AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ.. ವಿರಾಟ್ ಕೊಹ್ಲಿ ಔಟಾಗಿದಕ್ಕೆ ಫಿಲಿಪ್ಸ್ ಕಂಪೆನಿಗೆ ಬೈಗುಳ..!

IND vs NZ: ಚಾಂಪಿಯನ್ಸ್ ಟ್ರೋಫಿಯ 12ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 249 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 205 ರನ್​ಗಳಿಗೆ ಆಲೌಟ್ ಆಗಿದೆ. ಈ ಸೋಲಿನ ಹೊರತಾಗಿಯೂ ಈ ಪಂದ್ಯದಲ್ಲಿ ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್ ಎಲ್ಲರನ್ನು ನಿಬ್ಬೆರಗಾಗಿಸಿತ್ತು.

ಝಾಹಿರ್ ಯೂಸುಫ್
|

Updated on:Mar 03, 2025 | 10:55 AM

Share
ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 3ನೇ ಓವರ್​ನಲ್ಲೇ ಶುಭ್​​ಮನ್ ಗಿಲ್ (2) ವಿಕೆಟ್ ಕಳೆದುಕೊಂಡಿತು. ಆ ಬಳಿಕ ಬಂದ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರೂ, ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್​ನಿಂದಾಗಿ ಹೊರನಡೆಯಬೇಕಾಯಿತು.

ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 3ನೇ ಓವರ್​ನಲ್ಲೇ ಶುಭ್​​ಮನ್ ಗಿಲ್ (2) ವಿಕೆಟ್ ಕಳೆದುಕೊಂಡಿತು. ಆ ಬಳಿಕ ಬಂದ ವಿರಾಟ್ ಕೊಹ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರೂ, ಗ್ಲೆನ್ ಫಿಲಿಪ್ಸ್ ಹಿಡಿದ ಕ್ಯಾಚ್​ನಿಂದಾಗಿ ಹೊರನಡೆಯಬೇಕಾಯಿತು.

1 / 5
ಮ್ಯಾಟ್ ಹೆನ್ರಿ ಎಸೆದ 7ನೇ ಓವರ್​ನ 4ನೇ ಎಸೆತವನ್ನು ಕೊಹ್ಲಿ ಕಟ್ ಶಾಟ್ ಬಾರಿಸಿದ್ದರು. ಆದರೆ ಬ್ಯಾಕ್​ವರ್ಡ್ ಪಾಯಿಂಟ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಗ್ಲೆನ್ ಫಿಲಿಪ್ಸ್ ಅತ್ಯದ್ಭುತ ಡೈವಿಂಗ್​ನೊಂದಿಗೆ ಚೆಂಡನ್ನು ಹಿಡಿದರು. ಈ ಕ್ಯಾಚ್ ನೋಡಿ ಖುದ್ದು ವಿರಾಟ್ ಕೊಹ್ಲಿಯೇ ದಂಗಾಗಿ ನಿಂತಿದ್ದರು.

ಮ್ಯಾಟ್ ಹೆನ್ರಿ ಎಸೆದ 7ನೇ ಓವರ್​ನ 4ನೇ ಎಸೆತವನ್ನು ಕೊಹ್ಲಿ ಕಟ್ ಶಾಟ್ ಬಾರಿಸಿದ್ದರು. ಆದರೆ ಬ್ಯಾಕ್​ವರ್ಡ್ ಪಾಯಿಂಟ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ಗ್ಲೆನ್ ಫಿಲಿಪ್ಸ್ ಅತ್ಯದ್ಭುತ ಡೈವಿಂಗ್​ನೊಂದಿಗೆ ಚೆಂಡನ್ನು ಹಿಡಿದರು. ಈ ಕ್ಯಾಚ್ ನೋಡಿ ಖುದ್ದು ವಿರಾಟ್ ಕೊಹ್ಲಿಯೇ ದಂಗಾಗಿ ನಿಂತಿದ್ದರು.

2 / 5
ಅತ್ತ ವಿರಾಟ್ ಕೊಹ್ಲಿ (11) ಔಟಾಗಿ ಪೆವಿಲಿಯನ್ ಸೇರುತ್ತಿದ್ದಂತೆ ಇತ್ತ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಗ್ಲೆನ್ ಫಿಲಿಪ್ಸ್​ ಅವರನ್ನು ಅವಾಚ್ಯ ಪದಗಳೊಂದಿಗೆ ನಿಂದಿಸಲಾರಂಭಿಸಿದ್ದರು. ಆದರೆ ಹೀಗೆ ನಿಂದಿಸಿದ್ದು ಎಲೆಕ್ಟ್ರಾನಿಕ್ ಕಂಪನಿ ಫಿಲಿಪ್ಸ್ ಅನ್ನು ಎಂಬುದೇ ಇಲ್ಲಿ ಟ್ವಿಸ್ಟ್.

ಅತ್ತ ವಿರಾಟ್ ಕೊಹ್ಲಿ (11) ಔಟಾಗಿ ಪೆವಿಲಿಯನ್ ಸೇರುತ್ತಿದ್ದಂತೆ ಇತ್ತ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಗದ್ದಲ ಎಬ್ಬಿಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಗ್ಲೆನ್ ಫಿಲಿಪ್ಸ್​ ಅವರನ್ನು ಅವಾಚ್ಯ ಪದಗಳೊಂದಿಗೆ ನಿಂದಿಸಲಾರಂಭಿಸಿದ್ದರು. ಆದರೆ ಹೀಗೆ ನಿಂದಿಸಿದ್ದು ಎಲೆಕ್ಟ್ರಾನಿಕ್ ಕಂಪನಿ ಫಿಲಿಪ್ಸ್ ಅನ್ನು ಎಂಬುದೇ ಇಲ್ಲಿ ಟ್ವಿಸ್ಟ್.

3 / 5
ಅಂದರೆ ಗ್ಲೆನ್ ಫಿಲಿಪ್ಸ್ ಅವರ ಇನ್​ಸ್ಟಾಗ್ರಾಮ್ ಖಾತೆ ಎಂದು ತಪ್ಪಾಗಿ ಅರ್ಥೈಸಿಕೊಂಡ ಅನೇಕರು ಫಿಲಿಪ್ಸ್ ಕಂಪೆನಿಯ ಸೋಷಿಯಲ್ ಮೀಡಿಯಾ ಪೋಸ್ಟ್​ಗಳಿಗೆ ಅವಾಚ್ಯ ಶಬ್ದಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಕೊಹ್ಲಿಯ ಕ್ಯಾಚ್ ಹಿಡಿದಿದ್ದಕ್ಕೆ ಫಿಲಿಪ್ಸ್ ಅವರನ್ನು ಜರಿಯಲಾರಂಭಿಸಿದ್ದಾರೆ.

ಅಂದರೆ ಗ್ಲೆನ್ ಫಿಲಿಪ್ಸ್ ಅವರ ಇನ್​ಸ್ಟಾಗ್ರಾಮ್ ಖಾತೆ ಎಂದು ತಪ್ಪಾಗಿ ಅರ್ಥೈಸಿಕೊಂಡ ಅನೇಕರು ಫಿಲಿಪ್ಸ್ ಕಂಪೆನಿಯ ಸೋಷಿಯಲ್ ಮೀಡಿಯಾ ಪೋಸ್ಟ್​ಗಳಿಗೆ ಅವಾಚ್ಯ ಶಬ್ದಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಕೊಹ್ಲಿಯ ಕ್ಯಾಚ್ ಹಿಡಿದಿದ್ದಕ್ಕೆ ಫಿಲಿಪ್ಸ್ ಅವರನ್ನು ಜರಿಯಲಾರಂಭಿಸಿದ್ದಾರೆ.

4 / 5
ಪರಿಣಾಮ ಎಲೆಕ್ಟ್ರಾನಿಕ್ ಕಂಪನಿ ಫಿಲಿಪ್ಸ್ ಖಾತೆಯಲ್ಲಿ ಇದೀಗ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ರಾಶಿ ರಾಶಿ ಕಾಮೆಂಟ್​ಗಳು ಬಂದು ಬಿದ್ದಿವೆ. ಆದರೆ ಕ್ರಿಕೆಟ್​ಗೂ ತನಗೂ ಯಾವುದೇ ಸಂಬಂಧವಿಲ್ಲದಿದ್ದರೂ, ವಿರಾಟ್ ಕೊಹ್ಲಿಯ ಕೆಲ ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಫಿಲಿಪ್ಸ್ ಕಂಪೆನಿಗೆ ಶಾಕ್ ಆಗಿದ್ದಂತು ನಿಜ.

ಪರಿಣಾಮ ಎಲೆಕ್ಟ್ರಾನಿಕ್ ಕಂಪನಿ ಫಿಲಿಪ್ಸ್ ಖಾತೆಯಲ್ಲಿ ಇದೀಗ ವಿರಾಟ್ ಕೊಹ್ಲಿಗೆ ಸಂಬಂಧಿಸಿದ ರಾಶಿ ರಾಶಿ ಕಾಮೆಂಟ್​ಗಳು ಬಂದು ಬಿದ್ದಿವೆ. ಆದರೆ ಕ್ರಿಕೆಟ್​ಗೂ ತನಗೂ ಯಾವುದೇ ಸಂಬಂಧವಿಲ್ಲದಿದ್ದರೂ, ವಿರಾಟ್ ಕೊಹ್ಲಿಯ ಕೆಲ ಅಭಿಮಾನಿಗಳ ಅತಿರೇಕದ ವರ್ತನೆಯಿಂದಾಗಿ ಫಿಲಿಪ್ಸ್ ಕಂಪೆನಿಗೆ ಶಾಕ್ ಆಗಿದ್ದಂತು ನಿಜ.

5 / 5

Published On - 9:04 am, Mon, 3 March 25

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​