AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಆಸ್ಟ್ರೇಲಿಯಾ ಪಿಚ್​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli's Record: ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು.

TV9 Web
| Edited By: |

Updated on:Oct 24, 2022 | 7:56 PM

Share
ಆಸ್ಟ್ರೇಲಿಯಾದ ಎಂಸಿಜಿ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್​ ಮೂಲಕ ಕಿಂಗ್ ಕೊಹ್ಲಿ ಟೀಮ್ ಇಂಡಿಯಾಗೆ 4 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟಿದ್ದರು.

ಆಸ್ಟ್ರೇಲಿಯಾದ ಎಂಸಿಜಿ ಮೈದಾನದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 82 ರನ್ ಬಾರಿಸಿದ್ದರು. ಈ ಭರ್ಜರಿ ಇನಿಂಗ್ಸ್​ ಮೂಲಕ ಕಿಂಗ್ ಕೊಹ್ಲಿ ಟೀಮ್ ಇಂಡಿಯಾಗೆ 4 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟಿದ್ದರು.

1 / 5
ವಿಶೇಷ ಎಂದರೆ ಈ ಅಮೋಘ ಇನಿಂಗ್ಸ್ ಮೂಲಕ ಆಸ್ಟ್ರೇಲಿಯಾದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಕಾಂಗರೂ ನಾಡಿನಲ್ಲಿ ಯಾವುದೇ ವಿದೇಶಿ ಬ್ಯಾಟ್ಸ್​ಮನ್ ಟಿ20 ಕ್ರಿಕೆಟ್​ನಲ್ಲಿ 500 ಕ್ಕೂ ಅಧಿಕ ಕಲೆಹಾಕಲು ಸಾಧ್ಯವಾಗಿರಲಿಲ್ಲ.

ವಿಶೇಷ ಎಂದರೆ ಈ ಅಮೋಘ ಇನಿಂಗ್ಸ್ ಮೂಲಕ ಆಸ್ಟ್ರೇಲಿಯಾದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಅಂದರೆ ಕಾಂಗರೂ ನಾಡಿನಲ್ಲಿ ಯಾವುದೇ ವಿದೇಶಿ ಬ್ಯಾಟ್ಸ್​ಮನ್ ಟಿ20 ಕ್ರಿಕೆಟ್​ನಲ್ಲಿ 500 ಕ್ಕೂ ಅಧಿಕ ಕಲೆಹಾಕಲು ಸಾಧ್ಯವಾಗಿರಲಿಲ್ಲ.

2 / 5
ಇದೀಗ ಆಸ್ಟ್ರೇಲಿಯಾ ಪಿಚ್​ಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ 500+ ರನ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯನ್ನರು ಹೊರತುಪಡಿಸಿ ಕಾಂಗರೂ ನಾಡಿನಲ್ಲಿ ರನ್​ ಸುರಿಮಳೆಗೈದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಆಸ್ಟ್ರೇಲಿಯಾ ಪಿಚ್​ಗಳಲ್ಲಿ ಟಿ20 ಕ್ರಿಕೆಟ್​ನಲ್ಲಿ 500+ ರನ್​ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಆಸ್ಟ್ರೇಲಿಯನ್ನರು ಹೊರತುಪಡಿಸಿ ಕಾಂಗರೂ ನಾಡಿನಲ್ಲಿ ರನ್​ ಸುರಿಮಳೆಗೈದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.

3 / 5
ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು. ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್​ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಪಾಕಿಸ್ತಾನ ವಿರುದ್ಧದ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ದಾಖಲೆ ಬರೆದರು. ಈ ಹಿಂದೆ ಈ ದಾಖಲೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (3741) ಅವರ ಹೆಸರಿನಲ್ಲಿತ್ತು. ಇದೀಗ ವಿರಾಟ್ ಕೊಹ್ಲಿ 3794 ರನ್​ಗಳಿಸುವ ಮೂಲಕ ನಂಬರ್ 1 ಸ್ಥಾನಕ್ಕೇರಿದ್ದಾರೆ.

4 / 5
ಹಾಗೆಯೇ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹಾಗೆಯೇ ಐಸಿಸಿ ಟೂರ್ನಿಗಳಲ್ಲಿ ಅತ್ಯಧಿಕ 50+ ರನ್​ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ ಐಸಿಸಿ ಟೂರ್ನಿಗಳಲ್ಲಿ ಒಟ್ಟು 23 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ. ಇದೀಗ ಕಿಂಗ್ ಕೊಹ್ಲಿ ಐಸಿಸಿ ಟೂರ್ನಿಯಲ್ಲಿ ಒಟ್ಟು 24 ಬಾರಿ 50+ ಸ್ಕೋರ್ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5

Published On - 7:53 pm, Mon, 24 October 22

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ