AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಯೇ ನಮ್ಮ ತಂಡದ ಲೀಡರ್ ಎಂದ ರೋಹಿತ್ ಶರ್ಮಾ

Virat Kohli-Rohit Sharma: ದಕ್ಷಿಣ ಆಫ್ರಿಕಾ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಆರಂಭದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್​ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Dec 09, 2021 | 5:55 PM

Share
ಟೀಮ್ ಇಂಡಿಯಾದ ಸೀಮಿತ ಓವರ್​ಗಳ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಟಿ20 ತಂಡದ ನಾಯಕತ್ವ ಹೊಂದಿದ್ದ ಹಿಟ್​ಮ್ಯಾನ್​ಗೆ ಇದೀಗ ಏಕದಿನ ತಂಡದ ಸಾರಥ್ಯವನ್ನೂ ಕೂಡ ನೀಡಲಾಗಿದೆ. ಅತ್ತ ವಿರಾಟ್ ಕೊಹ್ಲಿ ಅವರು ಇನ್ಮುಂದೆ ಟೆಸ್ಟ್​ ತಂಡದ ನಾಯಕನಾಗಿ ಮಾತ್ರ ಮುಂದುವರೆಯಲಿದ್ದಾರೆ.

ಟೀಮ್ ಇಂಡಿಯಾದ ಸೀಮಿತ ಓವರ್​ಗಳ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಟಿ20 ತಂಡದ ನಾಯಕತ್ವ ಹೊಂದಿದ್ದ ಹಿಟ್​ಮ್ಯಾನ್​ಗೆ ಇದೀಗ ಏಕದಿನ ತಂಡದ ಸಾರಥ್ಯವನ್ನೂ ಕೂಡ ನೀಡಲಾಗಿದೆ. ಅತ್ತ ವಿರಾಟ್ ಕೊಹ್ಲಿ ಅವರು ಇನ್ಮುಂದೆ ಟೆಸ್ಟ್​ ತಂಡದ ನಾಯಕನಾಗಿ ಮಾತ್ರ ಮುಂದುವರೆಯಲಿದ್ದಾರೆ.

1 / 6
95 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 65 ವಿಜಯಗಳನ್ನು ತಂದುಕೊಟ್ಟಿದ್ದರು. ಅಂದರೆ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆಲುವಿನ ಶೇಕಡಾವಾರು  70.43 ರಷ್ಟಿದೆ. ಇದಾಗ್ಯೂ ಇದೀಗ ರೋಹಿತ್ ಶರ್ಮಾ ಅವರಿಗೆ ಏಕದಿನ ತಂಡದ ನಾಯಕತ್ವವನ್ನೂ ಕೂಡ ನೀಡಲಾಗಿದೆ.

95 ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 65 ವಿಜಯಗಳನ್ನು ತಂದುಕೊಟ್ಟಿದ್ದರು. ಅಂದರೆ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆಲುವಿನ ಶೇಕಡಾವಾರು 70.43 ರಷ್ಟಿದೆ. ಇದಾಗ್ಯೂ ಇದೀಗ ರೋಹಿತ್ ಶರ್ಮಾ ಅವರಿಗೆ ಏಕದಿನ ತಂಡದ ನಾಯಕತ್ವವನ್ನೂ ಕೂಡ ನೀಡಲಾಗಿದೆ.

2 / 6
 ವೈಟ್​ ಬಾಲ್ ಕ್ರಿಕೆಟ್​ ತಂಡದ ಕಪ್ತಾನನ ಸ್ಥಾನ ಅಲಂಕರಿಸಿದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಈಗಲೂ ವಿರಾಟ್ ಕೊಹ್ಲಿಯೇ ನಮ್ಮ ತಂಡದ ಲೀಡರ್ ಎಂದಿರುವುದು ವಿಶೇಷ. ಒಬ್ಬ ಬ್ಯಾಟರ್ ಆಗಿ ತಂಡದಲ್ಲಿ ಕೊಹ್ಲಿಯ ಉಪಸ್ಥಿತಿ ತುಂಬಾ ಅವಶ್ಯಕ. ಟಿ20 ಕ್ರಿಕೆಟ್​ನಲ್ಲಿ ಅವರು 50+ ಸರಾಸರಿ ಹೊಂದಿದ್ದಾರೆ. ಅದು ಅಂದುಕೊಂಡಷ್ಟು ಸುಲಭವಲ್ಲ. ಅವರ ಅನುಭವ ಮತ್ತು ಬ್ಯಾಟಿಂಗ್ ತಂಡಕ್ಕೆ ಅತ್ಯಗತ್ಯ ಎಂದು ಹಿಟ್​ಮ್ಯಾನ್ ತಿಳಿಸಿದರು.

ವೈಟ್​ ಬಾಲ್ ಕ್ರಿಕೆಟ್​ ತಂಡದ ಕಪ್ತಾನನ ಸ್ಥಾನ ಅಲಂಕರಿಸಿದ ಬಳಿಕ ಮಾತನಾಡಿದ ರೋಹಿತ್ ಶರ್ಮಾ, ಈಗಲೂ ವಿರಾಟ್ ಕೊಹ್ಲಿಯೇ ನಮ್ಮ ತಂಡದ ಲೀಡರ್ ಎಂದಿರುವುದು ವಿಶೇಷ. ಒಬ್ಬ ಬ್ಯಾಟರ್ ಆಗಿ ತಂಡದಲ್ಲಿ ಕೊಹ್ಲಿಯ ಉಪಸ್ಥಿತಿ ತುಂಬಾ ಅವಶ್ಯಕ. ಟಿ20 ಕ್ರಿಕೆಟ್​ನಲ್ಲಿ ಅವರು 50+ ಸರಾಸರಿ ಹೊಂದಿದ್ದಾರೆ. ಅದು ಅಂದುಕೊಂಡಷ್ಟು ಸುಲಭವಲ್ಲ. ಅವರ ಅನುಭವ ಮತ್ತು ಬ್ಯಾಟಿಂಗ್ ತಂಡಕ್ಕೆ ಅತ್ಯಗತ್ಯ ಎಂದು ಹಿಟ್​ಮ್ಯಾನ್ ತಿಳಿಸಿದರು.

3 / 6
ಎಲ್ಲಾ ರೀತಿಯಲ್ಲೂ ವಿರಾಟ್ ಕೊಹ್ಲಿ ಅವರ ಉಪಸ್ಥಿತಿಯು ತಂಡಕ್ಕೆ ಬಹಳ ಮುಖ್ಯವಾಗಿದೆ. ಹೀಗಾಗಿ ನನ್ನ ಪ್ರಕಾರ ಈಗಲೂ ಕೂಡ ಅವರೇ ನಮ್ಮ ತಂಡದ ಲೀಡರ್ ಎಂದು ರೋಹಿತ್ ಶರ್ಮಾ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಇದೀಗ ಸೀಮಿತ ಓವರ್​ಗಳ ನಾಯಕತ್ವ ಹೊರೆಯನ್ನು ವಿರಾಟ್ ಕೊಹ್ಲಿ ಕೆಳಗಿಳಿಸಿದ್ದು, ಹೀಗಾಗಿ ಮುಂಬರುವ ದಿನಗಳಲ್ಲಿ ಅವರಿಂದ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದಾಗಿದೆ.

ಎಲ್ಲಾ ರೀತಿಯಲ್ಲೂ ವಿರಾಟ್ ಕೊಹ್ಲಿ ಅವರ ಉಪಸ್ಥಿತಿಯು ತಂಡಕ್ಕೆ ಬಹಳ ಮುಖ್ಯವಾಗಿದೆ. ಹೀಗಾಗಿ ನನ್ನ ಪ್ರಕಾರ ಈಗಲೂ ಕೂಡ ಅವರೇ ನಮ್ಮ ತಂಡದ ಲೀಡರ್ ಎಂದು ರೋಹಿತ್ ಶರ್ಮಾ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಇದೀಗ ಸೀಮಿತ ಓವರ್​ಗಳ ನಾಯಕತ್ವ ಹೊರೆಯನ್ನು ವಿರಾಟ್ ಕೊಹ್ಲಿ ಕೆಳಗಿಳಿಸಿದ್ದು, ಹೀಗಾಗಿ ಮುಂಬರುವ ದಿನಗಳಲ್ಲಿ ಅವರಿಂದ ಭರ್ಜರಿ ಬ್ಯಾಟಿಂಗ್ ನಿರೀಕ್ಷಿಸಬಹುದಾಗಿದೆ.

4 / 6
ಏಕೆಂದರೆ ಏಕದಿನ ತಂಡದ ಜವಾಬ್ದಾರಿ ವಹಿಸಿಕೊಂಡ ನಂತರ ಕೊಹ್ಲಿ 21 ಶತಕ ಸೇರಿದಂತೆ 5449 ರನ್ ಗಳಿಸಿದ್ದಾರೆ. ಇದೀಗ ಯಾವುದೇ ಒತ್ತಡವಿಲ್ಲದೆ, ಮತ್ತಷ್ಟು ನಿರಾಯಾಸವಾಗಿ ಬ್ಯಾಟ್ ಬೀಸುವ ಆಯ್ಕೆ ವಿರಾಟ್ ಕೊಹ್ಲಿ ಮುಂದಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕೊಹ್ಲಿಯ ಅಬ್ಬರವನ್ನು ನಿರೀಕ್ಷಿಸಬಹುದು.

ಏಕೆಂದರೆ ಏಕದಿನ ತಂಡದ ಜವಾಬ್ದಾರಿ ವಹಿಸಿಕೊಂಡ ನಂತರ ಕೊಹ್ಲಿ 21 ಶತಕ ಸೇರಿದಂತೆ 5449 ರನ್ ಗಳಿಸಿದ್ದಾರೆ. ಇದೀಗ ಯಾವುದೇ ಒತ್ತಡವಿಲ್ಲದೆ, ಮತ್ತಷ್ಟು ನಿರಾಯಾಸವಾಗಿ ಬ್ಯಾಟ್ ಬೀಸುವ ಆಯ್ಕೆ ವಿರಾಟ್ ಕೊಹ್ಲಿ ಮುಂದಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕೊಹ್ಲಿಯ ಅಬ್ಬರವನ್ನು ನಿರೀಕ್ಷಿಸಬಹುದು.

5 / 6
ದಕ್ಷಿಣ ಆಫ್ರಿಕಾ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಆರಂಭದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್​ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕತ್ವದ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಆರಂಭದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್​ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಏಕದಿನ ತಂಡದ ನಾಯಕತ್ವದ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ.

6 / 6
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್