AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕೊನೆಯ ಪಂದ್ಯದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ವಿರಾಟ್ ಕೊಹ್ಲಿ

T20 World Cup 2024 Final: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 76 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 30, 2024 | 11:30 AM

Share
T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕೊಹ್ಲಿ, ವಿಕೆಟ್ ಬೀಳುತ್ತಿದ್ದಂತೆ ಜವಾಬ್ದಾರಿಯುತವಾಗಿ ಇನಿಂಗ್ಸ್ ಕಟ್ಟಿದರು. ಪರಿಣಾಮ ಅರ್ಧಶತಕ ಪೂರೈಸಲುಬರೋಬ್ಬರಿ 48 ಎಸೆತಗಳನ್ನು ತೆಗೆದುಕೊಂಡರು. ಇದರೊಂದಿಗೆ ಟಿ20 ವಿಶ್ವಕಪ್ ಫೈನಲ್​ನಲ್ಲಿ ನಿಧಾನವಾಗಿ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ಕೆಟ್ಟ ದಾಖಲೆಯೊಂದು ಕೊಹ್ಲಿ ಪಾಲಾಯಿತು.

ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಕೊಹ್ಲಿ, ವಿಕೆಟ್ ಬೀಳುತ್ತಿದ್ದಂತೆ ಜವಾಬ್ದಾರಿಯುತವಾಗಿ ಇನಿಂಗ್ಸ್ ಕಟ್ಟಿದರು. ಪರಿಣಾಮ ಅರ್ಧಶತಕ ಪೂರೈಸಲುಬರೋಬ್ಬರಿ 48 ಎಸೆತಗಳನ್ನು ತೆಗೆದುಕೊಂಡರು. ಇದರೊಂದಿಗೆ ಟಿ20 ವಿಶ್ವಕಪ್ ಫೈನಲ್​ನಲ್ಲಿ ನಿಧಾನವಾಗಿ ಅರ್ಧಶತಕ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ಕೆಟ್ಟ ದಾಖಲೆಯೊಂದು ಕೊಹ್ಲಿ ಪಾಲಾಯಿತು.

2 / 5
ಅಲ್ಲದೆ ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅರ್ಧಶತಕ ಪೂರೈಸಲು ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎಂಬ ಕೆಟ್ಟ ದಾಖಲೆಯನ್ನು ಕೂಡ ಕೊಹ್ಲಿ ತಮ್ಮದಾಗಿಸಿಕೊಂಡರು. ಈ ಪಟ್ಟಿಯಲ್ಲಿ 2010ರ ಟಿ20 ವಿಶ್ವಕಪ್​ನಲ್ಲಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಹಸ್ಸಿ ಅಗ್ರಸ್ಥಾನದಲ್ಲಿದ್ದಾರೆ.

ಅಲ್ಲದೆ ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ಅರ್ಧಶತಕ ಪೂರೈಸಲು ಅತೀ ಹೆಚ್ಚು ಎಸೆತಗಳನ್ನು ಎದುರಿಸಿದ 2ನೇ ಬ್ಯಾಟರ್ ಎಂಬ ಕೆಟ್ಟ ದಾಖಲೆಯನ್ನು ಕೂಡ ಕೊಹ್ಲಿ ತಮ್ಮದಾಗಿಸಿಕೊಂಡರು. ಈ ಪಟ್ಟಿಯಲ್ಲಿ 2010ರ ಟಿ20 ವಿಶ್ವಕಪ್​ನಲ್ಲಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇವಿಡ್ ಹಸ್ಸಿ ಅಗ್ರಸ್ಥಾನದಲ್ಲಿದ್ದಾರೆ.

3 / 5
ಇನ್ನು ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಬಾರಿಸಿ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಏಕೈಕ ಆಟಗಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಯುಸ್​ಎ ವಿರುದ್ಧ 49 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನು ಅತೀ ಹೆಚ್ಚು ಎಸೆತಗಳನ್ನು ಎದುರಿಸಿ ಅರ್ಧಶತಕ ಬಾರಿಸಿ ಟಿ20 ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಏಕೈಕ ಆಟಗಾರನಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎಂಬ ಕಳಪೆ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಯುಸ್​ಎ ವಿರುದ್ಧ 49 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಸೂರ್ಯಕುಮಾರ್ ಯಾದವ್ ಮೊದಲ ಸ್ಥಾನದಲ್ಲಿದ್ದಾರೆ.

4 / 5
ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ತಮ್ಮ ಕೆರಿಯರ್​ನ ಕೊನೆಯ ಪಂದ್ಯದಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಈ ಹೀನಾಯ ದಾಖಲೆಯೊಂದಿಗೆ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವುದು ವಿಶೇಷ.

ಒಟ್ಟಿನಲ್ಲಿ ಟೀಮ್ ಇಂಡಿಯಾ ಪರ 117 ಟಿ20 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ ತಮ್ಮ ಕೆರಿಯರ್​ನ ಕೊನೆಯ ಪಂದ್ಯದಲ್ಲಿ ಅತ್ಯಂತ ನಿಧಾನವಾಗಿ ಅರ್ಧಶತಕ ಪೂರೈಸಿ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಈ ಹೀನಾಯ ದಾಖಲೆಯೊಂದಿಗೆ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿರುವುದು ವಿಶೇಷ.

5 / 5
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!