗದ ಡುಪ್ಲೆಸಿಸ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿಯಬಹುದು ಅಥವಾ ಪುನಃ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಳ್ಳಬಹುದು.

3 / 7
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ತೋರಿ 24 ರನ್​ಗಳ ಜಯ ಸಾಧಿಸಿತ್ತು. ಕೊಹ್ಲಿ 59 ಹಾಗೂ ಡುಪ್ಲೆಸಿಸ್ 84 ರನ್ ಗಳಿಸಿದ್ದರು. ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ತೋರಿ 24 ರನ್​ಗಳ ಜಯ ಸಾಧಿಸಿತ್ತು. ಕೊಹ್ಲಿ 59 ಹಾಗೂ ಡುಪ್ಲೆಸಿಸ್ 84 ರನ್ ಗಳಿಸಿದ್ದರು. ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದ್ದರು.

4 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಇದಾದ ಬಳಿಕ ಏಪ್ರಿಲ್ 26ಕ್ಕೆ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಭಾನುವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಇದಾದ ಬಳಿಕ ಏಪ್ರಿಲ್ 26ಕ್ಕೆ ಲಖನೌ ಸೂಪರ್ ಜೇಂಟ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ.

5 / 7
ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ. ಹಸಿರು ಜೆರ್ಸಿ ತೊಟ್ಟು ಆಡುವ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. ಆರ್​ಸಿಬಿ 2011 ರಿಂದ ಈ ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುತ್ತಿದೆ.

ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಗೇಮ್ ಅಭಿಯಾನದೊಂದಿಗೆ ಕಣಕ್ಕಿಳಿಯಲಿದೆ. ಹಸಿರು ಜೆರ್ಸಿ ತೊಟ್ಟು ಆಡುವ ಮೂಲಕ ಮರವನ್ನು ಉಳಿಸಿ-ಬೆಳೆಸುವ ಬಗ್ಗೆ ಸಂದೇಶ ಸಾರಲಿದೆ. ಆರ್​ಸಿಬಿ 2011 ರಿಂದ ಈ ಅಭಿಯಾನ ನಡೆಸುತ್ತಿದ್ದು, ಈ ಮೂಲಕ ಪರಿಸರ ಸಂರಕ್ಷಿಸುವ ಬಗ್ಗೆ ಅರಿವು ಮೂಡಿಸುತ್ತಿದೆ.

6 / 7
ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 6 ಅಂಕ ಸಂಪಾದಿಸಿ -0.068 ರನ್​ರೇಟ್ ಹೊಂದಿದೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡು 6 ಅಂಕ ಸಂಪಾದಿಸಿ -0.068 ರನ್​ರೇಟ್ ಹೊಂದಿದೆ.

7 / 7

Published On - 11:25 am, Sat, 22 April 23

Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ