Virat Kohli: ಈ ಬಾರಿಯಾದರೂ ಈಡೇರುತ್ತಾ ಕಿಂಗ್ ಕೊಹ್ಲಿಯ ಕನಸು..!

Virat Kohli: ವಿರಾಟ್ ಕೊಹ್ಲಿ 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಆದರೆ ಅವರ ಟಿ20 ವಿಶ್ವಕಪ್ ಕನಸು ಕನಸಾಗಿಯೇ ಉಳಿದಿದೆ. ಕಳೆದ 5 ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರುವ ವಿರಾಟ್ ಕೊಹ್ಲಿ ಒಮ್ಮೆಯೂ ಟ್ರೋಫಿಯನ್ನು ಎತ್ತಿ ಹಿಡಿಯಲು ಸಾಧ್ಯವಾಗಿಲ್ಲ. ಇದೀಗ 6ನೇ ಬಾರಿಯ ಪ್ರಯತ್ನದಲ್ಲಿ ವಿಶ್ವ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

|

Updated on:Jun 03, 2024 | 12:57 PM

ಟಿ20 ವಿಶ್ವಕಪ್ ಶುರುವಾಗಿ 16 ವರ್ಷಗಳು ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಟೀಮ್ ಇಂಡಿಯಾ 8 ಟಿ20 ವಿಶ್ವಕಪ್​​ಗಳನ್ನು ಆಡಿದೆ. ಈ ಎಂಟು ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 5 ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಅವರಿಗೆ ಟ್ರೋಫಿಗೆ ಮುತ್ತಿಕ್ಕುವ ಭಾಗ್ಯ ಮಾತ್ರ ದೊರೆತಿಲ್ಲ.

ಟಿ20 ವಿಶ್ವಕಪ್ ಶುರುವಾಗಿ 16 ವರ್ಷಗಳು ಕಳೆದಿವೆ. ಈ ಹದಿನಾರು ವರ್ಷಗಳಲ್ಲಿ ಟೀಮ್ ಇಂಡಿಯಾ 8 ಟಿ20 ವಿಶ್ವಕಪ್​​ಗಳನ್ನು ಆಡಿದೆ. ಈ ಎಂಟು ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 5 ಟೂರ್ನಿಗಳಲ್ಲಿ ಕಣಕ್ಕಿಳಿದಿದ್ದಾರೆ. ಇದಾಗ್ಯೂ ಅವರಿಗೆ ಟ್ರೋಫಿಗೆ ಮುತ್ತಿಕ್ಕುವ ಭಾಗ್ಯ ಮಾತ್ರ ದೊರೆತಿಲ್ಲ.

1 / 6
ಅಂದರೆ ಕಳೆದ 5 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದರೂ ಕಿಂಗ್ ಕೊಹ್ಲಿ ಒಮ್ಮೆಯೂ ಚಾಂಪಿಯನ್ಸ್ ತಂಡದ ಭಾಗವಾಗಿಲ್ಲ. 2012 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 185 ರನ್ ಬಾರಿಸಿದ್ದರು.

ಅಂದರೆ ಕಳೆದ 5 ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿದರೂ ಕಿಂಗ್ ಕೊಹ್ಲಿ ಒಮ್ಮೆಯೂ ಚಾಂಪಿಯನ್ಸ್ ತಂಡದ ಭಾಗವಾಗಿಲ್ಲ. 2012 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಆಡಿದ್ದ ಕೊಹ್ಲಿ 5 ಪಂದ್ಯಗಳಲ್ಲಿ 185 ರನ್ ಬಾರಿಸಿದ್ದರು.

2 / 6
ಇನ್ನು 2014 ರ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್​ಗಳಿಂದ 319 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದರೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇದರಿಂದ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿರಾಟ್ ಕೊಹ್ಲಿಯ ಕನಸು ಕೂಡ ನುಚ್ಚು ನೂರಾಯಿತು.

ಇನ್ನು 2014 ರ ಟಿ20 ವಿಶ್ವಕಪ್​ನಲ್ಲಿ 6 ಇನಿಂಗ್ಸ್​ಗಳಿಂದ 319 ರನ್ ಬಾರಿಸಿ ಅಬ್ಬರಿಸಿದ್ದರು. ಪರಿಣಾಮ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದರೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲನುಭವಿಸಿತು. ಇದರಿಂದ ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ವಿರಾಟ್ ಕೊಹ್ಲಿಯ ಕನಸು ಕೂಡ ನುಚ್ಚು ನೂರಾಯಿತು.

3 / 6
ಇದಾದ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 273 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಹೊರಬಿದ್ದಿತು. ಇನ್ನು 2021 ರಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಯಿತು.

ಇದಾದ ಬಳಿಕ 2016 ರಲ್ಲಿ ವಿರಾಟ್ ಕೊಹ್ಲಿ 6 ಪಂದ್ಯಗಳಲ್ಲಿ 273 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಸೋಲುವ ಮೂಲಕ ಟೀಮ್ ಇಂಡಿಯಾ ಹೊರಬಿದ್ದಿತು. ಇನ್ನು 2021 ರಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲೇ ಹೊರಬೀಳುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಯಿತು.

4 / 6
ಇನ್ನು 2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 6 ಇನಿಂಗ್ಸ್​ಗಳಿಂದ 296 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿತ್ತು.

ಇನ್ನು 2022 ರ ಟಿ20 ವಿಶ್ವಕಪ್​ನಲ್ಲಿ ವಿರಾಟ್ ಕೊಹ್ಲಿ 6 ಇನಿಂಗ್ಸ್​ಗಳಿಂದ 296 ರನ್ ಬಾರಿಸಿ ಮಿಂಚಿದ್ದರು. ಆದರೆ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಅಂತ್ಯಗೊಳಿಸಿತ್ತು.

5 / 6
ಇದೀಗ ವಿರಾಟ್ ಕೊಹ್ಲಿ 6ನೇ ಬಾರಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಲ್ಲದೆ ಇದು ಅವರ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

ಇದೀಗ ವಿರಾಟ್ ಕೊಹ್ಲಿ 6ನೇ ಬಾರಿ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಲ್ಲದೆ ಇದು ಅವರ ಕೊನೆಯ ಟಿ20 ವಿಶ್ವಕಪ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿಯಾದರೂ ವಿರಾಟ್ ಕೊಹ್ಲಿಯ ಟಿ20 ವಿಶ್ವಕಪ್ ಕನಸು ನನಸಾಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 12:54 pm, Mon, 3 June 24

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ