AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಭರ್ಜರಿ ಗೆಲುವಿನ ಬಳಿಕ ಡುಪ್ಲೆಸಿಸ್ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಆಡಿದ ಮಾತುಗಳೇನು ಕೇಳಿ

PBKS vs RCB, IPL 2023: ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ ಪರ ವಿರಾಟ್ ಕೊಹ್ಲಿ (59) ಹಾಗೂ ಫಾಫ್ ಡುಪ್ಲೆಸಿಸ್ (84) ಶತಕದ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

Vinay Bhat
|

Updated on: Apr 21, 2023 | 8:56 AM

Share
ಐಪಿಎಲ್ 2023 ರಲ್ಲಿ ಗುರುವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 24 ರನ್​ಗಳ ಭರ್ಜರಿ ಜಯ ಸಾಧಿಸಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಆರ್​ಸಿಬಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿತು.

ಐಪಿಎಲ್ 2023 ರಲ್ಲಿ ಗುರುವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 24 ರನ್​ಗಳ ಭರ್ಜರಿ ಜಯ ಸಾಧಿಸಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಆರ್​ಸಿಬಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿತು.

1 / 9
ವಿರಾಟ್ ಕೊಹ್ಲಿ (59) ಹಾಗೂ ಫಾಫ್ ಡುಪ್ಲೆಸಿಸ್ (84) ಶತಕದ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು. ವನಿಂದು ಹಸರಂಗ 2 ವಿಕೆಟ್ ಪಡೆದರು.

ವಿರಾಟ್ ಕೊಹ್ಲಿ (59) ಹಾಗೂ ಫಾಫ್ ಡುಪ್ಲೆಸಿಸ್ (84) ಶತಕದ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು. ವನಿಂದು ಹಸರಂಗ 2 ವಿಕೆಟ್ ಪಡೆದರು.

2 / 9
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಕೊಹ್ಲಿ, ಫಾಫ್ ಆಟದ ಬಗ್ಗೆ ಹಾಡಿಹೊಗಳಿದ್ದಾರೆ.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಕೊಹ್ಲಿ, ಫಾಫ್ ಆಟದ ಬಗ್ಗೆ ಹಾಡಿಹೊಗಳಿದ್ದಾರೆ.

3 / 9
ಇಂತಹ ಕಠಿಣ ಪಿಚ್​ನಲ್ಲಿ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಬ್ಯಾಟಿಂಗ್ ನೆರವಿನಿಂದಲೇ ಅಂತಿಮ ಹಂತದಲ್ಲಿ ತಂಡ 20-30 ರನ್ ಹೆಚ್ಚು ಗಳಿಸಲು ಸಾಧ್ಯವಾಯಿತು ಎಂದು ಕೊಹ್ಲಿ ಹೇಳಿದ್ದಾರೆ.

ಇಂತಹ ಕಠಿಣ ಪಿಚ್​ನಲ್ಲಿ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಬ್ಯಾಟಿಂಗ್ ನೆರವಿನಿಂದಲೇ ಅಂತಿಮ ಹಂತದಲ್ಲಿ ತಂಡ 20-30 ರನ್ ಹೆಚ್ಚು ಗಳಿಸಲು ಸಾಧ್ಯವಾಯಿತು ಎಂದು ಕೊಹ್ಲಿ ಹೇಳಿದ್ದಾರೆ.

4 / 9
ಪಾಯಿಂಟ್ ಟೇಬಲ್ ನಮ್ಮ ತಂಡದ ಸ್ಥಿತಿಯನ್ನು ನಿರ್ಧರಿಸುವುದಿಲ್ಲ. ಇನ್ನೂ ಪಂದ್ಯಗಳಿವೆ. ನಾವು ಏನು ಯೋಜನೆ ಮಾಡಬೇಕು ಎಂಬ ಬಗ್ಗೆ ಯೋಚಿಸಬಹುದು. ಪಿಚ್ ಕೆಳಗೆ ತುಂಬಾ ಒರಟಾಗಿತ್ತು, ಅಲ್ಲಿ ಸಾಕಷ್ಟು ನೀರು ಇರಲಿಲ್ಲ. ಸ್ಪಿನ್ನರ್​ಗಳ ವಿರುದ್ಧ ಸಿಕ್ಸ್ ಸಿಡಿಸಲು ಆಗುತ್ತಿರಲಿಲ್ಲ-ವಿರಾಟ್ ಕೊಹ್ಲಿ.

ಪಾಯಿಂಟ್ ಟೇಬಲ್ ನಮ್ಮ ತಂಡದ ಸ್ಥಿತಿಯನ್ನು ನಿರ್ಧರಿಸುವುದಿಲ್ಲ. ಇನ್ನೂ ಪಂದ್ಯಗಳಿವೆ. ನಾವು ಏನು ಯೋಜನೆ ಮಾಡಬೇಕು ಎಂಬ ಬಗ್ಗೆ ಯೋಚಿಸಬಹುದು. ಪಿಚ್ ಕೆಳಗೆ ತುಂಬಾ ಒರಟಾಗಿತ್ತು, ಅಲ್ಲಿ ಸಾಕಷ್ಟು ನೀರು ಇರಲಿಲ್ಲ. ಸ್ಪಿನ್ನರ್​ಗಳ ವಿರುದ್ಧ ಸಿಕ್ಸ್ ಸಿಡಿಸಲು ಆಗುತ್ತಿರಲಿಲ್ಲ-ವಿರಾಟ್ ಕೊಹ್ಲಿ.

5 / 9
ಈ ಪಿಚ್​ನಲ್ಲಿ 190 ರನ್ ಗಳಿಸುವುದು ನಮ್ಮ ಪ್ಲಾನ್ ಆಗಿತ್ತು. ಟಾರ್ಗೆಟ್ ದೊಡ್ಡದು ಇರಲಿದೆ ಎಂದು ಬೌಲರ್​ಗಳ ಜೊತೆ ಮಾತನಾಡಿಕೊಂಡಿದ್ದೆವು. 6-7 ವಿಕೆಟ್ ಕಳೆದುಕೊಂಡಾಗ ಪಂದ್ಯ ಅಂತಿಮ ಹಂತದ ವರೆಗೆ ಹೋಗಲು ಸಾಧ್ಯವಿಲ್ಲ. ನಮ್ಮ ಬೌಲಿಂಗ್​ನಲ್ಲಿ ಸಾಕಷ್ಟು ಆಯ್ಕೆಗಳಿದ್ದವು ಎಂದು ಕೊಹ್ಲಿ ಹೇಳಿದ್ದಾರೆ.

ಈ ಪಿಚ್​ನಲ್ಲಿ 190 ರನ್ ಗಳಿಸುವುದು ನಮ್ಮ ಪ್ಲಾನ್ ಆಗಿತ್ತು. ಟಾರ್ಗೆಟ್ ದೊಡ್ಡದು ಇರಲಿದೆ ಎಂದು ಬೌಲರ್​ಗಳ ಜೊತೆ ಮಾತನಾಡಿಕೊಂಡಿದ್ದೆವು. 6-7 ವಿಕೆಟ್ ಕಳೆದುಕೊಂಡಾಗ ಪಂದ್ಯ ಅಂತಿಮ ಹಂತದ ವರೆಗೆ ಹೋಗಲು ಸಾಧ್ಯವಿಲ್ಲ. ನಮ್ಮ ಬೌಲಿಂಗ್​ನಲ್ಲಿ ಸಾಕಷ್ಟು ಆಯ್ಕೆಗಳಿದ್ದವು ಎಂದು ಕೊಹ್ಲಿ ಹೇಳಿದ್ದಾರೆ.

6 / 9
ಪಂದ್ಯ ಅರ್ಧವಾದಾಗ ಪಿಚ್ ಬ್ಯಾಟಿಂಗ್​ಗೆ ಹೆಚ್ಚು ಸಹಕರಿಸುತ್ತೆ ಎಂಬುದು ತಿಳಿದಿತ್ತು. ಹೀಗಾಗಿ ಪವರ್ ಪ್ಲೇನಲ್ಲಿ 4 ವಿಕೆಟ್ ಪಡೆಯುವುದು ನಮ್ಮ ಟಾರ್ಗೆಟ್ ಆಗಿತ್ತು ಎಂದು ವಿರಾಟ್ ಕೊಹ್ಲಿ ತಮ್ಮ ಗೇಮ್ ಪ್ಲಾನ್ ಬಗ್ಗೆ ವಿವರಿಸಿದರು.

ಪಂದ್ಯ ಅರ್ಧವಾದಾಗ ಪಿಚ್ ಬ್ಯಾಟಿಂಗ್​ಗೆ ಹೆಚ್ಚು ಸಹಕರಿಸುತ್ತೆ ಎಂಬುದು ತಿಳಿದಿತ್ತು. ಹೀಗಾಗಿ ಪವರ್ ಪ್ಲೇನಲ್ಲಿ 4 ವಿಕೆಟ್ ಪಡೆಯುವುದು ನಮ್ಮ ಟಾರ್ಗೆಟ್ ಆಗಿತ್ತು ಎಂದು ವಿರಾಟ್ ಕೊಹ್ಲಿ ತಮ್ಮ ಗೇಮ್ ಪ್ಲಾನ್ ಬಗ್ಗೆ ವಿವರಿಸಿದರು.

7 / 9
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಫಾಫ್ ಡುಪ್ಲೆಸಿಸ್ ಅವರ ಅಜೇಯ 84 ಮತ್ತು ವಿರಾಟ್ ಕೊಹ್ಲಿ ಅವರ 59 ರನ್​ಗಳ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು. ಹರ್ಪ್ರೀತ್ ಬ್ರಾರ್ 2 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಫಾಫ್ ಡುಪ್ಲೆಸಿಸ್ ಅವರ ಅಜೇಯ 84 ಮತ್ತು ವಿರಾಟ್ ಕೊಹ್ಲಿ ಅವರ 59 ರನ್​ಗಳ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು. ಹರ್ಪ್ರೀತ್ ಬ್ರಾರ್ 2 ವಿಕೆಟ್ ಪಡೆದರು.

8 / 9
ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಪ್ರಭ್​ಸಿಮ್ರಾನ್ ಸಿಂಗ್ 46 ಹಾಗೂ ಜಿತೇಶ್ ಶರ್ಮಾ 41 ರನ್ ಗಳಿಸಿದರು. ಪಂಜಾಬ್ 18.2 ಓವರ್​ನಲ್ಲಿ 150 ರನ್​ಗೆ ಆಲೌಟ್ ಆಯಿತು. ಆರ್​ಸಿಬಿ ಪರ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಪ್ರಭ್​ಸಿಮ್ರಾನ್ ಸಿಂಗ್ 46 ಹಾಗೂ ಜಿತೇಶ್ ಶರ್ಮಾ 41 ರನ್ ಗಳಿಸಿದರು. ಪಂಜಾಬ್ 18.2 ಓವರ್​ನಲ್ಲಿ 150 ರನ್​ಗೆ ಆಲೌಟ್ ಆಯಿತು. ಆರ್​ಸಿಬಿ ಪರ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

9 / 9
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!