AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯ ಸುದ್ದಿಯಿಲ್ಲ, ಅಯ್ಯರ್ ಔಟ್: ಇದು ಮುಂದಿನ 3 ಟೆಸ್ಟ್​ಗಳಿಗೆ ಭಾರತ ತಂಡದ ಅಪ್ಡೇಟ್

India Squad for 3rd Test vs England: ಆದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು ಪ್ರಕಟಿಸುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಕೆಲ ಮಹತ್ವದ ಬೆಳವಣಿಗೆಗಳು ನಡೆದಿವೆ. ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೊನೆಯ ಮೂರು ಟೆಸ್ಟ್‌ಗಳನ್ನು ಆಡುವುದಿಲ್ಲ ಎಂದು ಹೇಳಲಾಗಿದೆ.

Vinay Bhat
|

Updated on: Feb 10, 2024 | 7:40 AM

Share
ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್‌ ಪಂದ್ಯದ ದೊಡ್ಡ ಗೆಲುವಿನೊಂದಿಗೆ ಭಾರತ (India vs England) ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಫೆಬ್ರವರಿ 15 ಗುರುವಾರದಿಂದ ಶುರುವಾಗಲಿದೆ.

ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್‌ ಪಂದ್ಯದ ದೊಡ್ಡ ಗೆಲುವಿನೊಂದಿಗೆ ಭಾರತ (India vs England) ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಫೆಬ್ರವರಿ 15 ಗುರುವಾರದಿಂದ ಶುರುವಾಗಲಿದೆ.

1 / 8
ಆದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಹೆಸರಿಸಿಲ್ಲ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ತಂಡದ ಮ್ಯಾನೇಜ್‌ಮೆಂಟ್ ಶುಕ್ರವಾರ (ಫೆಬ್ರವರಿ 9) ಸಭೆ ಸೇರಿದ್ದು, ಆಟಗಾರರನ್ನು ಅಂತಿಮ ಮಾಡಿದೆ. ಇಂದು ತಂಡ ಪ್ರಕಟವಾಗುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಕೆಲ ಮಹತ್ವದ ಬೆಳವಣಿಗೆಗಳು ನಡೆದಿವೆ.

ಆದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನೂ ಹೆಸರಿಸಿಲ್ಲ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ತಂಡದ ಮ್ಯಾನೇಜ್‌ಮೆಂಟ್ ಶುಕ್ರವಾರ (ಫೆಬ್ರವರಿ 9) ಸಭೆ ಸೇರಿದ್ದು, ಆಟಗಾರರನ್ನು ಅಂತಿಮ ಮಾಡಿದೆ. ಇಂದು ತಂಡ ಪ್ರಕಟವಾಗುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಕೆಲ ಮಹತ್ವದ ಬೆಳವಣಿಗೆಗಳು ನಡೆದಿವೆ.

2 / 8
ವರದಿಗಳ ಪ್ರಕಾರ, ರವೀಂದ್ರ ಜಡೇಜಾ ಅವರ ಫಿಟ್‌ನೆಸ್ ಪರೀಕ್ಷೆಯಿಂದಾಗಿ ಬಿಸಿಸಿಐ ತಂಡವನ್ನು ಹೆಸರಿಸಲು ವಿಳಂಬ ಮಾಡುತ್ತಿದೆ. ಅಲ್ಲದೆ, ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೊನೆಯ ಮೂರು ಟೆಸ್ಟ್‌ಗಳನ್ನು ಆಡುವುದಿಲ್ಲ ಎಂದು ಹೇಳಲಾಗಿದೆ. ಆದರೆ ಕೆಎಲ್ ರಾಹುಲ್ ರಾಜ್‌ಕೋಟ್ ಟೆಸ್ಟ್‌ಗೆ ಮುಂಚಿತವಾಗಿ ತಂಡವನ್ನು ಮತ್ತೆ ಸೇರಿಕೊಳ್ಳುವ ಸಾಧ್ಯತೆಯಿದೆ.

ವರದಿಗಳ ಪ್ರಕಾರ, ರವೀಂದ್ರ ಜಡೇಜಾ ಅವರ ಫಿಟ್‌ನೆಸ್ ಪರೀಕ್ಷೆಯಿಂದಾಗಿ ಬಿಸಿಸಿಐ ತಂಡವನ್ನು ಹೆಸರಿಸಲು ವಿಳಂಬ ಮಾಡುತ್ತಿದೆ. ಅಲ್ಲದೆ, ಗಾಯದ ಕಾರಣ ಶ್ರೇಯಸ್ ಅಯ್ಯರ್ ಕೊನೆಯ ಮೂರು ಟೆಸ್ಟ್‌ಗಳನ್ನು ಆಡುವುದಿಲ್ಲ ಎಂದು ಹೇಳಲಾಗಿದೆ. ಆದರೆ ಕೆಎಲ್ ರಾಹುಲ್ ರಾಜ್‌ಕೋಟ್ ಟೆಸ್ಟ್‌ಗೆ ಮುಂಚಿತವಾಗಿ ತಂಡವನ್ನು ಮತ್ತೆ ಸೇರಿಕೊಳ್ಳುವ ಸಾಧ್ಯತೆಯಿದೆ.

3 / 8
ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲ್ಲಿದ್ದಾರೆ. ಅಯ್ಯರ್ ಬೆನ್ನು ನೋವಿನಿಂದಾಗಿ ಬ್ಯಾಟಿಂಗ್ ಮಾಡುವಾಗಲೂ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರಂತೆ. ಹೀಗಾಗಿ ಅವರು ಸರಣಿಯಲ್ಲಿ ಮುಂದುವರೆಯುವ ಸಾಧ್ಯತೆಗಳು ತೀರ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಟೆಸ್ಟ್​ನಲ್ಲಿ ಇವರ ಪ್ರದರ್ಶನ ಕೂಡ ಅಷ್ಟೊಂದು ಚೆನ್ನಾಗಿರಲಿಲ್ಲ.

ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲ್ಲಿದ್ದಾರೆ. ಅಯ್ಯರ್ ಬೆನ್ನು ನೋವಿನಿಂದಾಗಿ ಬ್ಯಾಟಿಂಗ್ ಮಾಡುವಾಗಲೂ ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರಂತೆ. ಹೀಗಾಗಿ ಅವರು ಸರಣಿಯಲ್ಲಿ ಮುಂದುವರೆಯುವ ಸಾಧ್ಯತೆಗಳು ತೀರ ಕಡಿಮೆ ಎಂದು ಹೇಳಲಾಗುತ್ತಿದೆ. ಈ ಟೆಸ್ಟ್​ನಲ್ಲಿ ಇವರ ಪ್ರದರ್ಶನ ಕೂಡ ಅಷ್ಟೊಂದು ಚೆನ್ನಾಗಿರಲಿಲ್ಲ.

4 / 8
ಭಾರತದ ಉಳಿದ ತಂಡವು ಈ ಹಿಂದೆ ಇದ್ದಂತೆ ಇರುತ್ತದೆ ಎಂದು ವರದಿಯು ಹೇಳಿಕೊಂಡಿದೆ. ಇದು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನೂ ಆಯ್ಕೆಗೆ ಲಭ್ಯವಿಲ್ಲ ಎಂದು ಸೂಚಿಸುತ್ತದೆ. ಬಿಸಿಸಿಐ ಹೇಳಿರುವಂತೆ "ವೈಯಕ್ತಿಕ ಕಾರಣಗಳಿಂದ" ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳನ್ನು ತಪ್ಪಿಸಿಕೊಂಡರು. ಆದರೆ, ಆ ಬಳಿಕ ಕೊಹ್ಲಿ ಬಿಸಿಸಿಐ ಅನ್ನು ಸಂಪರ್ಕಿಸಿಲ್ಲವಂತೆ.

ಭಾರತದ ಉಳಿದ ತಂಡವು ಈ ಹಿಂದೆ ಇದ್ದಂತೆ ಇರುತ್ತದೆ ಎಂದು ವರದಿಯು ಹೇಳಿಕೊಂಡಿದೆ. ಇದು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇನ್ನೂ ಆಯ್ಕೆಗೆ ಲಭ್ಯವಿಲ್ಲ ಎಂದು ಸೂಚಿಸುತ್ತದೆ. ಬಿಸಿಸಿಐ ಹೇಳಿರುವಂತೆ "ವೈಯಕ್ತಿಕ ಕಾರಣಗಳಿಂದ" ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳನ್ನು ತಪ್ಪಿಸಿಕೊಂಡರು. ಆದರೆ, ಆ ಬಳಿಕ ಕೊಹ್ಲಿ ಬಿಸಿಸಿಐ ಅನ್ನು ಸಂಪರ್ಕಿಸಿಲ್ಲವಂತೆ.

5 / 8
ಈ ಪಂದ್ಯಕ್ಕೆ ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯಬಹುದು ಎಂದು ವರದಿಗಳಿವೆ. ಆದರೆ, ಇತ್ತೀಚಿನ ವರದಿಯ ಪ್ರಕಾರ ಇದು ಸುಳ್ಳು ಸುದ್ದಿ ಎನ್ನಲಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ರೋಹಿತ್, ದ್ರಾವಿಡ್ ಮತ್ತು ಆಯ್ಕೆ ಸಮಿತಿ ವೇಗದ ಬೌಲರ್‌ಗೆ ವಿಶ್ರಾಂತಿ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಈ ಪಂದ್ಯಕ್ಕೆ ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯಬಹುದು ಎಂದು ವರದಿಗಳಿವೆ. ಆದರೆ, ಇತ್ತೀಚಿನ ವರದಿಯ ಪ್ರಕಾರ ಇದು ಸುಳ್ಳು ಸುದ್ದಿ ಎನ್ನಲಾಗಿದೆ. ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ರೋಹಿತ್, ದ್ರಾವಿಡ್ ಮತ್ತು ಆಯ್ಕೆ ಸಮಿತಿ ವೇಗದ ಬೌಲರ್‌ಗೆ ವಿಶ್ರಾಂತಿ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

6 / 8
ಹಿಂದಿನ ವರದಿಗಳ ಪ್ರಕಾರ, ಟೀಮ್ ಮ್ಯಾನೇಜ್‌ಮೆಂಟ್ ಬುಮ್ರಾಗೆ ವಿಶ್ರಾಂತಿ ನೀಡಲು ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಮೂರನೇ ಟೆಸ್ಟ್‌ನಲ್ಲಿ ಸೇರಿಸಲು ನಿರ್ಧರಿಸಿದೆ, ಬುಮ್ರಾ ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ 58 ಓವರ್‌ಗಳನ್ನು ಬೌಲಿಂಗ್ ಮಾಡಿದ್ದಾರೆ. ತನ್ನ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ, ಅವರು ಸರಣಿಯಲ್ಲಿ 15 ವಿಕೆಟ್ ಕಬಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಹಿಂದಿನ ವರದಿಗಳ ಪ್ರಕಾರ, ಟೀಮ್ ಮ್ಯಾನೇಜ್‌ಮೆಂಟ್ ಬುಮ್ರಾಗೆ ವಿಶ್ರಾಂತಿ ನೀಡಲು ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಮೂರನೇ ಟೆಸ್ಟ್‌ನಲ್ಲಿ ಸೇರಿಸಲು ನಿರ್ಧರಿಸಿದೆ, ಬುಮ್ರಾ ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ 58 ಓವರ್‌ಗಳನ್ನು ಬೌಲಿಂಗ್ ಮಾಡಿದ್ದಾರೆ. ತನ್ನ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ, ಅವರು ಸರಣಿಯಲ್ಲಿ 15 ವಿಕೆಟ್ ಕಬಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

7 / 8
ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಗಾಯದಿಂದಾಗಿ ಎರಡನೇ ಟೆಸ್ಟ್‌ನಿಂದ ಹೊರಗುಳಿದ ನಂತರ ಮರಳುವುದು ಬಹುತೇಕ ಖಚಿತ ಎನ್ನಲಾಗಿದೆ. ಜಡೇಜಾ ಚೇತರಿಕೆಗೆ ಕೊಂಚ ಸಮಯ ಬೇಕಾಗಬಹುದು ಎನ್ನಲಾಗಿತ್ತು. ಆದರೆ, 2ನೇ ಮತ್ತು 3ನೇ ಟೆಸ್ಟ್‌ನ ನಡುವೆ ಸುದೀರ್ಘ ಅಂತರವಿರುವುದರಿಂದ, ಆಲ್‌ರೌಂಡರ್ ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲಿದ್ದಾರಂತೆ.

ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಗಾಯದಿಂದಾಗಿ ಎರಡನೇ ಟೆಸ್ಟ್‌ನಿಂದ ಹೊರಗುಳಿದ ನಂತರ ಮರಳುವುದು ಬಹುತೇಕ ಖಚಿತ ಎನ್ನಲಾಗಿದೆ. ಜಡೇಜಾ ಚೇತರಿಕೆಗೆ ಕೊಂಚ ಸಮಯ ಬೇಕಾಗಬಹುದು ಎನ್ನಲಾಗಿತ್ತು. ಆದರೆ, 2ನೇ ಮತ್ತು 3ನೇ ಟೆಸ್ಟ್‌ನ ನಡುವೆ ಸುದೀರ್ಘ ಅಂತರವಿರುವುದರಿಂದ, ಆಲ್‌ರೌಂಡರ್ ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲಿದ್ದಾರಂತೆ.

8 / 8
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ