Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಮ್ ಇಂಡಿಯಾಗೆ ಬಿಗ್ ಶಾಕ್: ವಿರಾಟ್ ಕೊಹ್ಲಿಗೆ ಗಾಯ

India vs Pakistan: ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಗಾಯಗೊಂಡಿದ್ದು, ಹೀಗಾಗಿ ಪಾಕ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 23, 2025 | 10:44 AM

ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗಾಯಗೊಂಡಿದ್ದಾರೆ. ಶನಿವಾರ ನಡೆದ ಅಭ್ಯಾಸದ ವೇಳೆ ಕೊಹ್ಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸವನ್ನು ನಿಲ್ಲಿಸಿದ್ದರು. ಇದಾಗ್ಯೂ ಅವರ ಗಾಯದ ಗಂಭೀರತೆ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ.

ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಗಾಯಗೊಂಡಿದ್ದಾರೆ. ಶನಿವಾರ ನಡೆದ ಅಭ್ಯಾಸದ ವೇಳೆ ಕೊಹ್ಲಿಗೆ ಗಾಯವಾಗಿದ್ದು, ಹೀಗಾಗಿ ಅವರು ಅರ್ಧದಲ್ಲೇ ಅಭ್ಯಾಸವನ್ನು ನಿಲ್ಲಿಸಿದ್ದರು. ಇದಾಗ್ಯೂ ಅವರ ಗಾಯದ ಗಂಭೀರತೆ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ.

1 / 5
ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಶನಿವಾರ ನಡೆದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮೈದಾನದಿಂದ ಹೊರಗುಳಿದಿದ್ದರು. ಅಲ್ಲದೆ ಎಡಗೈ ಕಾಲಿಗೆ ಐಸ್ ಪ್ಯಾಕ್ ಇಟ್ಟು ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ.

ದುಬೈ ಇಂಟರ್​ನ್ಯಾಷನಲ್ ಮೈದಾನದಲ್ಲಿ ಶನಿವಾರ ನಡೆದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಮೈದಾನದಿಂದ ಹೊರಗುಳಿದಿದ್ದರು. ಅಲ್ಲದೆ ಎಡಗೈ ಕಾಲಿಗೆ ಐಸ್ ಪ್ಯಾಕ್ ಇಟ್ಟು ವಿಶ್ರಾಂತಿ ಪಡೆಯುತ್ತಿರುವ ಫೋಟೋಗಳು ಇದೀಗ ವೈರಲ್ ಆಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ.

2 / 5
ಏಕೆಂದರೆ ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಅವರು ಆ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋದಲ್ಲೂ ಕೊಹ್ಲಿ ಮೊಣಕಾಲಿಗೆ ಐಸ್ ಪ್ಯಾಕ್ ಇಟ್ಟಿರುವುದು ಕಾಣಬಹುದು.

ಏಕೆಂದರೆ ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಅವರ ಮೊಣಕಾಲಿಗೆ ಗಾಯವಾಗಿತ್ತು. ಹೀಗಾಗಿ ಅವರು ಆ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋದಲ್ಲೂ ಕೊಹ್ಲಿ ಮೊಣಕಾಲಿಗೆ ಐಸ್ ಪ್ಯಾಕ್ ಇಟ್ಟಿರುವುದು ಕಾಣಬಹುದು.

3 / 5
ಹೀಗಾಗಿಯೇ ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇತ್ತ ಕೊಹ್ಲಿಯ ಲಭ್ಯತೆ ಅಥವಾ ಅಲಭ್ಯತೆ ಬಗ್ಗೆ ಬಿಸಿಸಿಐ ಕಡೆಯಿಂದಲೂ ಯಾವುದೇ ಸ್ಪಷ್ಟನೆ ಹೊರಬಿದ್ದಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಇವತ್ತು ಆಡುತ್ತಾರಾ ಅಥವಾ ಇಲ್ಲವಾ ಎಂಬುದನ್ನು ತಿಳಿಯಲು ಟಾಸ್ ಪ್ರಕ್ರಿಯೆಯವರೆಗೂ ಕಾಯಲೇಬೇಕು.

ಹೀಗಾಗಿಯೇ ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದಿಲ್ಲವಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇತ್ತ ಕೊಹ್ಲಿಯ ಲಭ್ಯತೆ ಅಥವಾ ಅಲಭ್ಯತೆ ಬಗ್ಗೆ ಬಿಸಿಸಿಐ ಕಡೆಯಿಂದಲೂ ಯಾವುದೇ ಸ್ಪಷ್ಟನೆ ಹೊರಬಿದ್ದಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಇವತ್ತು ಆಡುತ್ತಾರಾ ಅಥವಾ ಇಲ್ಲವಾ ಎಂಬುದನ್ನು ತಿಳಿಯಲು ಟಾಸ್ ಪ್ರಕ್ರಿಯೆಯವರೆಗೂ ಕಾಯಲೇಬೇಕು.

4 / 5
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಇಂದು (ಫೆ.23) ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಈ ಪಂದ್ಯದಲ್ಲಿ ಪಾಕ್ ಪಡೆ ಸೋತರೆ ಸೆಮಿಫೈನಲ್ ಆಸೆ ಕ್ಷೀಣಿಸಲಿದೆ.

ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಈ ಹೈವೋಲ್ಟೇಜ್ ಪಂದ್ಯವು ಇಂದು (ಫೆ.23) ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಈ ಪಂದ್ಯದಲ್ಲಿ ಪಾಕ್ ಪಡೆ ಸೋತರೆ ಸೆಮಿಫೈನಲ್ ಆಸೆ ಕ್ಷೀಣಿಸಲಿದೆ.

5 / 5
Follow us
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು