AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕೀಬ್ ಅಲ್ ಹಸನ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್ ಶಕೀಬ್ ಅಲ್ ಹಸನ್​ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್​ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 01, 2024 | 5:58 PM

Share
ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

1 / 5
ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

2 / 5
ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

3 / 5
ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

4 / 5
ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246	 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ