ಶಕೀಬ್ ಅಲ್ ಹಸನ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್ ಶಕೀಬ್ ಅಲ್ ಹಸನ್​ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್​ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.

|

Updated on: Oct 01, 2024 | 5:58 PM

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

1 / 5
ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

2 / 5
ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

3 / 5
ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

4 / 5
ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246	 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

5 / 5
Follow us
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಚೈತ್ರಾ ಕುಂದಾಪುರ ಧ್ಯಾನ, ಮಾನಸ ಅನುಮಾನ, ನರಕದಲ್ಲಿ ಮತ್ತೆ ಅಸಮಾಧಾನ
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಮುಡಾ ಹಗರಣ: ಸಿದ್ದರಾಮಯ್ಯ ಬಗ್ಗೆ ಆಪ್ತ ಸ್ನೇಹಿತನ ಮನದ ಮಾತು
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಪ್ರಕರಣ: ಯಡಿಯೂರಪ್ಪ ಪುತ್ರ, ಕುಮಾರಸ್ವಾಮಿಯಿಂದ ಈ ಕಳಂಕ- ಸಿಎಂ ಸಹೋದರ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಮುಡಾ ಸೈಟ್​ಗೂ ಮುನ್ನವೇ ಹಲವು ಸೈಟ್ ಪಡೆದಿದ್ದ ಸಿದ್ದರಾಮಯ್ಯ: ಕುಮಾರಸ್ವಾಮಿ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಚಂದ್ರಶೇಖರ್​ ಗೆಟ್​ ಲಾಸ್ಟ್​​ : ADGP ವಿರುದ್ಧ ಸಿಂಹ ಪ್ರತಾಪ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಕೋಸಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಸೇತುವೆಯಿಂದ ಓಡಿದ ಜನ
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಶಓಮಿ ರೆಡ್ಮಿ ಸ್ಮಾರ್ಟ್​ವಾಚ್ ಬ್ಯಾಟರಿ 18 ದಿನ ಬಾಳಿಕೆ ಬರುತ್ತೆ!
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮುಡಾ 364 ಕೋಟಿ ರೂ. ದುರ್ಬಳಕೆ: ಇಡಿ ದೂರುದಾರರಿಂದ ಶಾಕಿಂಗ್ ಹೇಳಿಕೆ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ