AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕೀಬ್ ಅಲ್ ಹಸನ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್ ಶಕೀಬ್ ಅಲ್ ಹಸನ್​ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್​ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 01, 2024 | 5:58 PM

Share
ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

1 / 5
ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

2 / 5
ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

3 / 5
ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

4 / 5
ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246	 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

5 / 5
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ