AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಭರ್ಜರಿ ಗೆಲುವಿನ ಬಳಿಕ ಡುಪ್ಲೆಸಿಸ್ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಆಡಿದ ಮಾತುಗಳೇನು ಕೇಳಿ

PBKS vs RCB, IPL 2023: ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ ಪರ ವಿರಾಟ್ ಕೊಹ್ಲಿ (59) ಹಾಗೂ ಫಾಫ್ ಡುಪ್ಲೆಸಿಸ್ (84) ಶತಕದ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

Vinay Bhat
|

Updated on: Apr 21, 2023 | 8:56 AM

ಐಪಿಎಲ್ 2023 ರಲ್ಲಿ ಗುರುವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 24 ರನ್​ಗಳ ಭರ್ಜರಿ ಜಯ ಸಾಧಿಸಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಆರ್​ಸಿಬಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿತು.

ಐಪಿಎಲ್ 2023 ರಲ್ಲಿ ಗುರುವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 24 ರನ್​ಗಳ ಭರ್ಜರಿ ಜಯ ಸಾಧಿಸಿತು. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೀಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮ್ಯಾಚ್​ನಲ್ಲಿ ಆರ್​ಸಿಬಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಅಮೋಘ ಪ್ರದರ್ಶನ ತೋರಿತು.

1 / 9
ವಿರಾಟ್ ಕೊಹ್ಲಿ (59) ಹಾಗೂ ಫಾಫ್ ಡುಪ್ಲೆಸಿಸ್ (84) ಶತಕದ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು. ವನಿಂದು ಹಸರಂಗ 2 ವಿಕೆಟ್ ಪಡೆದರು.

ವಿರಾಟ್ ಕೊಹ್ಲಿ (59) ಹಾಗೂ ಫಾಫ್ ಡುಪ್ಲೆಸಿಸ್ (84) ಶತಕದ ಜೊತೆಯಾಟ ಆಡಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ಬೌಲಿಂಗ್​ನಲ್ಲಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು. ವನಿಂದು ಹಸರಂಗ 2 ವಿಕೆಟ್ ಪಡೆದರು.

2 / 9
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಕೊಹ್ಲಿ, ಫಾಫ್ ಆಟದ ಬಗ್ಗೆ ಹಾಡಿಹೊಗಳಿದ್ದಾರೆ.

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಕೊಹ್ಲಿ, ಫಾಫ್ ಆಟದ ಬಗ್ಗೆ ಹಾಡಿಹೊಗಳಿದ್ದಾರೆ.

3 / 9
ಇಂತಹ ಕಠಿಣ ಪಿಚ್​ನಲ್ಲಿ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಬ್ಯಾಟಿಂಗ್ ನೆರವಿನಿಂದಲೇ ಅಂತಿಮ ಹಂತದಲ್ಲಿ ತಂಡ 20-30 ರನ್ ಹೆಚ್ಚು ಗಳಿಸಲು ಸಾಧ್ಯವಾಯಿತು ಎಂದು ಕೊಹ್ಲಿ ಹೇಳಿದ್ದಾರೆ.

ಇಂತಹ ಕಠಿಣ ಪಿಚ್​ನಲ್ಲಿ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಬ್ಯಾಟಿಂಗ್ ನೆರವಿನಿಂದಲೇ ಅಂತಿಮ ಹಂತದಲ್ಲಿ ತಂಡ 20-30 ರನ್ ಹೆಚ್ಚು ಗಳಿಸಲು ಸಾಧ್ಯವಾಯಿತು ಎಂದು ಕೊಹ್ಲಿ ಹೇಳಿದ್ದಾರೆ.

4 / 9
ಪಾಯಿಂಟ್ ಟೇಬಲ್ ನಮ್ಮ ತಂಡದ ಸ್ಥಿತಿಯನ್ನು ನಿರ್ಧರಿಸುವುದಿಲ್ಲ. ಇನ್ನೂ ಪಂದ್ಯಗಳಿವೆ. ನಾವು ಏನು ಯೋಜನೆ ಮಾಡಬೇಕು ಎಂಬ ಬಗ್ಗೆ ಯೋಚಿಸಬಹುದು. ಪಿಚ್ ಕೆಳಗೆ ತುಂಬಾ ಒರಟಾಗಿತ್ತು, ಅಲ್ಲಿ ಸಾಕಷ್ಟು ನೀರು ಇರಲಿಲ್ಲ. ಸ್ಪಿನ್ನರ್​ಗಳ ವಿರುದ್ಧ ಸಿಕ್ಸ್ ಸಿಡಿಸಲು ಆಗುತ್ತಿರಲಿಲ್ಲ-ವಿರಾಟ್ ಕೊಹ್ಲಿ.

ಪಾಯಿಂಟ್ ಟೇಬಲ್ ನಮ್ಮ ತಂಡದ ಸ್ಥಿತಿಯನ್ನು ನಿರ್ಧರಿಸುವುದಿಲ್ಲ. ಇನ್ನೂ ಪಂದ್ಯಗಳಿವೆ. ನಾವು ಏನು ಯೋಜನೆ ಮಾಡಬೇಕು ಎಂಬ ಬಗ್ಗೆ ಯೋಚಿಸಬಹುದು. ಪಿಚ್ ಕೆಳಗೆ ತುಂಬಾ ಒರಟಾಗಿತ್ತು, ಅಲ್ಲಿ ಸಾಕಷ್ಟು ನೀರು ಇರಲಿಲ್ಲ. ಸ್ಪಿನ್ನರ್​ಗಳ ವಿರುದ್ಧ ಸಿಕ್ಸ್ ಸಿಡಿಸಲು ಆಗುತ್ತಿರಲಿಲ್ಲ-ವಿರಾಟ್ ಕೊಹ್ಲಿ.

5 / 9
ಈ ಪಿಚ್​ನಲ್ಲಿ 190 ರನ್ ಗಳಿಸುವುದು ನಮ್ಮ ಪ್ಲಾನ್ ಆಗಿತ್ತು. ಟಾರ್ಗೆಟ್ ದೊಡ್ಡದು ಇರಲಿದೆ ಎಂದು ಬೌಲರ್​ಗಳ ಜೊತೆ ಮಾತನಾಡಿಕೊಂಡಿದ್ದೆವು. 6-7 ವಿಕೆಟ್ ಕಳೆದುಕೊಂಡಾಗ ಪಂದ್ಯ ಅಂತಿಮ ಹಂತದ ವರೆಗೆ ಹೋಗಲು ಸಾಧ್ಯವಿಲ್ಲ. ನಮ್ಮ ಬೌಲಿಂಗ್​ನಲ್ಲಿ ಸಾಕಷ್ಟು ಆಯ್ಕೆಗಳಿದ್ದವು ಎಂದು ಕೊಹ್ಲಿ ಹೇಳಿದ್ದಾರೆ.

ಈ ಪಿಚ್​ನಲ್ಲಿ 190 ರನ್ ಗಳಿಸುವುದು ನಮ್ಮ ಪ್ಲಾನ್ ಆಗಿತ್ತು. ಟಾರ್ಗೆಟ್ ದೊಡ್ಡದು ಇರಲಿದೆ ಎಂದು ಬೌಲರ್​ಗಳ ಜೊತೆ ಮಾತನಾಡಿಕೊಂಡಿದ್ದೆವು. 6-7 ವಿಕೆಟ್ ಕಳೆದುಕೊಂಡಾಗ ಪಂದ್ಯ ಅಂತಿಮ ಹಂತದ ವರೆಗೆ ಹೋಗಲು ಸಾಧ್ಯವಿಲ್ಲ. ನಮ್ಮ ಬೌಲಿಂಗ್​ನಲ್ಲಿ ಸಾಕಷ್ಟು ಆಯ್ಕೆಗಳಿದ್ದವು ಎಂದು ಕೊಹ್ಲಿ ಹೇಳಿದ್ದಾರೆ.

6 / 9
ಪಂದ್ಯ ಅರ್ಧವಾದಾಗ ಪಿಚ್ ಬ್ಯಾಟಿಂಗ್​ಗೆ ಹೆಚ್ಚು ಸಹಕರಿಸುತ್ತೆ ಎಂಬುದು ತಿಳಿದಿತ್ತು. ಹೀಗಾಗಿ ಪವರ್ ಪ್ಲೇನಲ್ಲಿ 4 ವಿಕೆಟ್ ಪಡೆಯುವುದು ನಮ್ಮ ಟಾರ್ಗೆಟ್ ಆಗಿತ್ತು ಎಂದು ವಿರಾಟ್ ಕೊಹ್ಲಿ ತಮ್ಮ ಗೇಮ್ ಪ್ಲಾನ್ ಬಗ್ಗೆ ವಿವರಿಸಿದರು.

ಪಂದ್ಯ ಅರ್ಧವಾದಾಗ ಪಿಚ್ ಬ್ಯಾಟಿಂಗ್​ಗೆ ಹೆಚ್ಚು ಸಹಕರಿಸುತ್ತೆ ಎಂಬುದು ತಿಳಿದಿತ್ತು. ಹೀಗಾಗಿ ಪವರ್ ಪ್ಲೇನಲ್ಲಿ 4 ವಿಕೆಟ್ ಪಡೆಯುವುದು ನಮ್ಮ ಟಾರ್ಗೆಟ್ ಆಗಿತ್ತು ಎಂದು ವಿರಾಟ್ ಕೊಹ್ಲಿ ತಮ್ಮ ಗೇಮ್ ಪ್ಲಾನ್ ಬಗ್ಗೆ ವಿವರಿಸಿದರು.

7 / 9
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಫಾಫ್ ಡುಪ್ಲೆಸಿಸ್ ಅವರ ಅಜೇಯ 84 ಮತ್ತು ವಿರಾಟ್ ಕೊಹ್ಲಿ ಅವರ 59 ರನ್​ಗಳ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು. ಹರ್ಪ್ರೀತ್ ಬ್ರಾರ್ 2 ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಫಾಫ್ ಡುಪ್ಲೆಸಿಸ್ ಅವರ ಅಜೇಯ 84 ಮತ್ತು ವಿರಾಟ್ ಕೊಹ್ಲಿ ಅವರ 59 ರನ್​ಗಳ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿತು. ಹರ್ಪ್ರೀತ್ ಬ್ರಾರ್ 2 ವಿಕೆಟ್ ಪಡೆದರು.

8 / 9
ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಪ್ರಭ್​ಸಿಮ್ರಾನ್ ಸಿಂಗ್ 46 ಹಾಗೂ ಜಿತೇಶ್ ಶರ್ಮಾ 41 ರನ್ ಗಳಿಸಿದರು. ಪಂಜಾಬ್ 18.2 ಓವರ್​ನಲ್ಲಿ 150 ರನ್​ಗೆ ಆಲೌಟ್ ಆಯಿತು. ಆರ್​ಸಿಬಿ ಪರ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

ಟಾರ್ಗೆಟ್ ಬೆನ್ನಟ್ಟಿದ ಪಂಜಾಬ್ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ತಂಡದ ಪರ ಪ್ರಭ್​ಸಿಮ್ರಾನ್ ಸಿಂಗ್ 46 ಹಾಗೂ ಜಿತೇಶ್ ಶರ್ಮಾ 41 ರನ್ ಗಳಿಸಿದರು. ಪಂಜಾಬ್ 18.2 ಓವರ್​ನಲ್ಲಿ 150 ರನ್​ಗೆ ಆಲೌಟ್ ಆಯಿತು. ಆರ್​ಸಿಬಿ ಪರ ಸಿರಾಜ್ 4 ವಿಕೆಟ್ ಕಿತ್ತು ಮಿಂಚಿದರು.

9 / 9
Follow us
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ