Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿರಾಟ್ ಕೊಹ್ಲಿ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ಬ್ಯಾಟಿಂಗ್ ಕೋಚ್

Virat Kohli Injury Update: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಮೊದಲ ಪಂದ್ಯವನ್ನು ತಪ್ಪಿಸಿಕೊಂಡ ಕೊಹ್ಲಿ, ಎರಡನೇ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಇದರಿಂದ ಭಾರತ ತಂಡಕ್ಕೆ ಬಲ ಬಂದಿದೆ. ಕೊಹ್ಲಿಯ ಆಗಮನದಿಂದ ಆಡುವ ಹನ್ನೊಂದರಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇದು ಭಾರತಕ್ಕೆ ಮಹತ್ವದ ಪಂದ್ಯ.

ಪೃಥ್ವಿಶಂಕರ
|

Updated on:Feb 08, 2025 | 6:26 PM

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಭರ್ಜರಿ ಆರಂಭ ಮಾಡಿದೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 4 ವಿಕೆಟ್‌ಗಳ ಜಯ ಸಾಧಿಸಿತು. ಈ ಗೆಲುವಿನ ಹೊರತಾಗಿಯೂ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಗಾಯದಿಂದಾಗಿ ಈ ಪಂದ್ಯವನ್ನು ಆಡಿರಲಿಲ್ಲ. ಈಗ ಸರಣಿಯ ಎರಡನೇ ಪಂದ್ಯ ಫೆಬ್ರವರಿ 9 ರ ಭಾನುವಾರದಂದು ನಡೆಯಲಿದ್ದು, ಕೊಹ್ಲಿ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಭರ್ಜರಿ ಆರಂಭ ಮಾಡಿದೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 4 ವಿಕೆಟ್‌ಗಳ ಜಯ ಸಾಧಿಸಿತು. ಈ ಗೆಲುವಿನ ಹೊರತಾಗಿಯೂ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಗಾಯದಿಂದಾಗಿ ಈ ಪಂದ್ಯವನ್ನು ಆಡಿರಲಿಲ್ಲ. ಈಗ ಸರಣಿಯ ಎರಡನೇ ಪಂದ್ಯ ಫೆಬ್ರವರಿ 9 ರ ಭಾನುವಾರದಂದು ನಡೆಯಲಿದ್ದು, ಕೊಹ್ಲಿ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ಹೊರಬಿದ್ದಿದೆ.

1 / 6
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ಒಡಿಶಾದ ಕಟಕ್‌ನಲ್ಲಿ ನಡೆಯಲಿದೆ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಸ್ವಲ್ಪ ದಿನ ಬಾಕಿ ಉಳಿದಿರುವಾಗ ಕೊಹ್ಲಿ ಗಾಯಗೊಂಡಿದ್ದು, ಎಲ್ಲರಲ್ಲೂ ಕಳವಳವನ್ನು ಹುಟ್ಟುಹಾಕಿತ್ತು, ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶುಭ ಸುದ್ದಿ ಸಿಕ್ಕಿದ್ದು, ಕೊಹ್ಲಿ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ಒಡಿಶಾದ ಕಟಕ್‌ನಲ್ಲಿ ನಡೆಯಲಿದೆ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಸ್ವಲ್ಪ ದಿನ ಬಾಕಿ ಉಳಿದಿರುವಾಗ ಕೊಹ್ಲಿ ಗಾಯಗೊಂಡಿದ್ದು, ಎಲ್ಲರಲ್ಲೂ ಕಳವಳವನ್ನು ಹುಟ್ಟುಹಾಕಿತ್ತು, ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಶುಭ ಸುದ್ದಿ ಸಿಕ್ಕಿದ್ದು, ಕೊಹ್ಲಿ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ.

2 / 6
 ಎರಡನೇ ಏಕದಿನ ಪಂದ್ಯದ ಒಂದು ದಿನ ಮೊದಲು ವಿರಾಟ್ ಅವರ ಫಿಟ್ನೆಸ್ ಕುರಿತು ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ತಂಡದ ಬ್ಯಾಟಿಂಗ್ ಕೋಚ್ ಸಿತಾಶು ಕೊಟಕ್, ‘ವಿರಾಟ್ ಈಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಎರಡನೇ ಪಂದ್ಯಕ್ಕೆ ಲಭ್ಯವಿದ್ದಾರೆ ಎಂದು ಕೋಚ್ ಹೇಳಿದ್ದಾರೆ. ಇದರರ್ಥ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಆಡುವ ಹನ್ನೊಂದರ ಬಳಗಕ್ಕೆ ಮರಳುವುದು ಈಗ ಖಚಿತವಾಗಿದೆ.

ಎರಡನೇ ಏಕದಿನ ಪಂದ್ಯದ ಒಂದು ದಿನ ಮೊದಲು ವಿರಾಟ್ ಅವರ ಫಿಟ್ನೆಸ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಂಡದ ಬ್ಯಾಟಿಂಗ್ ಕೋಚ್ ಸಿತಾಶು ಕೊಟಕ್, ‘ವಿರಾಟ್ ಈಗ ಸಂಪೂರ್ಣವಾಗಿ ಫಿಟ್ ಆಗಿದ್ದು, ಎರಡನೇ ಪಂದ್ಯಕ್ಕೆ ಲಭ್ಯವಿದ್ದಾರೆ ಎಂದು ಕೋಚ್ ಹೇಳಿದ್ದಾರೆ. ಇದರರ್ಥ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಆಡುವ ಹನ್ನೊಂದರ ಬಳಗಕ್ಕೆ ಮರಳುವುದು ಈಗ ಖಚಿತವಾಗಿದೆ.

3 / 6
ಈ ಪಂದ್ಯದೊಂದಿಗೆ, ವಿರಾಟ್ ಆಗಸ್ಟ್ 2024 ರ ನಂತರ ಮೊದಲ ಬಾರಿಗೆ ಏಕದಿನ ಸ್ವರೂಪದಲ್ಲಿ ಆಡುವುದನ್ನು ಕಾಣಬಹುದು. ಅಲ್ಲದೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ತಯಾರಿ ನಡೆಸಲು ಸರಣಿಯಲ್ಲಿ ಉಳಿದಿರುವ ಎರಡು ಪಂದ್ಯಗಳು ಬಹಳ ಮುಖ್ಯವಾಗಿವೆ.

ಈ ಪಂದ್ಯದೊಂದಿಗೆ, ವಿರಾಟ್ ಆಗಸ್ಟ್ 2024 ರ ನಂತರ ಮೊದಲ ಬಾರಿಗೆ ಏಕದಿನ ಸ್ವರೂಪದಲ್ಲಿ ಆಡುವುದನ್ನು ಕಾಣಬಹುದು. ಅಲ್ಲದೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ತಯಾರಿ ನಡೆಸಲು ಸರಣಿಯಲ್ಲಿ ಉಳಿದಿರುವ ಎರಡು ಪಂದ್ಯಗಳು ಬಹಳ ಮುಖ್ಯವಾಗಿವೆ.

4 / 6
ಇದೀಗ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ಆಡುವ ಹನ್ನೊಂದರ ಬಳಗದಿಂದ ಯಾರನ್ನು ಕೈಬಿಡಲಾಗುತ್ತದೆ ಎಂಬ ದೊಡ್ಡ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಏನನ್ನೂ ಬಹಿರಂಗಪಡಿಸದ ಕೊಟಕ್, ಈ ನಿರ್ಧಾರವನ್ನು ಕೋಚ್ ಮತ್ತು ನಾಯಕ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇದೀಗ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ಆಡುವ ಹನ್ನೊಂದರ ಬಳಗದಿಂದ ಯಾರನ್ನು ಕೈಬಿಡಲಾಗುತ್ತದೆ ಎಂಬ ದೊಡ್ಡ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಏನನ್ನೂ ಬಹಿರಂಗಪಡಿಸದ ಕೊಟಕ್, ಈ ನಿರ್ಧಾರವನ್ನು ಕೋಚ್ ಮತ್ತು ನಾಯಕ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

5 / 6
ಕಳೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​ಗೆ ಚೊಚ್ಚಲ ಏಕದಿನ ಪಂದ್ಯವನ್ನಾಡುವ ಅವಕಾಶ ಸಿಕ್ಕಿತ್ತು. ಆದರೆ ಮೊದಲ ಏಕದಿನ ಪಂದ್ಯದಲ್ಲಿ ಜೈಸ್ವಾಲ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ಎರಡನೇ ಏಕದಿನ ಪಂದ್ಯದಿಂದ ಕೈಬಿಟ್ಟು ಕೊಹ್ಲಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಕೊಹ್ಲಿ ಆಗಮನದಿಂದಾಗಿ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಕಳೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್​ಗೆ ಚೊಚ್ಚಲ ಏಕದಿನ ಪಂದ್ಯವನ್ನಾಡುವ ಅವಕಾಶ ಸಿಕ್ಕಿತ್ತು. ಆದರೆ ಮೊದಲ ಏಕದಿನ ಪಂದ್ಯದಲ್ಲಿ ಜೈಸ್ವಾಲ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರನ್ನು ಎರಡನೇ ಏಕದಿನ ಪಂದ್ಯದಿಂದ ಕೈಬಿಟ್ಟು ಕೊಹ್ಲಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಕೊಹ್ಲಿ ಆಗಮನದಿಂದಾಗಿ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

6 / 6

Published On - 6:26 pm, Sat, 8 February 25

Follow us
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!