AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ

Virat Kohli - Avneet Kaur: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಈ ಸಜ್ಜಾಗುವಿಕೆಯ ನಡುವೆ ಕೊಹ್ಲಿ ಹೆಸರು ಅವನೀತ್ ಕೌರ್​ನೊಂದಿಗೆ ತಳುಕು ಹಾಕಿಕೊಂಡಿದೆ. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಕೂಡ ಸ್ಪಷ್ಟನೆ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: May 03, 2025 | 10:54 AM

Share
ಬಾಲಿವುಡ್ ನಟಿ ಅವನೀತ್ ಕೌರ್ (Avneet Kaur) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ವಿರಾಟ್ ಕೊಹ್ಲಿ (Virat Kohli). ಬೋಲ್ಡ್ ಫೋಟೋವೊಂದಕ್ಕೆ ಕಿಂಗ್ ಕೊಹ್ಲಿ ಲೈಕ್  ಒತ್ತಿದ್ದೇ ತಡ ಇನ್​ಸ್ಟಾಗ್ರಾಮ್​ನಲ್ಲಿ ಅವನೀತ್ ಕೌರ್ ಹೆಸರು ರಾರಾಜಿಸಲಾರಂಭಿಸಿದೆ.

ಬಾಲಿವುಡ್ ನಟಿ ಅವನೀತ್ ಕೌರ್ (Avneet Kaur) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ವಿರಾಟ್ ಕೊಹ್ಲಿ (Virat Kohli). ಬೋಲ್ಡ್ ಫೋಟೋವೊಂದಕ್ಕೆ ಕಿಂಗ್ ಕೊಹ್ಲಿ ಲೈಕ್  ಒತ್ತಿದ್ದೇ ತಡ ಇನ್​ಸ್ಟಾಗ್ರಾಮ್​ನಲ್ಲಿ ಅವನೀತ್ ಕೌರ್ ಹೆಸರು ರಾರಾಜಿಸಲಾರಂಭಿಸಿದೆ.

1 / 5
23 ವರ್ಷದ ಅವನೀತ್ ಕೌರ್ ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಲವು ಭಂಗಿಯ ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗೆ ವಿರಾಟ್ ಕೊಹ್ಲಿ ತನ್ನ ಅಧಿಕೃತ ಖಾತೆಯಿಂದ ಲೈಕ್ ಒತ್ತಿದ್ದಾರೆ. ಇದನ್ನು ಗಮನಿಸಿದ ಅಭಿಮಾನಿಗಳ ಅದರ ಸ್ಕ್ರೀನ್ ಶಾಟ್ ಅನ್ನು ವೈರಲ್ ಮಾಡಿದ್ದರು.

23 ವರ್ಷದ ಅವನೀತ್ ಕೌರ್ ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಲವು ಭಂಗಿಯ ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗೆ ವಿರಾಟ್ ಕೊಹ್ಲಿ ತನ್ನ ಅಧಿಕೃತ ಖಾತೆಯಿಂದ ಲೈಕ್ ಒತ್ತಿದ್ದಾರೆ. ಇದನ್ನು ಗಮನಿಸಿದ ಅಭಿಮಾನಿಗಳ ಅದರ ಸ್ಕ್ರೀನ್ ಶಾಟ್ ಅನ್ನು ವೈರಲ್ ಮಾಡಿದ್ದರು.

2 / 5
ವಿರಾಟ್ ಕೊಹ್ಲಿಯ ಲೈಕ್ ಬೀಳುತ್ತಿದ್ದಂತೆ ಅವನೀತ್ ಕೌರ್ ಕೂಡ ಸುದ್ದಿಯಾದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್, ಲೈಕ್ ಒತ್ತಲು ಹಿಂದೇಟು ಹಾಕುವ ಕೊಹ್ಲಿ, ಅವನೀತ್ ಅವರ ಬೋಲ್ಡ್ ಫೋಟೋಗೆ ಬೌಲ್ಡ್ ಆಗಿದ್ದಾರೆ ಎಂಬ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.

ವಿರಾಟ್ ಕೊಹ್ಲಿಯ ಲೈಕ್ ಬೀಳುತ್ತಿದ್ದಂತೆ ಅವನೀತ್ ಕೌರ್ ಕೂಡ ಸುದ್ದಿಯಾದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್, ಲೈಕ್ ಒತ್ತಲು ಹಿಂದೇಟು ಹಾಕುವ ಕೊಹ್ಲಿ, ಅವನೀತ್ ಅವರ ಬೋಲ್ಡ್ ಫೋಟೋಗೆ ಬೌಲ್ಡ್ ಆಗಿದ್ದಾರೆ ಎಂಬ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.

3 / 5
ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ನನ್ನ ಫೀಡ್ ಅನ್ನು ತೆರವುಗೊಳಿಸುವಾಗ, ಅಲ್ಗಾರಿದಮ್ ತಪ್ಪಿನಿಂದಾಗಿ ಅವನೀತ್ ಕೌರ್ ಅವರ ಫೋಟೋಗೆ ಲೈಕ್ ಒತ್ತಿರಬಹುದು. ಇದರ ಹಿಂದೆ ಯಾವುದೇ ಉದ್ದೇಶವಿರಲಿಲ್ಲ. ಯಾವುದೇ ಅನಗತ್ಯ ಊಹೆಗಳನ್ನು ಮಾಡದಂತೆ ನಾನು ವಿನಂತಿಸುತ್ತೇನೆ. ನೀವು ಅರ್ಥಮಾಡಿಕೊಂಡಿರುವುದಕ್ಕೆ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ನನ್ನ ಫೀಡ್ ಅನ್ನು ತೆರವುಗೊಳಿಸುವಾಗ, ಅಲ್ಗಾರಿದಮ್ ತಪ್ಪಿನಿಂದಾಗಿ ಅವನೀತ್ ಕೌರ್ ಅವರ ಫೋಟೋಗೆ ಲೈಕ್ ಒತ್ತಿರಬಹುದು. ಇದರ ಹಿಂದೆ ಯಾವುದೇ ಉದ್ದೇಶವಿರಲಿಲ್ಲ. ಯಾವುದೇ ಅನಗತ್ಯ ಊಹೆಗಳನ್ನು ಮಾಡದಂತೆ ನಾನು ವಿನಂತಿಸುತ್ತೇನೆ. ನೀವು ಅರ್ಥಮಾಡಿಕೊಂಡಿರುವುದಕ್ಕೆ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 5
ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಒತ್ತಿದ ಒಂದೇ ಒಂದು ಲೈಕ್​ನಿಂದಾಗಿ ಅವನೀತ್ ಕೌರ್ ಇದೀಗ ಸಖತ್ ಸುದ್ದಿಯಾಗಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಗೂಗಲ್​ನಲ್ಲಿ ಅವನೀತ್ ಬಗ್ಗೆ ಹುಡುಕಾಟ ಕೂಡ ಶುರುವಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಒಂದು ಲೈಕ್​ ಯುವ ನಟಿಯ ಭವಿಷ್ಯವನ್ನೇ ಬದಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಒತ್ತಿದ ಒಂದೇ ಒಂದು ಲೈಕ್​ನಿಂದಾಗಿ ಅವನೀತ್ ಕೌರ್ ಇದೀಗ ಸಖತ್ ಸುದ್ದಿಯಾಗಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಗೂಗಲ್​ನಲ್ಲಿ ಅವನೀತ್ ಬಗ್ಗೆ ಹುಡುಕಾಟ ಕೂಡ ಶುರುವಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಒಂದು ಲೈಕ್​ ಯುವ ನಟಿಯ ಭವಿಷ್ಯವನ್ನೇ ಬದಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!