AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಈ ಬಾರಿಯಾದರೂ ಈಡೇರುತ್ತಾ ಕಿಂಗ್ ಕೊಹ್ಲಿಯ ಕನಸು..!

Virat Kohli: ವಿರಾಟ್ ಕೊಹ್ಲಿ 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಆದರೆ ಅವರ ಟಿ20 ವಿಶ್ವಕಪ್ ಕನಸು ಕನಸಾಗಿಯೇ ಉಳಿದಿದೆ. ಕಳೆದ 5 ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರುವ ವಿರಾಟ್ ಕೊಹ್ಲಿ ಒಮ್ಮೆಯೂ ಟ್ರೋಫಿಯನ್ನು ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಇದೀಗ 6ನೇ ಬಾರಿಯ ಪ್ರಯತ್ನದಲ್ಲಿ ವಿಶ್ವ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on:Jun 03, 2024 | 12:57 PM

Share
ಟಿ20 ವಿಶ್ವಕಪ್ ಶುರುವಾಗಿ 16 ವರ್ಷಗಳು ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಟೀಮ್ ಇಂಡಿಯಾ 8 ಟಿ20 ವಿಶ್ವಕಪ್​​ಗಳನ್ನು ಆಡಿದೆ. ಈ ಎಂಟು ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 5 ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಅವರಿಗೆ ಟ್ರೋಫಿಗೆ ಮುತ್ತಿಕ್ಕುವ ಭಾಗ್ಯ ಮಾತ್ರ ದೊರೆತಿಲ್ಲ.

ಟಿ20 ವಿಶ್ವಕಪ್ ಶುರುವಾಗಿ 16 ವರ್ಷಗಳು ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಟೀಮ್ ಇಂಡಿಯಾ 8 ಟಿ20 ವಿಶ್ವಕಪ್​​ಗಳನ್ನು ಆಡಿದೆ. ಈ ಎಂಟು ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 5 ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಅವರಿಗೆ ಟ್ರೋಫಿಗೆ ಮುತ್ತಿಕ್ಕುವ ಭಾಗ್ಯ ಮಾತ್ರ ದೊರೆತಿಲ್ಲ.

1 / 6
ಅಂದರೆ ಕಳೆದ 5 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದರೂ ಕಿಂಗ್ ಕೊಹ್ಲಿ ಒಮ್ಮೆಯೂ ಚಾಂಪಿಯನ್ಸ್ ತಂಡದ ಭಾಗವಾಗಿಲ್ಲ. 2012 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 185 ರನ್ ಬಾರಿಸಿದ್ದರು.

ಅಂದರೆ ಕಳೆದ 5 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದರೂ ಕಿಂಗ್ ಕೊಹ್ಲಿ ಒಮ್ಮೆಯೂ ಚಾಂಪಿಯನ್ಸ್ ತಂಡದ ಭಾಗವಾಗಿಲ್ಲ. 2012 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 185 ರನ್ ಬಾರಿಸಿದ್ದರು.

2 / 6
ಇನ್ನು 2014 ರ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್​ಗಳಿಂದ 319 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದರೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇದರಿಂದ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿರಾಟ್ ಕೊಹ್ಲಿಯ ಕನಸು ಕೂಡ ನುಚ್ಚು ನೂರಾಯಿತು.

ಇನ್ನು 2014 ರ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್​ಗಳಿಂದ 319 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದರೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇದರಿಂದ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿರಾಟ್ ಕೊಹ್ಲಿಯ ಕನಸು ಕೂಡ ನುಚ್ಚು ನೂರಾಯಿತು.

3 / 6
ಇದಾದ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 273 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಹೊರಬಿದ್ದಿತು. ಇನ್ನು 2021 ರಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಯಿತು.

ಇದಾದ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 273 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಹೊರಬಿದ್ದಿತು. ಇನ್ನು 2021 ರಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಯಿತು.

4 / 6
ಇನ್ನು 2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 6 ಇನಿಂಗ್ಸ್​ಗಳಿಂದ 296 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿತ್ತು.

ಇನ್ನು 2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 6 ಇನಿಂಗ್ಸ್​ಗಳಿಂದ 296 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿತ್ತು.

5 / 6
ಇದೀಗ ವಿರಾಟ್ ಕೊಹ್ಲಿ 6ನೇ ಬಾರಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಲ್ಲದೆ ಇದು ಅವರ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

ಇದೀಗ ವಿರಾಟ್ ಕೊಹ್ಲಿ 6ನೇ ಬಾರಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಲ್ಲದೆ ಇದು ಅವರ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 12:54 pm, Mon, 3 June 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?