AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕೀಬ್ ಅಲ್ ಹಸನ್​ಗೆ ವಿಶೇಷ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Shakib al Hasan - Virat Kohli: ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್ ಶಕೀಬ್ ಅಲ್ ಹಸನ್​ ಭಾರತದಲ್ಲಿ ತಮ್ಮ ಕೊನೆಯ ಪಂದ್ಯವಾಡಿದ್ದಾರೆ. ಕಾನ್ಪುರ ಟೆಸ್ಟ್ ಪಂದ್ಯದೊಂದಿಗೆ ವಿದೇಶಿ ಸರಣಿ ಮುಗಿಸಿರುವ ಶಕೀಬ್ ಅಲ್ ಹಸನ್​ಗೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಬೀಳ್ಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 01, 2024 | 5:58 PM

Share
ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಈ ಸರಣಿಯು ಬಾಂಗ್ಲಾದೇಶ್ ತಂಡದ ಮಾಜಿ ನಾಯಕ ಶಕೀಬ್ ಅಲ್ ಹಸನ್ ಅವರ ಕೊನೆಯ ವಿದೇಶಿ ಟೆಸ್ಟ್ ಸರಣಿ.

1 / 5
ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

ಅಂದರೆ ಈಗಾಗಲೇ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಘೋಷಿಸಿರುವ ಶಕೀಬ್ ಅಲ್ ಹಸನ್ ಇನ್ಮುಂದೆ ಯಾವುದೇ ವಿದೇಶಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ.

2 / 5
ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

ಹೀಗಾಗಿಯೇ ಭಾರತದ ವಿರುದ್ಧದ ಟೆಸ್ಟ್ ಸರಣಿಯು ಶಕೀಬ್ ಅಲ್ ಹಸನ್ ಪಾಲಿಗೆ ತುಂಬಾ ಮಹತ್ವದ್ದಾಗಿತ್ತು. ಇದಾಗ್ಯೂ ಈ ಸರಣಿಯಲ್ಲಿ ಬಾಂಗ್ಲಾದೇಶ್​ ತಂಡಕ್ಕೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ ಸೋಲಿನೊಂದಿಗೆ ವಿದೇಶಿ ಸರಣಿ ಕೊನೆಗೊಳಿಸುತ್ತಿರುವ ಶಕೀಬ್​ಗೆ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್​ ಅನ್ನು ಗಿಫ್ಟ್ ಮಾಡಿದ್ದಾರೆ.

3 / 5
ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

ಪಂದ್ಯದ ಬಳಿಕ ಶಕೀಬ್ ಅಲ್ ಹಸನ್ ಜೊತೆ ಕುಶಲೋಪರಿ ನಡೆಸಿದ ವಿರಾಟ್ ಕೊಹ್ಲಿ ತಮ್ಮ ವಿಶೇಷ ಬ್ಯಾಟ್​ ಅನ್ನು ಉಡುಗೊರೆಯಾಗಿ ನೀಡಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಶ್ರೇಷ್ಠ ಆಲ್​ರೌಂಡರ್​ನನ್ನು ಉಡುಗೊರೆಯೊಂದಿಗೆ ಕಿಂಗ್ ಕೊಹ್ಲಿ ಬೀಳ್ಕೊಟ್ಟರು.

4 / 5
ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246	 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

ಬಾಂಗ್ಲಾದೇಶ್ ಪರ ಈವರೆಗೆ 71 ಟೆಸ್ಟ್ ಪಂದ್ಯಗಳನ್ನಾಡಿರುವ ಶಕೀಬ್ ಅಲ್ ಹಸನ್ ಒಟ್ಟು 4609 ರನ್ ಕಲೆಹಾಕಿದ್ದಾರೆ. ಹಾಗೆಯೇ 121 ಟೆಸ್ಟ್​ ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು 15675 ಎಸೆತಗಳಲ್ಲಿ 246 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದೀಗ ತಮ್ಮ 37ನೇ ವಯಸ್ಸಿನಲ್ಲಿ ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧ ತವರಿನಲ್ಲಿ ಕೊನೆಯ ಪಂದ್ಯವಾಡುವ ಮೂಲಕ ರೆಡ್ ಬಾಲ್ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!