AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ

Virat Kohli - Avneet Kaur: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಿಎಸ್​ಕೆ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಈ ಸಜ್ಜಾಗುವಿಕೆಯ ನಡುವೆ ಕೊಹ್ಲಿ ಹೆಸರು ಅವನೀತ್ ಕೌರ್​ನೊಂದಿಗೆ ತಳುಕು ಹಾಕಿಕೊಂಡಿದೆ. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಕೂಡ ಸ್ಪಷ್ಟನೆ ನೀಡಿದ್ದಾರೆ.

ಝಾಹಿರ್ ಯೂಸುಫ್
|

Updated on: May 03, 2025 | 10:54 AM

Share
ಬಾಲಿವುಡ್ ನಟಿ ಅವನೀತ್ ಕೌರ್ (Avneet Kaur) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ವಿರಾಟ್ ಕೊಹ್ಲಿ (Virat Kohli). ಬೋಲ್ಡ್ ಫೋಟೋವೊಂದಕ್ಕೆ ಕಿಂಗ್ ಕೊಹ್ಲಿ ಲೈಕ್  ಒತ್ತಿದ್ದೇ ತಡ ಇನ್​ಸ್ಟಾಗ್ರಾಮ್​ನಲ್ಲಿ ಅವನೀತ್ ಕೌರ್ ಹೆಸರು ರಾರಾಜಿಸಲಾರಂಭಿಸಿದೆ.

ಬಾಲಿವುಡ್ ನಟಿ ಅವನೀತ್ ಕೌರ್ (Avneet Kaur) ಅವರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಮುಖ್ಯ ಕಾರಣ ವಿರಾಟ್ ಕೊಹ್ಲಿ (Virat Kohli). ಬೋಲ್ಡ್ ಫೋಟೋವೊಂದಕ್ಕೆ ಕಿಂಗ್ ಕೊಹ್ಲಿ ಲೈಕ್  ಒತ್ತಿದ್ದೇ ತಡ ಇನ್​ಸ್ಟಾಗ್ರಾಮ್​ನಲ್ಲಿ ಅವನೀತ್ ಕೌರ್ ಹೆಸರು ರಾರಾಜಿಸಲಾರಂಭಿಸಿದೆ.

1 / 5
23 ವರ್ಷದ ಅವನೀತ್ ಕೌರ್ ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಲವು ಭಂಗಿಯ ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗೆ ವಿರಾಟ್ ಕೊಹ್ಲಿ ತನ್ನ ಅಧಿಕೃತ ಖಾತೆಯಿಂದ ಲೈಕ್ ಒತ್ತಿದ್ದಾರೆ. ಇದನ್ನು ಗಮನಿಸಿದ ಅಭಿಮಾನಿಗಳ ಅದರ ಸ್ಕ್ರೀನ್ ಶಾಟ್ ಅನ್ನು ವೈರಲ್ ಮಾಡಿದ್ದರು.

23 ವರ್ಷದ ಅವನೀತ್ ಕೌರ್ ಕೆಲ ದಿನಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಲವು ಭಂಗಿಯ ಹಾಟ್ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗೆ ವಿರಾಟ್ ಕೊಹ್ಲಿ ತನ್ನ ಅಧಿಕೃತ ಖಾತೆಯಿಂದ ಲೈಕ್ ಒತ್ತಿದ್ದಾರೆ. ಇದನ್ನು ಗಮನಿಸಿದ ಅಭಿಮಾನಿಗಳ ಅದರ ಸ್ಕ್ರೀನ್ ಶಾಟ್ ಅನ್ನು ವೈರಲ್ ಮಾಡಿದ್ದರು.

2 / 5
ವಿರಾಟ್ ಕೊಹ್ಲಿಯ ಲೈಕ್ ಬೀಳುತ್ತಿದ್ದಂತೆ ಅವನೀತ್ ಕೌರ್ ಕೂಡ ಸುದ್ದಿಯಾದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್, ಲೈಕ್ ಒತ್ತಲು ಹಿಂದೇಟು ಹಾಕುವ ಕೊಹ್ಲಿ, ಅವನೀತ್ ಅವರ ಬೋಲ್ಡ್ ಫೋಟೋಗೆ ಬೌಲ್ಡ್ ಆಗಿದ್ದಾರೆ ಎಂಬ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.

ವಿರಾಟ್ ಕೊಹ್ಲಿಯ ಲೈಕ್ ಬೀಳುತ್ತಿದ್ದಂತೆ ಅವನೀತ್ ಕೌರ್ ಕೂಡ ಸುದ್ದಿಯಾದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್, ಲೈಕ್ ಒತ್ತಲು ಹಿಂದೇಟು ಹಾಕುವ ಕೊಹ್ಲಿ, ಅವನೀತ್ ಅವರ ಬೋಲ್ಡ್ ಫೋಟೋಗೆ ಬೌಲ್ಡ್ ಆಗಿದ್ದಾರೆ ಎಂಬ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.

3 / 5
ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ನನ್ನ ಫೀಡ್ ಅನ್ನು ತೆರವುಗೊಳಿಸುವಾಗ, ಅಲ್ಗಾರಿದಮ್ ತಪ್ಪಿನಿಂದಾಗಿ ಅವನೀತ್ ಕೌರ್ ಅವರ ಫೋಟೋಗೆ ಲೈಕ್ ಒತ್ತಿರಬಹುದು. ಇದರ ಹಿಂದೆ ಯಾವುದೇ ಉದ್ದೇಶವಿರಲಿಲ್ಲ. ಯಾವುದೇ ಅನಗತ್ಯ ಊಹೆಗಳನ್ನು ಮಾಡದಂತೆ ನಾನು ವಿನಂತಿಸುತ್ತೇನೆ. ನೀವು ಅರ್ಥಮಾಡಿಕೊಂಡಿರುವುದಕ್ಕೆ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಸ್ಪಷ್ಟನೆಯನ್ನು ಸಹ ನೀಡಿದ್ದಾರೆ. ನನ್ನ ಫೀಡ್ ಅನ್ನು ತೆರವುಗೊಳಿಸುವಾಗ, ಅಲ್ಗಾರಿದಮ್ ತಪ್ಪಿನಿಂದಾಗಿ ಅವನೀತ್ ಕೌರ್ ಅವರ ಫೋಟೋಗೆ ಲೈಕ್ ಒತ್ತಿರಬಹುದು. ಇದರ ಹಿಂದೆ ಯಾವುದೇ ಉದ್ದೇಶವಿರಲಿಲ್ಲ. ಯಾವುದೇ ಅನಗತ್ಯ ಊಹೆಗಳನ್ನು ಮಾಡದಂತೆ ನಾನು ವಿನಂತಿಸುತ್ತೇನೆ. ನೀವು ಅರ್ಥಮಾಡಿಕೊಂಡಿರುವುದಕ್ಕೆ ಧನ್ಯವಾದಗಳು ಎಂದು ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 5
ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಒತ್ತಿದ ಒಂದೇ ಒಂದು ಲೈಕ್​ನಿಂದಾಗಿ ಅವನೀತ್ ಕೌರ್ ಇದೀಗ ಸಖತ್ ಸುದ್ದಿಯಾಗಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಗೂಗಲ್​ನಲ್ಲಿ ಅವನೀತ್ ಬಗ್ಗೆ ಹುಡುಕಾಟ ಕೂಡ ಶುರುವಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಒಂದು ಲೈಕ್​ ಯುವ ನಟಿಯ ಭವಿಷ್ಯವನ್ನೇ ಬದಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಒತ್ತಿದ ಒಂದೇ ಒಂದು ಲೈಕ್​ನಿಂದಾಗಿ ಅವನೀತ್ ಕೌರ್ ಇದೀಗ ಸಖತ್ ಸುದ್ದಿಯಾಗಿದ್ದಾರೆ. ಈ ಸುದ್ದಿ ಬೆನ್ನಲ್ಲೇ ಗೂಗಲ್​ನಲ್ಲಿ ಅವನೀತ್ ಬಗ್ಗೆ ಹುಡುಕಾಟ ಕೂಡ ಶುರುವಾಗಿದೆ. ಹೀಗಾಗಿ ಕಿಂಗ್ ಕೊಹ್ಲಿಯ ಒಂದು ಲೈಕ್​ ಯುವ ನಟಿಯ ಭವಿಷ್ಯವನ್ನೇ ಬದಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

5 / 5
Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು